<p><strong>ಬೆಂಗಳೂರು: </strong>ತುರ್ತು ಸಂದರ್ಭಗಳ ನಿರ್ವಹಣೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದರು.<br /> <br /> ಗೃಹ ರಕ್ಷಕ, ಪೌರರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶನಾಲಯವು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ವಿಪತ್ತು ಕಡಿತ ದಿನಾಚರಣೆ ಮತ್ತು ರ್್ಯಾಲಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಬ್ರಿಟೀಷರು ಆರಂಭಿಸಿದ ಪೌರ ರಕ್ಷಣಾ ಪಡೆಗಳನ್ನು ನಾವು ಅದೇ ಸ್ವರೂಪದಲ್ಲಿಯೆ ಉಳಿಸಿಕೊಂಡಿದ್ದೇವೆ. ಅವುಗಳನ್ನು ಈಗಿನ ಅಗತ್ಯಗಳಿಗೆ ಪೂರಕವಾಗಿ ಆಧುನೀಕರಿಸಬೇಕು. ಮೂಲ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು’ ಎಂದರು.<br /> <br /> ‘ಪೌರ ರಕ್ಷಣೆಯೂ ಸೇನಾ ಪಡೆಗಳಷ್ಟೆ ಮಹತ್ವ ಹೊಂದಿದೆ. ಸರ್ಕಾರಿ ಸಂಸ್ಥೆಗಳು, ಸರ್ಕಾರೇತರ ಸಂಘಟನೆಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಪೌರ ರಕ್ಷಣೆಯ ಜವಾಬ್ದಾರಿ ವಹಿಸಿಕೊಂಡಾಗ ಮಾತ್ರ ವಿಪತ್ತುಗಳನ್ನು ಎದುರಿಸಲು ಸಾಧ್ಯ’ ಎಂದರು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಮಾತನಾಡಿ, ‘ಪ್ರಾಕೃತಿಕ ವಿಕೋಪ, ಬೆಂಕಿ ