<p>ಅಹ್ಮದಾಬಾದ್ (ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಮೂರು ದಿನಗಳ `ಸದ್ಭಾವನಾ~ ಉಪವಾಸಕ್ಕಾಗಿ ಮಾಡಿದ ವೆಚ್ಚದ ವಿವರಗಳನ್ನು ಒದಗಿಸುವಂತೆ ರಾಜ್ಯಪಾಲೆ ಕಮಲಾ ಬೇನಿವಾಲ್ ರಾಜ್ಯ ಸರ್ಕಾರವನ್ನು ಕೋರಿದ್ದಾರೆ.<br /> <br /> ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿದ್ದ ಮುಖ್ಯಮಂತ್ರಿ ಜತೆಗೆ ಈ ಮೂಲಕ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.<br /> <br /> ಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಜತೆ ಘರ್ಷಣೆಯಲ್ಲಿ ತೊಡಗಿದ್ದಾರೆಂಬ ಆರೋಪಕ್ಕೆ ಗುರಿಯಾಗಿದ್ದ ಬೇನಿವಾಲ್, ಮಹಾಗುಜರಾತ್ ಜನತಾ ಪಕ್ಷದ (ಎಂಜೆಪಿ) ಅಧ್ಯಕ್ಷ ಜದಾಫಿಯ ನೀಡಿದ ಮನವಿಯನ್ನು ಆಧರಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.<br /> <br /> ವೆಚ್ಚದ ವಿವರಗಳು ಮತ್ತು ಅದರ ಮಂಜೂರಾತಿಗಾಗಿ ಅನುಸರಿಸಿದ ಪ್ರಕ್ರಿಯೆಗಳ ವಿವರ ನೀಡಬೇಕು ಎಂದು ರಾಜ್ಯಪಾಲರು ಬಯಸಿದ್ದಾರೆ ಎಂದು ರಾಜ್ಯಪಾಲರ ಕಚೇರಿ ಮೂಲಗಳು ತಿಳಿಸಿವೆ.<br /> <br /> ಈ ಹಿಂದೆ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದು ನಂತರ ಬಿಜೆಪಿಯಿಂದ ಹೊರಬಂದು ಹೊಸ ಪಕ್ಷ ಎಂಜೆಪಿ ಕಟ್ಟಿದ ಜದಾಫಿಯ ಅವರು, ಉಪವಾಸ ಸತ್ಯಾಗ್ರಹಕ್ಕಾಗಿ ಸರ್ಕಾರವು ಸಾರ್ವಜನಿಕರ ಹಣವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು.<br /> <br /> ರಾಜ್ಯಪಾಲರು ತಮ್ಮ ಪ್ರಧಾನ ಕಾರ್ಯದರ್ಶಿ ಅರವಿಂದ್ ಜೋಶಿ ಅವರ ಮೂಲಕ ಸಾಮಾನ್ಯ ಆಡಳಿತ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್) ಈ ತಿಂಗಳ 22ರಂದು ಪತ್ರ ಬರೆಸಿದ್ದು ಜದಾಫಿಯ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.<br /> <br /> `ರಾಜ್ಯದಲ್ಲಿ ಶಾಂತಿ, ಏಕತೆ ಮತ್ತು ಸೌಹಾರ್ದತೆ~ಗಾಗಿ ಮೋದಿ ಈ ತಿಂಗಳ 17-19ರವರೆಗೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.<br /> <br /> ಜದಾಫಿಯ ಅವರೂ ಭಾನುವಾರದಿಂದ ಗಾಂಧಿನಗರದಲ್ಲಿ 51 ಗಂಟೆಗಳ `ಸಂವೇದನಾ~ ಉಪವಾಸ ಕೈಗೊಂಡಿದ್ದಾರೆ.<br /> <br /> ಮೋದಿ ಸರ್ಕಾರ ನಡೆಸಿದೆ ಎನ್ನಲಾದ ಭಾರಿ ಭ್ರಷ್ಟಾಚಾರದ ಆರೋಪದ ಬಗ್ಗೆ ಲೋಕಾಯುಕ್ತರಿಂದ ತನಿಖೆ ನಡೆಸಬೇಕು ಮತ್ತು ಮೋದಿ ಸರ್ಕಾರ ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂಬ ಆರೋಪದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಉಪವಾಸ ಕೈಗೊಂಡಿರುವುದಾಗಿ ಜದಾಫಿಯ ಹೇಳಿಕೊಂಡಿದ್ದಾರೆ.<br /> <br /> ರಾಜಭವನದ ಮೂಲಕ ತಮ್ಮ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ ಎಂದು ಮೋದಿ ಭಾನುವಾರ ಆರೋಪಿಸಿದ್ದರು ಅಲ್ಲದೆ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು.