<p><strong>ತುಮಕೂರು: </strong>ನಗರದಲ್ಲಿ ಸೋಮವಾರ ಪ್ರತಿಭಟನೆಗಳ ದಿನ. ನಗರದಲ್ಲಿ ನಾಲ್ಕು ಪ್ರತಿಭಟನೆಗಳು ನಡೆದವು. ಮರಳು ಗಣಿಗಾರಿಕೆ ವಿರೋಧಿ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಕೊರಟಗೆರೆಯಿಂದ ಕಾಲ್ನಡಿಗೆ ಜಾಥಾದಲ್ಲಿ ಬಂದರು. ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.<br /> <br /> ಗುಜರಾಜ್ ಮುಖ್ಯಮಂತ್ರಿ ನರೇಂದ್ರ ಮೋದಿ ಉಪವಾಸ ಸತ್ಯಾಗ್ರಹ ಬೆಂಬಲಿಸಿ ನರೇಂದ್ರ ಮೋದಿ ವಿಚಾರ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ನಡೆಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.<br /> <br /> <strong>ಬಿಜೆಪಿ ವಿರೋಧ<br /> </strong>ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಬಿಜೆಪಿ, ಎತ್ತಿನ ಗಾಡಿಯ ಮೇಲೆ ಬೈಕ್ ಇಟ್ಟು ಮೆರವಣಿಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿತು.<br /> <br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಪ್ರಸಾದ್, ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರ ಹಿಡಿದ ನಂತರ ಆರ್ಥಿಕ ವ್ಯವಸ್ಥೆ ಕುಸಿಯುತ್ತಿದೆ. ಆಡಳಿತದ ವಿಫಲತೆಯಿಂದಾಗಿ ಪೆಟ್ರೋಲ್ ಬೆಲೆ ಏರಿಕೆಗೆ ಕಾರಣ ಎಂದು ಟೀಕಿಸಿದರು.<br /> <br /> ಪೆಟ್ರೋಲ್, ನಿತ್ಯ ಉಪಯೋಗಿ ವಸ್ತುಗಳ ಬೆಲೆ ಹೆಚ್ಚಳದಿಂದ ಸಾಮಾನ್ಯ ಜನರು ಮತ್ತು ಬಡವರು ಜೀವನ ದುಃಸ್ಥಿತಿಗೆ ತಲುಪಿದೆ. ಪ್ರಕೃತಿ ವಿಕೋಪ, ಬೆಲೆ ಹೆಚ್ಚಳದ ನಡುವೆ ಸಿಲುಕಿ ಜನರೆ ಕಂಗಾಲಾಗಿದ್ದಾರೆ ಎಂದು ಆಂತಕ ವ್ಯಕ್ತಪಡಿಸಿದರು.<br /> <br /> ಪೆಟ್ರೋಲ್ ಬೆಲೆ ಏರಿಕೆಯನ್ನು ವಾಪಸ್ ಪಡೆಯದಿದ್ದರೆ ಪಕ್ಷ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿದೆ. ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಯುಪಿಎ ಸರ್ಕಾರ ಅಧಿಕಾರ ಸಿಕ್ಕ ನಂತರ ಜನತೆಯ ಮೇಲೆ ಗದಾ ಪ್ರಹಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಪ್ರತಿಭಟನೆಯಲ್ಲಿ ಮಾಜಿ ಶಾಸಕ ಗಂಗಹನುಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ, ಉಪಾಧ್ಯಕ್ಷರಾದ ಭೈರಪ್ಪ, ನಾಗರತ್ನಮ್ಮ ಇನ್ನಿತರ ಮುಖಂಡರು ಇದ್ದರು.<br /> <strong><br /> ಬೀದಿಗಿಳಿದ ಆಶಾ ಕಾರ್ಯಕರ್ತೆಯರು</strong><br /> ಕೆಲಸದ ಭದ್ರತೆ ಹಾಗೂ ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ರಾಜ್ಯ ಆಶಾ ಕಾರ್ಯಕರ್ತೆಯರ ಫೆಡರೇಷನ್ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಮಾಸಿಕ ವೇತನ ನಿಗದಿಗೊಳಿಸಬೇಕು. ಭವಿಷ್ಯ ನಿಧಿ, ಪಿಂಚಣೆ, ಕರೆನ್ಸಿ ಸಮೇತ ಮೊಬೈಲ್ ಮತ್ತಿತರ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.