<p><strong>ಹರಪನಹಳ್ಳಿ: </strong>ಮಲೆನಾಡಿನ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭದ್ರಾ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ತುಂಗಭದ್ರಾ ನದಿಗೆ ಬಿಟ್ಟಿರುವುದರಿಂದ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ತಾಲ್ಲೂಕಿನ ನಾಲ್ಕು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. <br /> <br /> ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ತುಂಗಭದ್ರಾ ನದಿಗೆ ಹರಿಬಿಟ್ಟಿರುವುದರಿಂದ ನದಿ ಉಕ್ಕಿ ಭೋರ್ಗರೆಯುತ್ತಿದೆ. ಶುಕ್ರವಾರ ಸಂಜೆಯಿಂದಲೇ ನದಿಪಾತ್ರದ ಕೆಲ ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ನದಿಪಾತ್ರದ ಹಲುವಾಗಲು- ಗರ್ಭಗುಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ನದಿಯ ನೀರು ಹರಡಿಕೊಂಡಿದೆ. <br /> <br /> ಜತೆಗೆ, ನಿಟ್ಟೂರು-ನಂದ್ಯಾಲ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆಯೂ ನದಿಯ ನೀರು ಚಾಚಿಕೊಂಡಿರುವುದರಿಂದ ನಾಲ್ಕು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಗರ್ಭಗುಡಿ ಗ್ರಾಮದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಹತ್ತಾರು ಕಿ.ಮೀ. ಸುತ್ತಿ ಮನೆ ತಲುಪಿದ್ದಾರೆ.<br /> <br /> ಶನಿವಾರವೂ ನೀರಿನ ಹರಿವಿನ ಪ್ರಮಾಣದಲ್ಲಿ ಹೆಚ್ಚಳ ಮುಂದುವರಿದರೆ, ನದಿಪಾತ್ರದ ಹಳ್ಳಿಗಳಾದ ಹಲುವಾಗಲು, ನಿಟ್ಟೂರು, ನಂದ್ಯಾಲ, ಕಡತಿ ಹಾಗೂ ವಟ್ಲಹಳ್ಳಿ ಸೇರಿದಂತೆ ಕೆಲ ಗ್ರಾಮಗಳ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.<br /> <br /> ತಾವರಗುಂದಿ, ನಿಟ್ಟೂರು, ಕಡತಿ, ವಟ್ಲಹಳ್ಳಿ, ಹಲುವಾಗಲು, ಗರ್ಭಗುಡಿ ಸೇರಿದಂತೆ ನದಿಪಾತ್ರದ ಜಮೀನುಗಳಲ್ಲಿ ನಾಟಿ ಮಾಡಿದ್ದ ನೂರಾರು ಎಕರೆಯಲ್ಲಿನ ಬತ್ತ ಜಲಾವೃತಗೊಂಡಿದೆ. <br /> <strong><br /> ಪರಿಶೀಲನೆ</strong><br /> ಶನಿವಾರ ತಹಶೀಲ್ದಾರ್ ಡಾ.ವಿ. ವೆಂಕಟೇಶ್ಮೂರ್ತಿ ಹಾಗೂ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಆರ್. ತಿಪ್ಪೇಸ್ವಾಮಿ ಹಾಗೂ ಅಧಿಕಾರಿಗಳ ತಂಡ ಶನಿವಾರ ನದಿಪಾತ್ರದ ಹಳ್ಳಿಗಳಿಗೆ ಭೇಟಿ ನೀಡಿದ್ದು, ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು. <br /> <br /> <strong>ನಡೆಯದ ಪರಿಶೀಲನೆ<br /> ಮಲೇಬೆನ್ನೂರು:</strong> ಹೋಬಳಿ ವ್ಯಾಪ್ತಿಯಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ ಪ್ರವಾಹದಲ್ಲಿ ಶನಿವಾರ ಒಂದು ಅಡಿ ಇಳಿಮುಖ ಆಗಿದ್ದು, ಜಲಾವೃತವಾಗಿದ್ದ ಬತ್ತದ ಗದ್ದೆ ತೋಟಗಳಲ್ಲಿ ನೀರು ಇಳಿಯತೊಡಗಿದೆ.