<p>ತುಮಕೂರು: ನಗರದ ಎಸ್ಐಟಿ ಆವರಣದಲ್ಲಿ ಮಂಗಳವಾರ ಮುಕ್ತಾಯಗೊಂಡ 30ನೇ ರಾಜ್ಯಮಟ್ಟದ ಆಹ್ವಾನಿತ ವಾಲಿಬಾಲ್ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ಬೆಂಗಳೂರಿನ ಎಂ.ಎಸ್.ರಾಮಯ್ಯ ತಾಂತ್ರಿಕ ಕಾಲೇಜು ಲೀಗ್ನಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ವಿಜೇತರಾಗಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. <br /> <br /> ಎರಡು ಗೆಲುವಿನೊಂದಿಗೆ ಮೂಡುಬಿದಿರೆಯ ಆಳ್ವಾಸ್ ತಾಂತ್ರಿಕ ಕಾಲೇಜು ರನ್ನರ್ ಆಗಿ ನಗೆ ಬೀರಿತು. <br /> ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದರೂ ತುಮಕೂರಿನ ಎಸ್ಐಟಿ ತಂಡ ಮೂರನೇ ಸ್ಥಾನಕ್ಕೆ ಸಮಾಧಾನಪಟ್ಟಿತು.<br /> <br /> ಮಹಿಳೆಯರ ವಿಭಾಗದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ವಿಜೇತರಾಗಿ ಮಂಗಳೂರಿನ ಸಹ್ಯಾದ್ರಿ ತಾಂತ್ರಿಕ ಕಾಲೇಜು ತಂಡ ಚಾಂಪಿಯನ್ ಆಗಿ ನಗೆಬೀರಿದರು. ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜು ತಂಡ ದ್ವಿತೀಯ ಸ್ಥಾನ ಹಾಗೂ ತುಮಕೂರಿನ ಎಸ್ಐಟಿ ತಂಡ ಮೂರನೇ ಸ್ಥಾನಗಳಿಸಿತು.<br /> <br /> ಪಂದ್ಯಾವಳಿ ಉದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ರಾಮಯ್ಯ ತಂಡದ ಕಾರ್ತಿಕ್ ಉತ್ತಮ ಹೊಡೆತಗಾರ, ಆಳ್ವಾಸ್ ತಂಡದ ಅರ್ಜುನ್ ಉತ್ತಮ ಪಾಸಾರ್ ಹಾಗೂ ಎಸ್ಐಟಿ ತಂಡದ ಕೆ.ಬಿಜು ಸರ್ವಾಂಗೀಣ ಆಟಗಾರರಾಗಿ ಪ್ರಶಸ್ತಿ ಪಡೆದರು.<br /> <br /> ಮಹಿಳೆಯರ ವಿಭಾಗದಲ್ಲಿ ಸಹ್ಯಾದ್ರಿ ತಂಡದ ಶ್ರದ್ಧಾ ಉತ್ತಮ ಹೊಡೆತಗಾರ್ತಿ, ಎಂ.ಎಸ್. ರಾಮಯ್ಯ ತಂಡದ ಮೇಘನಾ ಉತ್ತಮ ಪಾಸರ್ ಹಾಗೂ ಎಸ್ಐಟಿಯ ಶಾಲಿನಿ ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿಗೆ ಪಾತ್ರರಾದರು.<br /> <br /> <strong>ಶಿಕ್ಷಕರ ತಾತ್ಕಾಲಿಕ ವರ್ಗಾವಣೆ ಪಟ್ಟಿ</strong><br /> ತುಮಕೂರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಇದ್ದಲ್ಲಿ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಮೋಹನ್ ಕುಮಾರ್ ತಿಳಿಸಿದ್ದಾರೆ.<br /> <br /> ಜಿಲ್ಲಾ ಉಪ ನಿರ್ದೇಶಕ ಕಚೇರಿಯಲ್ಲಿ ಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಏ.21ರೊಳಗೆ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸುವಂತೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ನಗರದ ಎಸ್ಐಟಿ ಆವರಣದಲ್ಲಿ ಮಂಗಳವಾರ ಮುಕ್ತಾಯಗೊಂಡ 30ನೇ ರಾಜ್ಯಮಟ್ಟದ ಆಹ್ವಾನಿತ ವಾಲಿಬಾಲ್ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ಬೆಂಗಳೂರಿನ ಎಂ.