<br /> <br /> ಟೌನ್ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ತಮ್ಮ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.<br /> <br /> ಪ್ರತಿಭಟನೆ ನೇತೃತ್ವವನ್ನು ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸಾಮಣಿ, ಜಿಲ್ಲಾ ಕಾರ್ಯದರ್ಶಿ ಶೋಭಾ, ಜಿಲ್ಲಾ ಖಚಾಂಚಿ ಕೆ.ಎಚ್.ವಸಂತಾ, ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಗಿರೀಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯೋಗೀಶ್, ಮುಖಂಡರಾದ ವಾಜಿದ್ಖಾನ್ ತೋವಿನ, ಎಂ.ಶಿವಣ್ಣ, ವಾಸುದೇವಕುಮಾರ್, ಚಿನ್ನಪ್ಪ ಇತರರು ಇದ್ದರು.<br /> <br /> <strong>ನರೇಂದ್ರ ಮೋದಿಗೆ ಬೆಂಬಲ</strong><br /> ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನಡೆಸುತ್ತಿರುವ ಸದ್ಭಾವನಾ ನಿರಶನಕ್ಕೆ ಬೆಂಬಲ ಸೂಚಿಸಿ ನರೇಂದ್ರ ಮೋದಿ ವಿಚಾರ ವೇದಿಕೆ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದರು.<br /> <br /> ಸದ್ಭಾವನಾ ಉಪವಾಸವನ್ನು ದೇಶದ ಎಲ್ಲ ಜನರು ಬೆಂಬಲಿಸಬೇಕೆಂದು ವೇದಿಕೆಯ ಟಿ.ಎಸ್.ನಿರಂಜನ ಹೇಳಿದರು. ಉಪವಾಸ ಸತ್ಯಾಗ್ರಹದಲ್ಲಿ ಟೂಡ ಸದಸ್ಯರಾದ ಜಿ.ಕೆ.ಶ್ರೀನಿವಾಸ್, ರವಿಶಂಕರ್, ಶಾಂತರಾಜು, ಆರಾಧನಾ ಸಮಿತಿ ಸದಸ್ಯರಾದ ಪ್ರೇಮಲತಾ, ರತ್ನಮ್ಮ, ಲೋಕೇಶ್, ಜಿ.ಎಲ್.ರವಿ, ಕಲ್ಯಾಣ ಕುಮಾರ್, ಕೃಷ್ಣಮೂರ್ತಿ ಇತರರು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ನಗರದಲ್ಲಿ ಸೋಮವಾರ ಪ್ರತಿಭಟನೆಗಳ ದಿನ. ನಗರದಲ್ಲಿ ನಾಲ್ಕು ಪ್ರತಿಭಟನೆಗಳು ನಡೆದವು. ಮರಳು ಗಣಿಗಾರಿಕೆ ವಿರೋಧಿ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಕೊರಟಗೆರೆಯಿಂದ ಕಾಲ್ನಡಿಗೆ ಜಾಥಾದಲ್ಲಿ ಬಂದರು. ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.<br /> <br /> ಗುಜರಾಜ್ ಮುಖ್ಯಮಂತ್ರಿ ನರೇಂದ್ರ ಮೋದಿ ಉಪವಾಸ ಸತ್ಯಾಗ್ರಹ ಬೆಂಬಲಿಸಿ ನರೇಂದ್ರ ಮೋದಿ ವಿಚಾರ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ನಡೆಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.<br /> <br /> <strong>ಬಿಜೆಪಿ ವಿರೋಧ<br /> </strong>ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಬಿಜೆಪಿ, ಎತ್ತಿನ ಗಾಡಿಯ ಮೇಲೆ ಬೈಕ್ ಇಟ್ಟು ಮೆರವಣಿಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿತು.<br /> <br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಪ್ರಸಾದ್, ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರ ಹಿಡಿದ ನಂತರ ಆರ್ಥಿಕ ವ್ಯವಸ್ಥೆ ಕುಸಿಯುತ್ತಿದೆ. ಆಡಳಿತದ ವಿಫಲತೆಯಿಂದಾಗಿ ಪೆಟ್ರೋಲ್ ಬೆಲೆ ಏರಿಕೆಗೆ ಕಾರಣ ಎಂದು ಟೀಕಿಸಿದರು.