<br /> ನದಿದಂಡೆಯ ಗೋವಿನಹಾಳು, ನಂದಿಗುಡಿ, ಕೆಲವು ಜಮೀನುಗಳಲ್ಲಿ ಕೆಸರು ತುಂಬಿದೆ.<br /> <br /> ಉಕ್ಕಡಗಾತ್ರಿಯ ನದಿಪಾತ್ರದ ಸೊಪ್ಪಿನ ತೋಟಗಳಿಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಪಂಪ್ಮನೆ ಮುಳುಗಿವೆ. ಪಂಪ್ಸೆಟ್. ಕೇಬಲ್,ಪೈಪ್ಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಈವರೆಗೂ ನಷ್ಟದ ಅಂದಾಜು ಹಾಗೂ ಪರಿಶೀಲನೆ ಮಾಡಲು ಹಿರಿಯ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. <br /> <br /> <strong>ತಹಶೀಲ್ದಾರ್ ಹೇಳಿಕೆ: </strong> ಕಳೆದ ಬಾರಿಯಂತೆ ತಂಗಭದ್ರಾ ನದಿ ಪ್ರವಾಹದ ನೀರು ನುಗ್ಗಿದೆ ಎಂದು ತಿಳಿದು ಬಂದಿದೆ. ಬೆಳೆಹಾನಿ ಪರಿಶೀಲನೆ ನಡೆಸಲು ಭಾನುವಾರ ನದಿಪಾತ್ರದ ಗ್ರಾಮಗಳಿಗೆ ಭೇಟಿ ನೀಡುವುದಾಗಿ ತಹಶೀಲ್ದಾರ್ ನಜ್ಮಾ ತಿಳಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ: </strong>ಮಲೆನಾಡಿನ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭದ್ರಾ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ತುಂಗಭದ್ರಾ ನದಿಗೆ ಬಿಟ್ಟಿರುವುದರಿಂದ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ತಾಲ್ಲೂಕಿನ ನಾಲ್ಕು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. <br /> <br /> ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ತುಂಗಭದ್ರಾ ನದಿಗೆ ಹರಿಬಿಟ್ಟಿರುವುದರಿಂದ ನದಿ ಉಕ್ಕಿ ಭೋರ್ಗರೆಯುತ್ತಿದೆ. ಶುಕ್ರವಾರ ಸಂಜೆಯಿಂದಲೇ ನದಿಪಾತ್ರದ ಕೆಲ ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ನದಿಪಾತ್ರದ ಹಲುವಾಗಲು- ಗರ್ಭಗುಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ನದಿಯ ನೀರು ಹರಡಿಕೊಂಡಿದೆ. <br /> <br /> ಜತೆಗೆ, ನಿಟ್ಟೂರು-ನಂದ್ಯಾಲ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆಯೂ ನದಿಯ ನೀರು ಚಾಚಿಕೊಂಡಿರುವುದರಿಂದ ನಾಲ್ಕು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಗರ್ಭಗುಡಿ ಗ್ರಾಮದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಹತ್ತಾರು ಕಿ.