<p><strong>ತಿಪಟೂರು: </strong>ನಗರಸಭೆಯ 2012-13ನೇ ಸಾಲಿನ ಆಯುವ್ಯಯ ಸಿದ್ಧತೆಗೆ ಸಂಬಂಧಿಸಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀವ್ರಗತಿಯಲ್ಲಿ ಬೆಳೆಯುತ್ತಿರುವ ನಗರಕ್ಕೆ ತಕ್ಕಂತೆ ಮೂಲ ಸೌಲಭ್ಯವನ್ನು ಕ್ಷಿಪ್ರಗತಿಯಲ್ಲಿ ವಿಸ್ತರಿಸುವ ಸಲಹೆ ಕೇಳಿಬಂದವು.<br /> <br /> ನಗರಸಭೆ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ಪ್ರಕಾಶ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಶೇಖರ್ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೆಲ ಸದಸ್ಯರು ನಾಗರಿಕ ಸಂಬಂಧಿ ಸಮಸ್ಯೆ ಪರಿಹಾರಕ್ಕೆ ಬಜೆಟ್ನಲ್ಲಿ ಆದ್ಯತೆ ನೀಡಬೇಕು ಎಂದು ಕೋರಿದರು.<br /> <br /> ವಾರ್ಡ್ಗೊಂದು ಪ್ರತ್ಯೇಕ ಕೌಂಟರ್ ತೆರೆದು ನಾಗರಿಕರ ದೂರು-ದುಮ್ಮೋನ ಆಲಿಸಬೇಕು. ಕಂದಾಯ, ತೆರಿಗೆ ಮತ್ತಿತರ ಹಣ ಪಾವತಿಗೆ ಸಾರ್ವಜನಿಕರಿಗೆ ಅಲ್ಲಿಯೇ ಅನುಕೂಲ ಮಾಡಿಕೊಡಬೇಕು. ನಾಗರಿಕರು ನಗರಸಭೆಗೆ ಅಲೆಯುವುದನ್ನು ತಪ್ಪಿಸಲು ಎಲ್ಲ ಕೆಲಸಗಳು ಅವರ ವಾರ್ಡ್ನ ಕೌಂಟರ್ನಲ್ಲಿ ಆಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಸಲಹೆಗೆ ಬಹುತೇಕರು ಸಮ್ಮತಿಸಿದರು.<br /> <br /> ಕೋಳಿ ಮತ್ತು ಮಾಂಸದ ವ್ಯಾಪಾರಕ್ಕೆ ಸೂಕ್ತ ಸ್ಥಳ ನಿಗದಿ ಸಂಬಂಧ ಕಟ್ಟುನಿಟ್ಟು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು. ರಸ್ತೆ ಆಕ್ರಮಿಸಿ ವ್ಯಾಪಾರ ಮಾಡುವವರಿಂದ ಸಂಚಾರ ತೊಂದರೆ ಎದುರಾಗುತ್ತಿದ್ದು, ಈ ಸಂಬಂಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ನಗರದ ಜನರ ದೀಘ್ರ ಕಾಲದ ಬೇಡಿಕೆಯಾದ ಈಜು ಕೊಳ ನಿರ್ಮಾಣಕ್ಕೆ ಈ ಬಾರಿಯಾದರೂ ಆದ್ಯತೆ ನೀಡಬೇಕು ಎಂದು ಕೆಲವರು ಕೋರಿದರು.<br /> <br /> ಕಾಟಚಾರಕ್ಕೆ ಬಜೆಟ್ ಮಂಡಿಸದೆ ದೂರದೃಷ್ಟಿಯುಳ್ಳ ಯೋಜನೆ ಹಾಕಿಕೊಂಡು ಕಾರ್ಯಗತಗೊಳಿಸಲು ಪ್ರಯತ್ನಿಸಬೇಕು ಎಂಬ ಒತ್ತಾಯವೂ ಕೇಳಿಬಂತು. ಸಾರ್ವಜನಿಕರು ಮತ್ತು ಸಂಘ-ಸಂಸ್ಥೆ ಪದಾಧಿಕಾರಿಗಳ ಹಾಜರಿ ಕಡಿಮೆ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ನಗರಸಭೆಯ 