<p><strong>ವಿರಾಜಪೇ</strong>ಟೆ: ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ನಿರಂತರವಾಗಿ ನಡೆಯು ತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಒತ್ತಾಯಿಸಿ ಜಿಲ್ಲಾ ಸಾರ್ವಜನಿಕ ಹಿತ ರಕ್ಷಣಾ ಸಮಿತಿ ಸದಸ್ಯರು ಬುಧವಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. <br /> <br /> ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ಯಾವುದೇ ಕಡತಗಳು ವಿಲೇವಾರಿ ಯಾಗುತ್ತಿಲ್ಲ, ಇದರಿಂದ ಕಚೇರಿಗೆ ಬರುವ ಹಿಡುವಳಿದಾರರಿಗೆ ತೊಂದರೆಯಾಗುತ್ತಿದೆ. ಆರ್ಟಿಸಿಯನ್ನು ನಿಗದಿತ ಸಮಯದಲ್ಲಿ ವಿತರಣೆ ಮಾಡುತ್ತಿಲ್ಲ, ಸಿಬ್ಬಂದಿಯನ್ನು ಕೇಳಿದರೆ ಕಂಪ್ಯೂಟರ್ ದುರಸ್ತಿ ಎಂಬ ಸಬೂಬು ಹೇಳಿ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಕಚೇರಿ ಸಿಬ್ಬಂದಿಗೆ ಪರೋಕ್ಷವಾಗಿ ಹಣ ನೀಡಿದರೆ ತಕ್ಷಣ ಆರ್ಟಿಸಿ ದೊರೆಯುತ್ತಿದೆ ಎಂದು ದೂರಿದ ಸದಸ್ಯರು ತಹಶೀಲ್ದಾರ್ ಹನುಮಂತರಾಯಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. <br /> <br /> <strong>ತಹಶೀಲ್ದಾರ್ ಭರವಸೆ<br /> </strong>ತಹಶೀಲ್ದಾರ್ ಹನುಂತರಾಯಪ್ಪ ಮಾತನಾಡಿ `ತಾಲ್ಲೂಕು ಕಚೇರಿಯಲ್ಲಿ ಲಂಚ ಕೇಳುವ ಸಿಬ್ಬಂದಿಯನ್ನು ಪತ್ತೆ ಹಚ್ಚಿ ದೂರು ನೀಡಿದರೆ ಕ್ರಮ ಕೈಗೊಳ್ಳ ಲಾಗುವುದು. ಕಂಪ್ಯೂಟರ್ ದುರಸ್ತಿಯ ಸಮಸ್ಯೆಯಿಂದಾಗಿ ಆರ್ಟಿಸಿ ವಿತರಣೆ ವಿಳಂವಾಗುತ್ತಿದ್ದು, ಇದನ್ನು ತಿಂಗಳೊಳಗೆ ಸರಿಪಡಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಂಡರು. <br /> <br /> ಸಮಿತಿಯ ಜಿಲ್ಲಾ ಅಧ್ಯಕ್ಷ ಕಟ್ಟಿಮಂದಯ್ಯ, ತಾಲ್ಲೂಕು ಅಧ್ಯಕ್ಷ ಕೇಚಮಾಡ ಕುಶಾಲಪ್ಪ, ಜಿಲ್ಲಾ ಸಮಿತಿ ಕಾರ್ಯದರ್ಶಿ ಎ. ಹರೀಶ್, ಕೆ.ಎನ್.ಬೋಪಣ್ಣ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇ</strong>ಟೆ: ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ನಿರಂತರವಾಗಿ ನಡೆಯು ತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಒತ್ತಾಯಿಸಿ ಜಿಲ್ಲಾ ಸಾರ್ವಜನಿಕ ಹಿತ ರಕ್ಷಣಾ ಸಮಿತಿ ಸದಸ್ಯರು ಬುಧವಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. <br /> <br /> ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ಯಾವುದೇ ಕಡತಗಳು ವಿಲೇವಾರಿ ಯಾಗುತ್ತಿಲ್ಲ, ಇದರಿಂದ ಕಚೇರಿಗೆ ಬರುವ ಹಿಡುವಳಿದಾರರಿಗೆ ತೊಂದರೆಯಾಗುತ್ತಿದೆ. ಆರ್ಟಿಸಿಯನ್ನು ನಿಗದಿತ ಸಮಯದಲ್ಲಿ ವಿತರಣೆ ಮಾಡುತ್ತಿಲ್ಲ, ಸಿಬ್ಬಂದಿಯನ್ನು ಕೇಳಿದರೆ ಕಂಪ್ಯೂಟರ್ ದುರಸ್ತಿ ಎಂಬ ಸಬೂಬು ಹೇಳಿ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಕಚೇರಿ ಸಿಬ್ಬಂದಿಗೆ ಪರೋಕ್ಷವಾಗಿ ಹಣ ನೀಡಿದರೆ ತಕ್ಷಣ ಆರ್ಟಿಸಿ ದೊರೆಯುತ್ತಿದೆ ಎಂದು ದೂರಿದ ಸದಸ್ಯರು ತಹಶೀಲ್ದಾರ್ ಹನುಮಂತರಾಯಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. <br /> <br /> <strong>ತಹಶೀಲ್ದಾರ್ ಭರವಸೆ<br /> </strong>ತಹಶೀಲ್ದಾರ್ ಹನುಂತರಾಯಪ್ಪ ಮಾತನಾಡಿ `ತಾಲ್ಲೂಕು ಕಚೇರಿಯಲ್ಲಿ ಲಂಚ ಕೇಳುವ ಸಿಬ್ಬಂದಿಯನ್ನು ಪತ್ತೆ ಹಚ್ಚಿ ದೂರು ನೀಡಿದರೆ ಕ್ರಮ ಕೈಗೊಳ್ಳ ಲಾಗುವುದು. ಕಂಪ್ಯೂಟರ್ ದುರಸ್ತಿಯ ಸಮಸ್ಯೆಯಿಂದಾಗಿ ಆರ್ಟಿಸಿ ವಿತರಣೆ ವಿಳಂವಾಗುತ್ತಿದ್ದು, ಇದನ್ನು ತಿಂಗಳೊಳಗೆ ಸರಿಪಡಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಂಡರು. <br /> <br /> ಸಮಿತಿಯ ಜಿಲ್ಲಾ ಅಧ್ಯಕ್ಷ ಕಟ್ಟಿಮಂದಯ್ಯ, ತಾಲ್ಲೂಕು ಅಧ್ಯಕ್ಷ ಕೇಚಮಾಡ ಕುಶಾಲಪ್ಪ, ಜಿಲ್ಲಾ ಸಮಿತಿ ಕಾರ್ಯದರ್ಶಿ ಎ. ಹರೀಶ್, ಕೆ.ಎನ್.ಬೋಪಣ್ಣ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>