ಎಸ್.ರಾಮಯ್ಯ ತಾಂತ್ರಿಕ ಕಾಲೇಜು ಲೀಗ್ನಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ವಿಜೇತರಾಗಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. <br /> <br /> ಎರಡು ಗೆಲುವಿನೊಂದಿಗೆ ಮೂಡುಬಿದಿರೆಯ ಆಳ್ವಾಸ್ ತಾಂತ್ರಿಕ ಕಾಲೇಜು ರನ್ನರ್ ಆಗಿ ನಗೆ ಬೀರಿತು. <br /> ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದರೂ ತುಮಕೂರಿನ ಎಸ್ಐಟಿ ತಂಡ ಮೂರನೇ ಸ್ಥಾನಕ್ಕೆ ಸಮಾಧಾನಪಟ್ಟಿತು.<br /> <br /> ಮಹಿಳೆಯರ ವಿಭಾಗದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ವಿಜೇತರಾಗಿ ಮಂಗಳೂರಿನ ಸಹ್ಯಾದ್ರಿ ತಾಂತ್ರಿಕ ಕಾಲೇಜು ತಂಡ ಚಾಂಪಿಯನ್ ಆಗಿ ನಗೆಬೀರಿದರು. ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜು ತಂಡ ದ್ವಿತೀಯ ಸ್ಥಾನ ಹಾಗೂ ತುಮಕೂರಿನ ಎಸ್ಐಟಿ ತಂಡ ಮೂರನೇ ಸ್ಥಾನಗಳಿಸಿತು.<br /> <br /> ಪಂದ್ಯಾವಳಿ ಉದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ರಾಮಯ್ಯ ತಂಡದ ಕಾರ್ತಿಕ್ ಉತ್ತಮ ಹೊಡೆತಗಾರ, ಆಳ್ವಾಸ್ ತಂಡದ ಅರ್ಜುನ್ ಉತ್ತಮ ಪಾಸಾರ್ ಹಾಗೂ ಎಸ್ಐಟಿ ತಂಡದ ಕೆ.ಬಿಜು ಸರ್ವಾಂಗೀಣ ಆಟಗಾರರಾಗಿ ಪ್ರಶಸ್ತಿ ಪಡೆದರು.<br /> <br /> ಮಹಿಳೆಯರ ವಿಭಾಗದಲ್ಲಿ ಸಹ್ಯಾದ್ರಿ ತಂಡದ ಶ್ರದ್ಧಾ ಉತ್ತಮ ಹೊಡೆತಗಾರ್ತಿ, ಎಂ.ಎಸ್. ರಾಮಯ್ಯ ತಂಡದ ಮೇಘನಾ ಉತ್ತಮ ಪಾಸರ್ ಹಾಗೂ ಎಸ್ಐಟಿಯ ಶಾಲಿನಿ ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿಗೆ ಪಾತ್ರರಾದರು.<br /> <br /> <strong>ಶಿಕ್ಷಕರ ತಾತ್ಕಾಲಿಕ ವರ್ಗಾವಣೆ ಪಟ್ಟಿ</strong><br /> ತುಮಕೂರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಇದ್ದಲ್ಲಿ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಮೋಹನ್ ಕುಮಾರ್ ತಿಳಿಸಿದ್ದಾರೆ.<br /> <br /> ಜಿಲ್ಲಾ ಉಪ ನಿರ್ದೇಶಕ ಕಚೇರಿಯಲ್ಲಿ ಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಏ.21ರೊಳಗೆ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸುವಂತೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>