<p><strong>ಹುಬ್ಬಳ್ಳಿ: </strong>ಬೈರಿದೇವರಕೊಪ್ಪಕ್ಕೆ ಹೊಂದಿಕೊಂಡಿರುವ ಸದಾ ಶಿವಾನಂದನಗರದಲ್ಲಿ ಒಳಚರಂಡಿ ದುರಸ್ತಿ ಕಾಮಗಾರಿ ಕೈಗೊಳ್ಳುವಾಗ ಎಲ್ಲೆಂದರಲ್ಲಿ ಬಿಎಸ್ಎನ್ಎಲ್ ಮಾರ್ಗ ತುಂಡರಿಸಿ ಹೋಗಿದ್ದು, ಇದರಿಂದ ಬೈರಿದೇವರಕೊಪ್ಪ ಸೇರಿದಂತೆ ಸುತ್ತಲಿನ ಪ್ರದೇಶಗಳ 500ಕ್ಕೂ ಅಧಿಕ ದೂರವಾಣಿಗಳು ಸಂಪರ್ಕ ಕಳೆದುಕೊಂಡಿವೆ.<br /> <br /> ಮೊದಲ ಸಲ ಕೇಬಲ್ ತುಂಡರಿಸಿ ಹೋದಾಗಲೇ ಸ್ಥಳದಲ್ಲಿ ಹಾಜರಿದ್ದ ಮುಖ್ಯಸ್ಥರ ಗಮನಕ್ಕೆ ತರಲಾಗಿದ್ದರೂ ಮತ್ತೆ ಮತ್ತೆ 4-5 ಕಡೆ ಕೇಬಲ್ ಕತ್ತರಿಸಲಾಗಿದೆ ಎಂದು ಬಿಎಸ್ಎನ್ಎಲ್ ಅಧಿಕಾರಿಗಳು ದೂರಿದ್ದಾರೆ. ಒಳ ಚರಂಡಿ ದುರಸ್ತಿ ಕಾಮಗಾರಿಗೆ ಜೆಸಿಬಿಯನ್ನು ಬಳಸಿದ್ದೇ ಘಟನೆಗೆ ಕಾರಣ ಎಂದು ಅವರು ತಿಳಿಸಿದ್ದಾರೆ.<br /> <br /> ಸಂಪರ್ಕ ಕಡಿದುಹೋದ ತಕ್ಷಣ ಜಾಗೃತವಾದ ಬಿಎಸ್ಎನ್ಎಲ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯದಲ್ಲಿ ತೊಡಗಿದರು. ಸಮರೋಪಾದಿಯಲ್ಲಿ ಕೆಲಸ ಆರಂಭಿಸಲಾಗಿದ್ದು ಎಲ್ಲ ದೂರವಾಣಿಗಳು ಪುನಃ ಸಂಪರ್ಕ ಪಡೆಯಲು ಶನಿವಾರದವರೆಗೆ ಕಾಲಾವಕಾಶ ಬೇಕಾಗಬಹುದು ಎಂದು ಅವರು ಹೇಳಿದ್ದಾರೆ.<br /> <br /> `ಘಟನೆಯಿಂದ ಸಾಕಷ್ಟು ಪ್ರಮಾಣದ ಕೇಬಲ್ಗೆ ಹಾನಿಯಾಗಿದ್ದು, ಇಲಾಖೆಗೆ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದೆ. ತುಂಬಿಕೊಡುವಂತೆ ಪಾಲಿಕೆಯನ್ನು ಕೋರಲಾಗುವುದು. ಇಂತಹ ಘಟನೆಗಳು ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಉಣಕಲ್ನಲ್ಲೂ ಇದೇ ರೀತಿ ಕೇಬಲ್ ಕತ್ತರಿಸಲಾಗಿತ್ತು. <br /> <br /> ಪಾಲಿಕೆ ಅಧಿಕಾರಿಗಳಿಗೆ ಮೇಲಿಂದ ಮೇಲೆ ಮನವಿ ಮಾಡಿಕೊಂಡರೂ ಇಂತಹ ಘಟನೆಗಳನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ~ ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದ್ದಾರೆ. ಕೇಬಲ್ ಹಾಳಾದ ಘಟನೆಗೆ ಸಂಬಂಧಿಸಿದಂತೆ ಬಿಎಸ್ಎನ್ಎಲ್ನಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪಾಲಿಕೆ ಅಧಿಕಾರಿಗಳಿಗೂ ಹಾನಿ ಭರಿಸುವಂತೆ ಪತ್ರ ಬರೆಯಲು ನಿರ್ಧರಿಸಲಾಗಿದೆ.<br /> <br /> ಘಟನಾ ಸ್ಥಳಕ್ಕೆ ವಿಭಾಗೀಯ ಪ್ರಧಾನ ವ್ಯವಸ್ಥಾಪಕ ಎನ್.ಕೆ. ಗಂದಿಗವಾಡ, ಎಂಜಿನಿಯರ್ ಸಿ.ಎಚ್.