<p><strong>ದಾವಣಗೆರೆ:</strong> ಮಳೆಗಾಲದಲ್ಲಿ ರಾತ್ರಿ ವೇಳೆಯಲ್ಲಿ ಎದುರಾಗುವ ತುರ್ತು ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿ, ಸಿಬ್ಬಂದಿ ಒಳಗೊಂಡ ಕಾರ್ಯಪಡೆ ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಶಿವಶಂಕರಪ್ಪ ಸೂಚಿಸಿದರು.<br /> <br /> ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ನಗರಪಾಲಿಕೆ ಅಧಿಕಾರಿಗಳು ಮಳೆಗಾಲದಲ್ಲಿ ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.<br /> <br /> ಮಳೆ ಬಂದಾಗ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ತೊಂದರೆಯಾಗಿದೆ. ಇದನ್ನು ತಪ್ಪಿಸಲು ಚರಂಡಿಗಳು, ಒಳಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಹೂಳು ತುಂಬಿಕೊಂಡಿದ್ದರೆ ಕೂಡಲೇ ತೆರವುಗೊಳಿಸಬೇಕು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕು.</p>.<p>ಮನೆಗಳಿಗೆ ಹಾನಿಯಾಗಿದ್ದರೆ ತಕ್ಷಣ ಸ್ಪಂದಿಸಿ, ಸಂತ್ರಸ್ತರಿಗೆ ನೆರವು ದೊರಕಿಸಿಕೊಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.<br /> <br /> 5ನೇ ವಾರ್ಡ್ನ ಬೇತೂರು ರಸ್ತೆ, ಕೊರಚರಹಟ್ಟಿ, ಎಸ್ಪಿಎಸ್ ನಗರ, ರಿಂಗ್ ರೋಡ್, ಹೊಸ ಆರ್ಟಿಒ ಬಳಿ, ಶಿವನಗರ ಹಾಗೂ ರಿಂಗ್ ರಸ್ತೆಯ ಬಳಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯರ ಅಹವಾಲುಆಲಿಸಿದರು.<br /> <br /> ಶಿವನಗರ ಬಳಿಯ ದೊಡ್ಡ ಚರಂಡಿಯ ಹೂಳೆತ್ತಲು ರೂ 41 ಲಕ್ಷ ಅನುದಾನ ಮಂಜೂರಾಗಿದೆ. ವೇಗವಾಗಿ ಕಾಮಗಾರಿ ಮುಗಿಸಿ ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು. ಮಳೆಯಿಂದ ಹಾನಿಗೊಳಗಾಗಿ, ಸಂತ್ರಸ್ತರಾದವರಿಗೆ ಕೂಡಲೇ ವರದಿ ಪಡೆದು ಸರ್ಕಾರದಿಂದ ದೊರೆಯುವ ಪರಿಹಾರ ಬಿಡುಗಡೆಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.<br /> <br /> ನಗರಪಾಲಿಕೆ ಸದಸ್ಯರಾದ ದಿನೇಶ್ ಕೆ.ಶೆಟ್ಟಿ, ಪರಶುರಾಮ್, ಗೋಣೆಪ್ಪ, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಮಂಜುನಾಥ್ ಬಳ್ಳಾರಿ, ನಗರಪಾಲಿಕೆ ಮುಖ್ಯ ಎಂಜಿನಿಯರ್ ಬಿ.ಟಿ.ಮೋಹನ್ ಇದ್ದರು.<br /> <br /> <strong>ಚೆಕ್ ವಿತರಣೆ:</strong> ನಂತರ ಸಚಿವರು ಗೃಹ ಕಚೇರಿಯಲ್ಲಿ, ನಗರದಲ್ಲಿ `ದೂಡಾ' ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲ್ವೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾಮಗಾರಿಗೆ ಮೊದಲ ಕಂತಾಗಿ ಬಿಡುಗಡೆಯಾಗಿರುವ ರೂ 5 ಕೋಟಿ ಮೊತ್ತದ ಚೆಕ್ ಅನ್ನು ರೈಲ್ವೆ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಂಪತ್ಕುಮಾರ್ ಅವರಿಗೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮಳೆಗಾಲದಲ್ಲಿ ರಾತ್ರಿ ವೇಳೆಯಲ್ಲಿ ಎದುರಾಗುವ ತುರ್ತು ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿ, ಸಿಬ್ಬಂದಿ ಒಳಗೊಂಡ ಕಾರ್ಯಪಡೆ ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಶಿವಶಂಕರಪ್ಪ ಸೂಚಿಸಿದರು.