<p>ಮಾಲೂರು: ಸರ್ಕಾರದ ಅನುದಾನದಿಂದ ನಡೆಯುವ ಕಾಮಗಾರಿ ಬಗ್ಗೆ ಸಾರ್ವಜನಿಕರು ಗಮನ ಹರಿಸಿದಾಗ ಮಾತ್ರ ಹೆಚ್ಚಿನ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯ ಎಂದು ಶಾಸಕ ಎಸ್. ಎನ್. ಕೃಷ್ಣಯ್ಯಶೆಟ್ಟಿ ತಿಳಿಸಿದರು. <br /> <br /> ಮುಖ್ಯಮಂತ್ರಿ ಅನುದಾನದಡಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಹಿಂಬದಿ ರೂ. 37 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿಯನ್ನು ಸೋಮವಾರ ವೀಕ್ಷಿಸಿ, ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. <br /> <br /> ಸುಸಜ್ಜಿತವಾದ ತಾಲ್ಲೂಕು ಪಂಚಾಯಿತಿ ಕಚೇರಿ ಸೇರಿದಂತೆ ರೈತ ಸಭಾಂಗಣ, ಸಾರ್ವಜನಿಕರ ವಿಶ್ರಾಂತಿ ಕೊಠಡಿ ನಿರ್ಮಿಸಲಾಗುವುದು. ಚಂಬೆ ನಾರಾಯಣಸ್ವಾಮಿ ಗುತ್ತಿಗೆ ಕಾಮಗಾರಿ ವಹಿಸಿಕೊಂಡಿರುವುದರಿಂದ ಉತ್ತಮ ಗುಣಮಟ್ಟದಲ್ಲಿ ಕೆಲಸ ನಡೆಯುತ್ತಿದೆ ಎಂದು ತೃಪ್ತಿ ವ್ಯಕ್ತಪಡಿಸಿದರು. <br /> <br /> ತಾಲ್ಲೂಕು ಪಂಚಾಯಿತಿಗೆ ಸೇರಿದ ಕಟ್ಟಡದ ಪಕ್ಕದಲ್ಲೇ ಇರುವ ಸಾಯಿಬಾಬಾ ದೇಗುಲಕ್ಕೆ ಭಜನೆ ಮಂದಿರ ನಿರ್ಮಾಣಕ್ಕೆ 10 ಅಡಿ ಜಾಗವನ್ನು ನೀಡಿ, ಉಚಿತವಾಗಿ ಕಟ್ಟಡ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದರು. <br /> <br /> ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಜನೀಕಾಂತ್ ಮಲ್ಲಿ, ಸದಸ್ಯ ದೊಡ್ಡಿರಾಜಪ್ಪ, ಮುಖಂಡ ಎ.ಅಶ್ವಥರೆಡ್ಡಿ, ಗುತ್ತಿಗೆದಾರ ಚಂಬೆ ನಾರಾಯಣಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಲೂರು: ಸರ್ಕಾರದ ಅನುದಾನದಿಂದ ನಡೆಯುವ ಕಾಮಗಾರಿ ಬಗ್ಗೆ ಸಾರ್ವಜನಿಕರು ಗಮನ ಹರಿಸಿದಾಗ ಮಾತ್ರ ಹೆಚ್ಚಿನ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯ ಎಂದು ಶಾಸಕ ಎಸ್. ಎನ್. ಕೃಷ್ಣಯ್ಯಶೆಟ್ಟಿ ತಿಳಿಸಿದರು. <br /> <br /> ಮುಖ್ಯಮಂತ್ರಿ ಅನುದಾನದಡಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಹಿಂಬದಿ ರೂ. 37 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿಯನ್ನು ಸೋಮವಾರ ವೀಕ್ಷಿಸಿ, ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. <br /> <br /> ಸುಸಜ್ಜಿತವಾದ ತಾಲ್ಲೂಕು ಪಂಚಾಯಿತಿ ಕಚೇರಿ ಸೇರಿದಂತೆ ರೈತ ಸಭಾಂಗಣ, ಸಾರ್ವಜನಿಕರ ವಿಶ್ರಾಂತಿ ಕೊಠಡಿ ನಿರ್ಮಿಸಲಾಗುವುದು. ಚಂಬೆ ನಾರಾಯಣಸ್ವಾಮಿ ಗುತ್ತಿಗೆ ಕಾಮಗಾರಿ ವಹಿಸಿಕೊಂಡಿರುವುದರಿಂದ ಉತ್ತಮ ಗುಣಮಟ್ಟದಲ್ಲಿ ಕೆಲಸ ನಡೆಯುತ್ತಿದೆ ಎಂದು ತೃಪ್ತಿ ವ್ಯಕ್ತಪಡಿಸಿದರು. <br /> <br /> ತಾಲ್ಲೂಕು ಪಂಚಾಯಿತಿಗೆ ಸೇರಿದ ಕಟ್ಟಡದ ಪಕ್ಕದಲ್ಲೇ ಇರುವ ಸಾಯಿಬಾಬಾ ದೇಗುಲಕ್ಕೆ ಭಜನೆ ಮಂದಿರ ನಿರ್ಮಾಣಕ್ಕೆ 10 ಅಡಿ ಜಾಗವನ್ನು ನೀಡಿ, ಉಚಿತವಾಗಿ ಕಟ್ಟಡ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದರು. <br /> <br /> ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಜನೀಕಾಂತ್ ಮಲ್ಲಿ, ಸದಸ್ಯ ದೊಡ್ಡಿರಾಜಪ್ಪ, ಮುಖಂಡ ಎ.ಅಶ್ವಥರೆಡ್ಡಿ, ಗುತ್ತಿಗೆದಾರ ಚಂಬೆ ನಾರಾಯಣಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>