ಶಿವಾನಂದ ಹಾಗೂ ಅಧಿಕಾರಿ ಚಂದ್ರಶೇಖರ್ ತರಿಕೇರಿ ಭೇಟಿ ನೀಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಬೈರಿದೇವರಕೊಪ್ಪಕ್ಕೆ ಹೊಂದಿಕೊಂಡಿರುವ ಸದಾ ಶಿವಾನಂದನಗರದಲ್ಲಿ ಒಳಚರಂಡಿ ದುರಸ್ತಿ ಕಾಮಗಾರಿ ಕೈಗೊಳ್ಳುವಾಗ ಎಲ್ಲೆಂದರಲ್ಲಿ ಬಿಎಸ್ಎನ್ಎಲ್ ಮಾರ್ಗ ತುಂಡರಿಸಿ ಹೋಗಿದ್ದು, ಇದರಿಂದ ಬೈರಿದೇವರಕೊಪ್ಪ ಸೇರಿದಂತೆ ಸುತ್ತಲಿನ ಪ್ರದೇಶಗಳ 500ಕ್ಕೂ ಅಧಿಕ ದೂರವಾಣಿಗಳು ಸಂಪರ್ಕ ಕಳೆದುಕೊಂಡಿವೆ.<br /> <br /> ಮೊದಲ ಸಲ ಕೇಬಲ್ ತುಂಡರಿಸಿ ಹೋದಾಗಲೇ ಸ್ಥಳದಲ್ಲಿ ಹಾಜರಿದ್ದ ಮುಖ್ಯಸ್ಥರ ಗಮನಕ್ಕೆ ತರಲಾಗಿದ್ದರೂ ಮತ್ತೆ ಮತ್ತೆ 4-5 ಕಡೆ ಕೇಬಲ್ ಕತ್ತರಿಸಲಾಗಿದೆ ಎಂದು ಬಿಎಸ್ಎನ್ಎಲ್ ಅಧಿಕಾರಿಗಳು ದೂರಿದ್ದಾರೆ. ಒಳ ಚರಂಡಿ ದುರಸ್ತಿ ಕಾಮಗಾರಿಗೆ ಜೆಸಿಬಿಯನ್ನು ಬಳಸಿದ್ದೇ ಘಟನೆಗೆ ಕಾರಣ ಎಂದು ಅವರು ತಿಳಿಸಿದ್ದಾರೆ.<br /> <br /> ಸಂಪರ್ಕ ಕಡಿದುಹೋದ ತಕ್ಷಣ ಜಾಗೃತವಾದ ಬಿಎಸ್ಎನ್ಎಲ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯದಲ್ಲಿ ತೊಡಗಿದರು. ಸಮರೋಪಾದಿಯಲ್ಲಿ ಕೆಲಸ ಆರಂಭಿಸಲಾಗಿದ್ದು ಎಲ್ಲ ದೂರವಾಣಿಗಳು ಪುನಃ ಸಂಪರ್ಕ ಪಡೆಯಲು ಶನಿವಾರದವರೆಗೆ ಕಾಲಾವಕಾಶ ಬೇಕಾಗಬಹುದು ಎಂದು ಅವರು ಹೇಳಿದ್ದಾರೆ.<br /> <br /> `ಘಟನೆಯಿಂದ ಸಾಕಷ್ಟು ಪ್ರಮಾಣದ ಕೇಬಲ್ಗೆ ಹಾನಿಯಾಗಿದ್ದು, ಇಲಾಖೆಗೆ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದೆ. ತುಂಬಿಕೊಡುವಂತೆ ಪಾಲಿಕೆಯನ್ನು ಕೋರಲಾಗುವುದು. ಇಂತಹ ಘಟನೆಗಳು ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಉಣಕಲ್ನಲ್ಲೂ ಇದೇ ರೀತಿ ಕೇಬಲ್ ಕತ್ತರಿಸಲಾಗಿತ್ತು. <br /> <br /> ಪಾಲಿಕೆ ಅಧಿಕಾರಿಗಳಿಗೆ ಮೇಲಿಂದ ಮೇಲೆ ಮನವಿ ಮಾಡಿಕೊಂಡರೂ ಇಂತಹ ಘಟನೆಗಳನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ~ ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದ್ದಾರೆ. ಕೇಬಲ್ ಹಾಳಾದ ಘಟನೆಗೆ ಸಂಬಂಧಿಸಿದಂತೆ ಬಿಎಸ್ಎನ್ಎಲ್ನಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪಾಲಿಕೆ ಅಧಿಕಾರಿಗಳಿಗೂ ಹಾನಿ ಭರಿಸುವಂತೆ ಪತ್ರ ಬರೆಯಲು ನಿರ್ಧರಿಸಲಾಗಿದೆ.<br /> <br /> ಘಟನಾ ಸ್ಥಳಕ್ಕೆ ವಿಭಾಗೀಯ ಪ್ರಧಾನ ವ್ಯವಸ್ಥಾಪಕ ಎನ್.ಕೆ. ಗಂದಿಗವಾಡ, ಎಂಜಿನಿಯರ್ ಸಿ.ಎಚ್.ಶಿವಾನಂದ ಹಾಗೂ ಅಧಿಕಾರಿ ಚಂದ್ರಶೇಖರ್ ತರಿಕೇರಿ ಭೇಟಿ ನೀಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>