<br /> <br /> ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ನಗರಪಾಲಿಕೆ ಅಧಿಕಾರಿಗಳು ಮಳೆಗಾಲದಲ್ಲಿ ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.<br /> <br /> ಮಳೆ ಬಂದಾಗ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ತೊಂದರೆಯಾಗಿದೆ. ಇದನ್ನು ತಪ್ಪಿಸಲು ಚರಂಡಿಗಳು, ಒಳಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಹೂಳು ತುಂಬಿಕೊಂಡಿದ್ದರೆ ಕೂಡಲೇ ತೆರವುಗೊಳಿಸಬೇಕು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕು.</p>.<p>ಮನೆಗಳಿಗೆ ಹಾನಿಯಾಗಿದ್ದರೆ ತಕ್ಷಣ ಸ್ಪಂದಿಸಿ, ಸಂತ್ರಸ್ತರಿಗೆ ನೆರವು ದೊರಕಿಸಿಕೊಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.<br /> <br /> 5ನೇ ವಾರ್ಡ್ನ ಬೇತೂರು ರಸ್ತೆ, ಕೊರಚರಹಟ್ಟಿ, ಎಸ್ಪಿಎಸ್ ನಗರ, ರಿಂಗ್ ರೋಡ್, ಹೊಸ ಆರ್ಟಿಒ ಬಳಿ, ಶಿವನಗರ ಹಾಗೂ ರಿಂಗ್ ರಸ್ತೆಯ ಬಳಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯರ ಅಹವಾಲುಆಲಿಸಿದರು.<br /> <br /> ಶಿವನಗರ ಬಳಿಯ ದೊಡ್ಡ ಚರಂಡಿಯ ಹೂಳೆತ್ತಲು ರೂ 41 ಲಕ್ಷ ಅನುದಾನ ಮಂಜೂರಾಗಿದೆ. ವೇಗವಾಗಿ ಕಾಮಗಾರಿ ಮುಗಿಸಿ ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು. ಮಳೆಯಿಂದ ಹಾನಿಗೊಳಗಾಗಿ, ಸಂತ್ರಸ್ತರಾದವರಿಗೆ ಕೂಡಲೇ ವರದಿ ಪಡೆದು ಸರ್ಕಾರದಿಂದ ದೊರೆಯುವ ಪರಿಹಾರ ಬಿಡುಗಡೆಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.<br /> <br /> ನಗರಪಾಲಿಕೆ ಸದಸ್ಯರಾದ ದಿನೇಶ್ ಕೆ.ಶೆಟ್ಟಿ, ಪರಶುರಾಮ್, ಗೋಣೆಪ್ಪ, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಮಂಜುನಾಥ್ ಬಳ್ಳಾರಿ, ನಗರಪಾಲಿಕೆ ಮುಖ್ಯ ಎಂಜಿನಿಯರ್ ಬಿ.ಟಿ.ಮೋಹನ್ ಇದ್ದರು.<br /> <br /> <strong>ಚೆಕ್ ವಿತರಣೆ:</strong> ನಂತರ ಸಚಿವರು ಗೃಹ ಕಚೇರಿಯಲ್ಲಿ, ನಗರದಲ್ಲಿ `ದೂಡಾ' ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲ್ವೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾಮಗಾರಿಗೆ ಮೊದಲ ಕಂತಾಗಿ ಬಿಡುಗಡೆಯಾಗಿರುವ ರೂ 5 ಕೋಟಿ ಮೊತ್ತದ ಚೆಕ್ ಅನ್ನು ರೈಲ್ವೆ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಂಪತ್ಕುಮಾರ್ ಅವರಿಗೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>