ಮೀ. ಸುತ್ತಿ ಮನೆ ತಲುಪಿದ್ದಾರೆ.<br /> <br /> ಶನಿವಾರವೂ ನೀರಿನ ಹರಿವಿನ ಪ್ರಮಾಣದಲ್ಲಿ ಹೆಚ್ಚಳ ಮುಂದುವರಿದರೆ, ನದಿಪಾತ್ರದ ಹಳ್ಳಿಗಳಾದ ಹಲುವಾಗಲು, ನಿಟ್ಟೂರು, ನಂದ್ಯಾಲ, ಕಡತಿ ಹಾಗೂ ವಟ್ಲಹಳ್ಳಿ ಸೇರಿದಂತೆ ಕೆಲ ಗ್ರಾಮಗಳ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.<br /> <br /> ತಾವರಗುಂದಿ, ನಿಟ್ಟೂರು, ಕಡತಿ, ವಟ್ಲಹಳ್ಳಿ, ಹಲುವಾಗಲು, ಗರ್ಭಗುಡಿ ಸೇರಿದಂತೆ ನದಿಪಾತ್ರದ ಜಮೀನುಗಳಲ್ಲಿ ನಾಟಿ ಮಾಡಿದ್ದ ನೂರಾರು ಎಕರೆಯಲ್ಲಿನ ಬತ್ತ ಜಲಾವೃತಗೊಂಡಿದೆ. <br /> <strong><br /> ಪರಿಶೀಲನೆ</strong><br /> ಶನಿವಾರ ತಹಶೀಲ್ದಾರ್ ಡಾ.ವಿ. ವೆಂಕಟೇಶ್ಮೂರ್ತಿ ಹಾಗೂ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಆರ್. ತಿಪ್ಪೇಸ್ವಾಮಿ ಹಾಗೂ ಅಧಿಕಾರಿಗಳ ತಂಡ ಶನಿವಾರ ನದಿಪಾತ್ರದ ಹಳ್ಳಿಗಳಿಗೆ ಭೇಟಿ ನೀಡಿದ್ದು, ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು. <br /> <br /> <strong>ನಡೆಯದ ಪರಿಶೀಲನೆ<br /> ಮಲೇಬೆನ್ನೂರು:</strong> ಹೋಬಳಿ ವ್ಯಾಪ್ತಿಯಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ ಪ್ರವಾಹದಲ್ಲಿ ಶನಿವಾರ ಒಂದು ಅಡಿ ಇಳಿಮುಖ ಆಗಿದ್ದು, ಜಲಾವೃತವಾಗಿದ್ದ ಬತ್ತದ ಗದ್ದೆ ತೋಟಗಳಲ್ಲಿ ನೀರು ಇಳಿಯತೊಡಗಿದೆ.<br /> ನದಿದಂಡೆಯ ಗೋವಿನಹಾಳು, ನಂದಿಗುಡಿ, ಕೆಲವು ಜಮೀನುಗಳಲ್ಲಿ ಕೆಸರು ತುಂಬಿದೆ.<br /> <br /> ಉಕ್ಕಡಗಾತ್ರಿಯ ನದಿಪಾತ್ರದ ಸೊಪ್ಪಿನ ತೋಟಗಳಿಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಪಂಪ್ಮನೆ ಮುಳುಗಿವೆ. ಪಂಪ್ಸೆಟ್. ಕೇಬಲ್,ಪೈಪ್ಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಈವರೆಗೂ ನಷ್ಟದ ಅಂದಾಜು ಹಾಗೂ ಪರಿಶೀಲನೆ ಮಾಡಲು ಹಿರಿಯ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. <br /> <br /> <strong>ತಹಶೀಲ್ದಾರ್ ಹೇಳಿಕೆ: </strong> ಕಳೆದ ಬಾರಿಯಂತೆ ತಂಗಭದ್ರಾ ನದಿ ಪ್ರವಾಹದ ನೀರು ನುಗ್ಗಿದೆ ಎಂದು ತಿಳಿದು ಬಂದಿದೆ. ಬೆಳೆಹಾನಿ ಪರಿಶೀಲನೆ ನಡೆಸಲು ಭಾನುವಾರ ನದಿಪಾತ್ರದ ಗ್ರಾಮಗಳಿಗೆ ಭೇಟಿ ನೀಡುವುದಾಗಿ ತಹಶೀಲ್ದಾರ್ ನಜ್ಮಾ ತಿಳಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>