<br /> <br /> ಈ ಹಿಂದೆಯೂ ಮೋದಿ, ರಾಜ್ಯ ಲೋಕಾಯುಕ್ತ ನೇಮಕ ವಿವಾದದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಾಪಸಿಗೆ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಹ್ಮದಾಬಾದ್ (ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಮೂರು ದಿನಗಳ `ಸದ್ಭಾವನಾ~ ಉಪವಾಸಕ್ಕಾಗಿ ಮಾಡಿದ ವೆಚ್ಚದ ವಿವರಗಳನ್ನು ಒದಗಿಸುವಂತೆ ರಾಜ್ಯಪಾಲೆ ಕಮಲಾ ಬೇನಿವಾಲ್ ರಾಜ್ಯ ಸರ್ಕಾರವನ್ನು ಕೋರಿದ್ದಾರೆ.<br /> <br /> ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿದ್ದ ಮುಖ್ಯಮಂತ್ರಿ ಜತೆಗೆ ಈ ಮೂಲಕ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.<br /> <br /> ಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಜತೆ ಘರ್ಷಣೆಯಲ್ಲಿ ತೊಡಗಿದ್ದಾರೆಂಬ ಆರೋಪಕ್ಕೆ ಗುರಿಯಾಗಿದ್ದ ಬೇನಿವಾಲ್, ಮಹಾಗುಜರಾತ್ ಜನತಾ ಪಕ್ಷದ (ಎಂಜೆಪಿ) ಅಧ್ಯಕ್ಷ ಜದಾಫಿಯ ನೀಡಿದ ಮನವಿಯನ್ನು ಆಧರಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.<br /> <br /> ವೆಚ್ಚದ ವಿವರಗಳು ಮತ್ತು ಅದರ ಮಂಜೂರಾತಿಗಾಗಿ ಅನುಸರಿಸಿದ ಪ್ರಕ್ರಿಯೆಗಳ ವಿವರ ನೀಡಬೇಕು ಎಂದು ರಾಜ್ಯಪಾಲರು ಬಯಸಿದ್ದಾರೆ ಎಂದು ರಾಜ್ಯಪಾಲರ ಕಚೇರಿ ಮೂಲಗಳು ತಿಳಿಸಿವೆ.<br /> <br /> ಈ ಹಿಂದೆ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದು ನಂತರ ಬಿಜೆಪಿಯಿಂದ ಹೊರಬಂದು ಹೊಸ ಪಕ್ಷ ಎಂಜೆಪಿ ಕಟ್ಟಿದ ಜದಾಫಿಯ ಅವರು, ಉಪವಾಸ ಸತ್ಯಾಗ್ರಹಕ್ಕಾಗಿ ಸರ್ಕಾರವು ಸಾರ್ವಜನಿಕರ ಹಣವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು.<br /> <br /> ರಾಜ್ಯಪಾಲರು ತಮ್ಮ ಪ್ರಧಾನ ಕಾರ್ಯದರ್ಶಿ ಅರವಿಂದ್ ಜೋಶಿ ಅವರ ಮೂಲಕ ಸಾಮಾನ್ಯ ಆಡಳಿತ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್) ಈ ತಿಂಗಳ 22ರಂದು ಪತ್ರ ಬರೆಸಿದ್ದು ಜದಾಫಿಯ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.<br /> <br /> `ರಾಜ್ಯದಲ್ಲಿ ಶಾಂತಿ, ಏಕತೆ ಮತ್ತು ಸೌಹಾರ್ದತೆ~ಗಾಗಿ ಮೋದಿ ಈ ತಿಂಗಳ 17-19ರವರೆಗೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.<br /> <br /> ಜದಾಫಿಯ ಅವರೂ ಭಾನುವಾರದಿಂದ ಗಾಂಧಿನಗರದಲ್ಲಿ 51 ಗಂಟೆಗಳ `ಸಂವೇದನಾ~ ಉಪವಾಸ ಕೈಗೊಂಡಿದ್ದಾರೆ.<br /> <br /> ಮೋದಿ ಸರ್ಕಾರ ನಡೆಸಿದೆ ಎನ್ನಲಾದ ಭಾರಿ ಭ್ರಷ್ಟಾಚಾರದ ಆರೋಪದ ಬಗ್ಗೆ ಲೋಕಾಯುಕ್ತರಿಂದ ತನಿಖೆ ನಡೆಸಬೇಕು ಮತ್ತು ಮೋದಿ ಸರ್ಕಾರ ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂಬ ಆರೋಪದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಉಪವಾಸ ಕೈಗೊಂಡಿರುವುದಾಗಿ ಜದಾಫಿಯ ಹೇಳಿಕೊಂಡಿದ್ದಾರೆ.<br /> <br /> ರಾಜಭವನದ ಮೂಲಕ ತಮ್ಮ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ ಎಂದು ಮೋದಿ ಭಾನುವಾರ ಆರೋಪಿಸಿದ್ದರು ಅಲ್ಲದೆ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು.<br /> <br /> ಈ ಹಿಂದೆಯೂ ಮೋದಿ, ರಾಜ್ಯ ಲೋಕಾಯುಕ್ತ ನೇಮಕ ವಿವಾದದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಾಪಸಿಗೆ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>