2012-13ನೇ ಸಾಲಿನ ಆಯುವ್ಯಯ ಸಿದ್ಧತೆಗೆ ಸಂಬಂಧಿಸಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀವ್ರಗತಿಯಲ್ಲಿ ಬೆಳೆಯುತ್ತಿರುವ ನಗರಕ್ಕೆ ತಕ್ಕಂತೆ ಮೂಲ ಸೌಲಭ್ಯವನ್ನು ಕ್ಷಿಪ್ರಗತಿಯಲ್ಲಿ ವಿಸ್ತರಿಸುವ ಸಲಹೆ ಕೇಳಿಬಂದವು.<br /> <br /> ನಗರಸಭೆ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ಪ್ರಕಾಶ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಶೇಖರ್ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೆಲ ಸದಸ್ಯರು ನಾಗರಿಕ ಸಂಬಂಧಿ ಸಮಸ್ಯೆ ಪರಿಹಾರಕ್ಕೆ ಬಜೆಟ್ನಲ್ಲಿ ಆದ್ಯತೆ ನೀಡಬೇಕು ಎಂದು ಕೋರಿದರು.<br /> <br /> ವಾರ್ಡ್ಗೊಂದು ಪ್ರತ್ಯೇಕ ಕೌಂಟರ್ ತೆರೆದು ನಾಗರಿಕರ ದೂರು-ದುಮ್ಮೋನ ಆಲಿಸಬೇಕು. ಕಂದಾಯ, ತೆರಿಗೆ ಮತ್ತಿತರ ಹಣ ಪಾವತಿಗೆ ಸಾರ್ವಜನಿಕರಿಗೆ ಅಲ್ಲಿಯೇ ಅನುಕೂಲ ಮಾಡಿಕೊಡಬೇಕು. ನಾಗರಿಕರು ನಗರಸಭೆಗೆ ಅಲೆಯುವುದನ್ನು ತಪ್ಪಿಸಲು ಎಲ್ಲ ಕೆಲಸಗಳು ಅವರ ವಾರ್ಡ್ನ ಕೌಂಟರ್ನಲ್ಲಿ ಆಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಸಲಹೆಗೆ ಬಹುತೇಕರು ಸಮ್ಮತಿಸಿದರು.<br /> <br /> ಕೋಳಿ ಮತ್ತು ಮಾಂಸದ ವ್ಯಾಪಾರಕ್ಕೆ ಸೂಕ್ತ ಸ್ಥಳ ನಿಗದಿ ಸಂಬಂಧ ಕಟ್ಟುನಿಟ್ಟು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು. ರಸ್ತೆ ಆಕ್ರಮಿಸಿ ವ್ಯಾಪಾರ ಮಾಡುವವರಿಂದ ಸಂಚಾರ ತೊಂದರೆ ಎದುರಾಗುತ್ತಿದ್ದು, ಈ ಸಂಬಂಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ನಗರದ ಜನರ ದೀಘ್ರ ಕಾಲದ ಬೇಡಿಕೆಯಾದ ಈಜು ಕೊಳ ನಿರ್ಮಾಣಕ್ಕೆ ಈ ಬಾರಿಯಾದರೂ ಆದ್ಯತೆ ನೀಡಬೇಕು ಎಂದು ಕೆಲವರು ಕೋರಿದರು.<br /> <br /> ಕಾಟಚಾರಕ್ಕೆ ಬಜೆಟ್ ಮಂಡಿಸದೆ ದೂರದೃಷ್ಟಿಯುಳ್ಳ ಯೋಜನೆ ಹಾಕಿಕೊಂಡು ಕಾರ್ಯಗತಗೊಳಿಸಲು ಪ್ರಯತ್ನಿಸಬೇಕು ಎಂಬ ಒತ್ತಾಯವೂ ಕೇಳಿಬಂತು. ಸಾರ್ವಜನಿಕರು ಮತ್ತು ಸಂಘ-ಸಂಸ್ಥೆ ಪದಾಧಿಕಾರಿಗಳ ಹಾಜರಿ ಕಡಿಮೆ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>