<p><strong>ಕೃಷ್ಣರಾಜಪೇಟೆ: </strong>ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯನನ್ನು ಪಟ್ಟಣದಲ್ಲಿ ಪೊಲೀಸರು ಭಾನುವಾರ ಬಂಧಿಸಿ, ಈತನಿಂದ 1.20 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. <br /> <br /> ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಊಪನಹಳ್ಳಿಯ ಅಜ್ಜೇಗೌಡ ಆಲಿಯಾಸ್ ರಿವಾಲ್ವಾರ್ ರಾಜ ಬಂಧಿತ. ಈತ ಕೆಲ ದಿನಗಳ ಹಿಂದೆ ಪಟ್ಟಣದ ಲಕ್ಷ್ಮಿನಾರಾಯಣಸ್ವಾಮಿ ದೇಗುಲ ಸಮೀಪ ತಾಲ್ಲೂಕು ಕಚೇರಿ ಸಿಬ್ಬಂದಿ ಮಂಜುಳಾ ಅವರ ಮನೆಯಿಂದ ಲಕ್ಷಾಂತರ ಮೌಲ್ಯದ ಒಡವೆ ದೋಚಿ ಪರಾರಿಯಾಗಿದ್ದ.<br /> <br /> ಪ್ರಕರಣ ಭೇದಿಸಿದ ಪೊಲೀಸರು ಬಂಧಿತನಿಂದ ಮಾಹಿತಿಯನ್ನು ಆಧರಿಸಿ ಚನ್ನರಾಯಪಟ್ಟಣದ ಗಿರವಿ ಅಂಗಡಿಯಲ್ಲಿದ್ದ ಚಿನ್ನಾಭರಣ, ಕೈಯಲ್ಲಿದ್ದ ಉಂಗುರಗಳನ್ನು ವಶಪಡಿಸಿಕೊಂಡಿದ್ದಾರೆ. <br /> <br /> <strong>ಅವಕ್ಕಾದ ಪೊಲೀಸರು:</strong> ರಿವಾಲ್ವಾರ್ ರಾಜನ ವೃತ್ತಾಂತವನ್ನು ತಿಳಿದು ಪೊಲೀಸರೇ ಅವಕ್ಕಾಗಿದ್ದಾರೆ. ಈತ ಈ ಹಿಂದೆ ವಿವಿಧ ರಾಜಕೀಯ ಪಕ್ಷಗಳ ಮುಖಂಡನಾಗಿ ಗುರುತಿಸಿಕೊಂಡಿದ್ದ. ತಾಲ್ಲೂಕು ಪಂಚಾಯಿತಿ, ಎಪಿಎಂಸಿ ಹಾಗೂ ಆಶ್ರಯ ಸಮಿತಿಯ ಮಾಜಿ ಸದಸ್ಯನೂ ಹೌದು. ಸಮಾಜದ ಗಣ್ಯ ವ್ಯಕ್ತಿಯ ಸೋಗಿನಲ್ಲಿ ಕಳವು ಮಾಡಿದ್ದಾನೆ. ಕಳ್ಳತನವನ್ನು ಕಸುಬು ಮಾಡಿಕೊಂಡಿರುವ ಈತ 10ಕ್ಕೂ ಹೆಚ್ಚು ಬಾರಿ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪೇಟೆ: </strong>ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯನನ್ನು ಪಟ್ಟಣದಲ್ಲಿ ಪೊಲೀಸರು ಭಾನುವಾರ ಬಂಧಿಸಿ, ಈತನಿಂದ 1.20 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. <br /> <br /> ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಊಪನಹಳ್ಳಿಯ ಅಜ್ಜೇಗೌಡ ಆಲಿಯಾಸ್ ರಿವಾಲ್ವಾರ್ ರಾಜ ಬಂಧಿತ. ಈತ ಕೆಲ ದಿನಗಳ ಹಿಂದೆ ಪಟ್ಟಣದ ಲಕ್ಷ್ಮಿನಾರಾಯಣಸ್ವಾಮಿ ದೇಗುಲ ಸಮೀಪ ತಾಲ್ಲೂಕು ಕಚೇರಿ ಸಿಬ್ಬಂದಿ ಮಂಜುಳಾ ಅವರ ಮನೆಯಿಂದ ಲಕ್ಷಾಂತರ ಮೌಲ್ಯದ ಒಡವೆ ದೋಚಿ ಪರಾರಿಯಾಗಿದ್ದ.<br /> <br /> ಪ್ರಕರಣ ಭೇದಿಸಿದ ಪೊಲೀಸರು ಬಂಧಿತನಿಂದ ಮಾಹಿತಿಯನ್ನು ಆಧರಿಸಿ ಚನ್ನರಾಯಪಟ್ಟಣದ ಗಿರವಿ ಅಂಗಡಿಯಲ್ಲಿದ್ದ ಚಿನ್ನಾಭರಣ, ಕೈಯಲ್ಲಿದ್ದ ಉಂಗುರಗಳನ್ನು ವಶಪಡಿಸಿಕೊಂಡಿದ್ದಾರೆ. <br /> <br /> <strong>ಅವಕ್ಕಾದ ಪೊಲೀಸರು:</strong> ರಿವಾಲ್ವಾರ್ ರಾಜನ ವೃತ್ತಾಂತವನ್ನು ತಿಳಿದು ಪೊಲೀಸರೇ ಅವಕ್ಕಾಗಿದ್ದಾರೆ. ಈತ ಈ ಹಿಂದೆ ವಿವಿಧ ರಾಜಕೀಯ ಪಕ್ಷಗಳ ಮುಖಂಡನಾಗಿ ಗುರುತಿಸಿಕೊಂಡಿದ್ದ. ತಾಲ್ಲೂಕು ಪಂಚಾಯಿತಿ, ಎಪಿಎಂಸಿ ಹಾಗೂ ಆಶ್ರಯ ಸಮಿತಿಯ ಮಾಜಿ ಸದಸ್ಯನೂ ಹೌದು. ಸಮಾಜದ ಗಣ್ಯ ವ್ಯಕ್ತಿಯ ಸೋಗಿನಲ್ಲಿ ಕಳವು ಮಾಡಿದ್ದಾನೆ. ಕಳ್ಳತನವನ್ನು ಕಸುಬು ಮಾಡಿಕೊಂಡಿರುವ ಈತ 10ಕ್ಕೂ ಹೆಚ್ಚು ಬಾರಿ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>