<p><strong>ಢಾಕಾ, (ಪಿಟಿಐ): </strong>ತೀಸ್ತಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ದೇಶವು ಭಾರತದ ಜತೆ ಶೀಘ್ರ ಒಪ್ಪಂದ ಮಾಡಿಕೊಳ್ಳಲಿದೆ ಎಂದು ತಿಳಿಸಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸಿನಾ ಅವರು, ಒಪ್ಪಂದಕ್ಕೆ ಯಾವಾಗ ಸಹಿ ಹಾಕಲಾಗುತ್ತದೆ ಎಂಬುದನ್ನು ತಿಳಿಸಿಲ್ಲ.<br /> <br /> ನಿರ್ದಿಷ್ಟ ದಿನಾಂಕವನ್ನು ಹೇಳಲು ಸಾಧ್ಯವಿಲ್ಲ. ಆದರೆ ಶೀಘ್ರದಲ್ಲಿ ನಾವು ಒಪ್ಪಂದಕ್ಕೆ ಸಹಿ ಹಾಕುತ್ತೇವೆ ಎಂದು ಅವರು ಅವಾಮಿ ಪಕ್ಷದ ಪ್ರಮುಖ ಮುಖಂಡರಿಗೆ ತಿಳಿಸಿದ್ದಾರೆ.<br /> <br /> ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರು ಇತ್ತೀಚೆಗೆ ಢಾಕಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಒಪ್ಪಂದಕ್ಕೆ ಸಹಿ ಹಾಕುವ ಅವಕಾಶವಿತ್ತು. ಈ ಅವಕಾಶ ತಪ್ಪಿಹೋದ ಬಗ್ಗೆ ದೇಶದ ಜನತೆಗೆ ಬೇಸರವಿದೆ. ಆದರೆ ಹತಾಶರಾಗಬೇಕಿಲ್ಲ ಎಂದು ತಿಳಿಸಿದ್ದಾರೆ.<br /> <br /> ತೀಸ್ತಾ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಎಲ್ಲಾ ಷರತ್ತುಗಳ ಬಗ್ಗೆ ಒಮ್ಮತ ಮೂಡಿತ್ತು. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದಕ್ಕೆ ಒಪ್ಪದ ಕಾರಣ ಒಪ್ಪಂದಕ್ಕೆ ಸಹಿ ಹಾಕುವ ದಿನಾಂಕ ಮುಂದಕ್ಕೆ ಹೋಗಿದೆ ಎಂದು ಪ್ರಧಾನಿ ಸಿಂಗ್ ತಿಳಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ, (ಪಿಟಿಐ): </strong>ತೀಸ್ತಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ದೇಶವು ಭಾರತದ ಜತೆ ಶೀಘ್ರ ಒಪ್ಪಂದ ಮಾಡಿಕೊಳ್ಳಲಿದೆ ಎಂದು ತಿಳಿಸಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸಿನಾ ಅವರು, ಒಪ್ಪಂದಕ್ಕೆ ಯಾವಾಗ ಸಹಿ ಹಾಕಲಾಗುತ್ತದೆ ಎಂಬುದನ್ನು ತಿಳಿಸಿಲ್ಲ.<br /> <br /> ನಿರ್ದಿಷ್ಟ ದಿನಾಂಕವನ್ನು ಹೇಳಲು ಸಾಧ್ಯವಿಲ್ಲ. ಆದರೆ ಶೀಘ್ರದಲ್ಲಿ ನಾವು ಒಪ್ಪಂದಕ್ಕೆ ಸಹಿ ಹಾಕುತ್ತೇವೆ ಎಂದು ಅವರು ಅವಾಮಿ ಪಕ್ಷದ ಪ್ರಮುಖ ಮುಖಂಡರಿಗೆ ತಿಳಿಸಿದ್ದಾರೆ.<br /> <br /> ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರು ಇತ್ತೀಚೆಗೆ ಢಾಕಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಒಪ್ಪಂದಕ್ಕೆ ಸಹಿ ಹಾಕುವ ಅವಕಾಶವಿತ್ತು. ಈ ಅವಕಾಶ ತಪ್ಪಿಹೋದ ಬಗ್ಗೆ ದೇಶದ ಜನತೆಗೆ ಬೇಸರವಿದೆ. ಆದರೆ ಹತಾಶರಾಗಬೇಕಿಲ್ಲ ಎಂದು ತಿಳಿಸಿದ್ದಾರೆ.<br /> <br /> ತೀಸ್ತಾ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಎಲ್ಲಾ ಷರತ್ತುಗಳ ಬಗ್ಗೆ ಒಮ್ಮತ ಮೂಡಿತ್ತು. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದಕ್ಕೆ ಒಪ್ಪದ ಕಾರಣ ಒಪ್ಪಂದಕ್ಕೆ ಸಹಿ ಹಾಕುವ ದಿನಾಂಕ ಮುಂದಕ್ಕೆ ಹೋಗಿದೆ ಎಂದು ಪ್ರಧಾನಿ ಸಿಂಗ್ ತಿಳಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>