<p><strong><span style="font-size: medium">ತುಮಕೂರು (ಐಎಎನ್ಎಸ್):</span></strong><span style="font-size: medium"> ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಹೆಗ್ಗರೆ ಗ್ರಾಮದ ಸಮೀಪ ಟೆಂಪೊ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 15 ಪ್ರಯಾಣಿಕರು ಮೃತಪಟ್ಟಿದ್ದಾರೆ.</span></p>.<p><span style="font-size: medium">~ಸೋಮವಾರ ಮಧ್ಯಾಹ್ನ 1ಗಂಟೆ ವೇಳೆಗೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಟೆಂಪೊ, ವಾಹನ ಒಂದನ್ನು ಹಿಂದಿಕ್ಕುವ ಪ್ರಯತ್ನದಲ್ಲಿದ್ದಾಗ ಎದುರಿನಿಂದ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ~ ಎಂದು ತುಮಕೂರು ಜಿಲ್ಲಾಧಿಕಾರಿ ಸಿ.ಸೋಮಶೇಖರ್ ತಿಳಿಸಿದ್ದಾರೆ.</span></p>.<p><span style="font-size: medium">~ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನತದೃಷ್ಟ ಟೆಂಪೊ ಗುಬ್ಬಿ ಬಳಿಯ ಹಳ್ಳಿಯೊಂದಕ್ಕೆ ಸೇರಿದೆ. ಟೆಂಪೊದಲ್ಲಿದ್ದವರಲ್ಲಿ 15 ಮಂದಿ ಮೃತಪಟ್ಟಿದ್ದು, ಐವರಿಗೆ ತೀವ್ರ ಗಾಯಗಳಾಗಿವೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ~ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. </span></p>.<p><span style="font-size: medium">ಮೃತರ ಕುಟುಂಬದವರಿಗೆ ಸರ್ಕಾರ 50 ಸಾವಿರ ರೂಪಾಯಿ ಪರಿಹಾರ ಧನ ನೀಡಲಿದೆ. ಜತೆಗೆ ಗಾಯಗೊಂಡವರಿಗೆ ಚಿಕಿತ್ಸೆಗಾಗಿ 15 ಸಾವಿರ ರೂಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ. </span></p>.<p><span style="font-size: medium">ಚಾಲಕ ಸೇರಿದಂತೆ ಹದಿಮೂರು ಜನ ಪ್ರಯಾಣಿಕರಿಗೆ ಅವಕಾಶವಿದ್ದ ಈ ನತದೃಷ್ಟ ಟೆಂಪೊದಲ್ಲಿ ಒಟ್ಟು 20 ಮಂದಿ ಪ್ರಯಾಣಿಸುತ್ತಿದ್ದರು. </span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong><span style="font-size: medium">ತುಮಕೂರು (ಐಎಎನ್ಎಸ್):</span></strong><span style="font-size: medium"> ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಹೆಗ್ಗರೆ ಗ್ರಾಮದ ಸಮೀಪ ಟೆಂಪೊ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 15 ಪ್ರಯಾಣಿಕರು ಮೃತಪಟ್ಟಿದ್ದಾರೆ.</span></p>.<p><span style="font-size: medium">~ಸೋಮವಾರ ಮಧ್ಯಾಹ್ನ 1ಗಂಟೆ ವೇಳೆಗೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಟೆಂಪೊ, ವಾಹನ ಒಂದನ್ನು ಹಿಂದಿಕ್ಕುವ ಪ್ರಯತ್ನದಲ್ಲಿದ್ದಾಗ ಎದುರಿನಿಂದ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ~ ಎಂದು ತುಮಕೂರು ಜಿಲ್ಲಾಧಿಕಾರಿ ಸಿ.ಸೋಮಶೇಖರ್ ತಿಳಿಸಿದ್ದಾರೆ.</span></p>.<p><span style="font-size: medium">~ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನತದೃಷ್ಟ ಟೆಂಪೊ ಗುಬ್ಬಿ ಬಳಿಯ ಹಳ್ಳಿಯೊಂದಕ್ಕೆ ಸೇರಿದೆ. ಟೆಂಪೊದಲ್ಲಿದ್ದವರಲ್ಲಿ 15 ಮಂದಿ ಮೃತಪಟ್ಟಿದ್ದು, ಐವರಿಗೆ ತೀವ್ರ ಗಾಯಗಳಾಗಿವೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ~ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. </span></p>.<p><span style="font-size: medium">ಮೃತರ ಕುಟುಂಬದವರಿಗೆ ಸರ್ಕಾರ 50 ಸಾವಿರ ರೂಪಾಯಿ ಪರಿಹಾರ ಧನ ನೀಡಲಿದೆ. ಜತೆಗೆ ಗಾಯಗೊಂಡವರಿಗೆ ಚಿಕಿತ್ಸೆಗಾಗಿ 15 ಸಾವಿರ ರೂಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ. </span></p>.<p><span style="font-size: medium">ಚಾಲಕ ಸೇರಿದಂತೆ ಹದಿಮೂರು ಜನ ಪ್ರಯಾಣಿಕರಿಗೆ ಅವಕಾಶವಿದ್ದ ಈ ನತದೃಷ್ಟ ಟೆಂಪೊದಲ್ಲಿ ಒಟ್ಟು 20 ಮಂದಿ ಪ್ರಯಾಣಿಸುತ್ತಿದ್ದರು. </span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>