<br /> <br /> ಪೆಟ್ರೋಲ್, ನಿತ್ಯ ಉಪಯೋಗಿ ವಸ್ತುಗಳ ಬೆಲೆ ಹೆಚ್ಚಳದಿಂದ ಸಾಮಾನ್ಯ ಜನರು ಮತ್ತು ಬಡವರು ಜೀವನ ದುಃಸ್ಥಿತಿಗೆ ತಲುಪಿದೆ. ಪ್ರಕೃತಿ ವಿಕೋಪ, ಬೆಲೆ ಹೆಚ್ಚಳದ ನಡುವೆ ಸಿಲುಕಿ ಜನರೆ ಕಂಗಾಲಾಗಿದ್ದಾರೆ ಎಂದು ಆಂತಕ ವ್ಯಕ್ತಪಡಿಸಿದರು.<br /> <br /> ಪೆಟ್ರೋಲ್ ಬೆಲೆ ಏರಿಕೆಯನ್ನು ವಾಪಸ್ ಪಡೆಯದಿದ್ದರೆ ಪಕ್ಷ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿದೆ. ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಯುಪಿಎ ಸರ್ಕಾರ ಅಧಿಕಾರ ಸಿಕ್ಕ ನಂತರ ಜನತೆಯ ಮೇಲೆ ಗದಾ ಪ್ರಹಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಪ್ರತಿಭಟನೆಯಲ್ಲಿ ಮಾಜಿ ಶಾಸಕ ಗಂಗಹನುಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ, ಉಪಾಧ್ಯಕ್ಷರಾದ ಭೈರಪ್ಪ, ನಾಗರತ್ನಮ್ಮ ಇನ್ನಿತರ ಮುಖಂಡರು ಇದ್ದರು.<br /> <strong><br /> ಬೀದಿಗಿಳಿದ ಆಶಾ ಕಾರ್ಯಕರ್ತೆಯರು</strong><br /> ಕೆಲಸದ ಭದ್ರತೆ ಹಾಗೂ ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ರಾಜ್ಯ ಆಶಾ ಕಾರ್ಯಕರ್ತೆಯರ ಫೆಡರೇಷನ್ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಮಾಸಿಕ ವೇತನ ನಿಗದಿಗೊಳಿಸಬೇಕು. ಭವಿಷ್ಯ ನಿಧಿ, ಪಿಂಚಣೆ, ಕರೆನ್ಸಿ ಸಮೇತ ಮೊಬೈಲ್ ಮತ್ತಿತರ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.<br /> <br /> ಟೌನ್ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ತಮ್ಮ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.<br /> <br /> ಪ್ರತಿಭಟನೆ ನೇತೃತ್ವವನ್ನು ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸಾಮಣಿ, ಜಿಲ್ಲಾ ಕಾರ್ಯದರ್ಶಿ ಶೋಭಾ, ಜಿಲ್ಲಾ ಖಚಾಂಚಿ ಕೆ.ಎಚ್.ವಸಂತಾ, ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಗಿರೀಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯೋಗೀಶ್, ಮುಖಂಡರಾದ ವಾಜಿದ್ಖಾನ್ ತೋವಿನ, ಎಂ.ಶಿವಣ್ಣ, ವಾಸುದೇವಕುಮಾರ್, ಚಿನ್ನಪ್ಪ ಇತರರು ಇದ್ದರು.<br /> <br /> <strong>ನರೇಂದ್ರ ಮೋದಿಗೆ ಬೆಂಬಲ</strong><br /> ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನಡೆಸುತ್ತಿರುವ ಸದ್ಭಾವನಾ ನಿರಶನಕ್ಕೆ ಬೆಂಬಲ ಸೂಚಿಸಿ ನರೇಂದ್ರ ಮೋದಿ ವಿಚಾರ ವೇದಿಕೆ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದರು.<br /> <br /> ಸದ್ಭಾವನಾ ಉಪವಾಸವನ್ನು ದೇಶದ ಎಲ್ಲ ಜನರು ಬೆಂಬಲಿಸಬೇಕೆಂದು ವೇದಿಕೆಯ ಟಿ.ಎಸ್.ನಿರಂಜನ ಹೇಳಿದರು. ಉಪವಾಸ ಸತ್ಯಾಗ್ರಹದಲ್ಲಿ ಟೂಡ ಸದಸ್ಯರಾದ ಜಿ.ಕೆ.ಶ್ರೀನಿವಾಸ್, ರವಿಶಂಕರ್, ಶಾಂತರಾಜು, ಆರಾಧನಾ ಸಮಿತಿ ಸದಸ್ಯರಾದ ಪ್ರೇಮಲತಾ, ರತ್ನಮ್ಮ, ಲೋಕೇಶ್, ಜಿ.ಎಲ್.ರವಿ, ಕಲ್ಯಾಣ ಕುಮಾರ್, ಕೃಷ್ಣಮೂರ್ತಿ ಇತರರು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>