<p><strong>ಚಿಕ್ಕಮಗಳೂರು: </strong>ನಗರಕ್ಕೆ ಹೊಂದಿಕೊಂಡಂತಿರುವ ಜಿಲ್ಲಾ ಪಂಚಾಯಿತಿ ಹಿಂಭಾಗದ ತುರ್ಚೆಗುಡ್ಡ ಮೀಸಲು ಅರಣ್ಯಕ್ಕೆ ಬೆಂಕಿ ಬಿದ್ದಿದ್ದು, ಭಾನುವಾರ ಸಂಜೆಯಾದರೂ ಬೆಂಕಿ ನಿಯಂತ್ರಣಕ್ಕೆ ಬಂದಿರಲಿಲ್ಲ.<br /> <br /> ಶನಿವಾರ ಮಧ್ಯಾಹ್ನವೇ ಬೆಂಕಿ ಕಾಣಿಸಿಕೊಂಡಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಸಕಾಲಕ್ಕೆ ಆಗಮಿಸಿ ಬೆಂಕಿ ನಂದಿಸದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಇಡೀ ಅರಣ್ಯಕ್ಕೆ ಹರಡಿದೆ ಎಂದು ಸ್ಥಳೀಯರು `ಪ್ರಜಾವಾಣಿ~ ಬಳಿ ದೂರಿದರು.<br /> <br /> `ಇಲಾಖೆ ಸಿಬ್ಬಂದಿಯನ್ನು ಸ್ಥಳಕ್ಕೆ ರವಾನಿಸಿದ್ದೇವೆ. ಬೆಂಕಿ ನಿಯಂತ್ರಣಕ್ಕೆ ಬಂದಿದೆ. 5ರಿಂದ 6 ಎಕರೆ ಅರಣ್ಯ ಪ್ರದೇಶ ಬೆಂಕಿಯಲ್ಲಿ ಬೆಂದುಹೋಗಿದೆ. ಬೆಂಕಿ ನೆಲಮಟ್ಟದಲ್ಲಿರುವುದರಿಂದ ಮರಗಳಿಗೆ ಹಾನಿಯಾಗಿಲ್ಲ. <br /> ನೆಲದಲ್ಲಿ ಹರಡಿರುವ ದರಗು, ಗಿಡಗಂಟಿ ಸುಟ್ಟು ಹೋಗಿವೆ~ ಎಂದು ಪ್ರಭಾರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವಾಣ್ ಹೇಳಿದರು. <br /> <br /> ಆದರೆ `ಪ್ರಜಾವಾಣಿ~ ಪ್ರತಿನಿಧಿ ಸ್ಥಳಕ್ಕೆ ಭೇಟಿ ನೀಡಿದಾಗ ಬೆಂಕಿ ಧಗಧಗನೇ ಉರಿಯುತ್ತಿತ್ತು. ಅರಣ್ಯ ಇಲಾಖೆಯ ಒಬ್ಬ ಸಿಬ್ಬಂದಿಯೂ ಸ್ಥಳದಲ್ಲಿ ಕಾಣಿಸಲಿಲ್ಲ. ಅರಣ್ಯದ ಅಕೇಶಿಯಾ ನೆಡುತೋಪು, ಗಿಡಗಂಟಿಗಳು ಬೆಂಕಿ ಜ್ವಾಲೆಯಲ್ಲಿ ಪೂರ್ಣ ಭಸ್ಮವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ನಗರಕ್ಕೆ ಹೊಂದಿಕೊಂಡಂತಿರುವ ಜಿಲ್ಲಾ ಪಂಚಾಯಿತಿ ಹಿಂಭಾಗದ ತುರ್ಚೆಗುಡ್ಡ ಮೀಸಲು ಅರಣ್ಯಕ್ಕೆ ಬೆಂಕಿ ಬಿದ್ದಿದ್ದು, ಭಾನುವಾರ ಸಂಜೆಯಾದರೂ ಬೆಂಕಿ ನಿಯಂತ್ರಣಕ್ಕೆ ಬಂದಿರಲಿಲ್ಲ.<br /> <br /> ಶನಿವಾರ ಮಧ್ಯಾಹ್ನವೇ ಬೆಂಕಿ ಕಾಣಿಸಿಕೊಂಡಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಸಕಾಲಕ್ಕೆ ಆಗಮಿಸಿ ಬೆಂಕಿ ನಂದಿಸದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಇಡೀ ಅರಣ್ಯಕ್ಕೆ ಹರಡಿದೆ ಎಂದು ಸ್ಥಳೀಯರು `ಪ್ರಜಾವಾಣಿ~ ಬಳಿ ದೂರಿದರು.<br /> <br /> `ಇಲಾಖೆ ಸಿಬ್ಬಂದಿಯನ್ನು ಸ್ಥಳಕ್ಕೆ ರವಾನಿಸಿದ್ದೇವೆ. ಬೆಂಕಿ ನಿಯಂತ್ರಣಕ್ಕೆ ಬಂದಿದೆ. 5ರಿಂದ 6 ಎಕರೆ ಅರಣ್ಯ ಪ್ರದೇಶ ಬೆಂಕಿಯಲ್ಲಿ ಬೆಂದುಹೋಗಿದೆ. ಬೆಂಕಿ ನೆಲಮಟ್ಟದಲ್ಲಿರುವುದರಿಂದ ಮರಗಳಿಗೆ ಹಾನಿಯಾಗಿಲ್ಲ. <br /> ನೆಲದಲ್ಲಿ ಹರಡಿರುವ ದರಗು, ಗಿಡಗಂಟಿ ಸುಟ್ಟು ಹೋಗಿವೆ~ ಎಂದು ಪ್ರಭಾರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವಾಣ್ ಹೇಳಿದರು. <br /> <br /> ಆದರೆ `ಪ್ರಜಾವಾಣಿ~ ಪ್ರತಿನಿಧಿ ಸ್ಥಳಕ್ಕೆ ಭೇಟಿ ನೀಡಿದಾಗ ಬೆಂಕಿ ಧಗಧಗನೇ ಉರಿಯುತ್ತಿತ್ತು. ಅರಣ್ಯ ಇಲಾಖೆಯ ಒಬ್ಬ ಸಿಬ್ಬಂದಿಯೂ ಸ್ಥಳದಲ್ಲಿ ಕಾಣಿಸಲಿಲ್ಲ. ಅರಣ್ಯದ ಅಕೇಶಿಯಾ ನೆಡುತೋಪು, ಗಿಡಗಂಟಿಗಳು ಬೆಂಕಿ ಜ್ವಾಲೆಯಲ್ಲಿ ಪೂರ್ಣ ಭಸ್ಮವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>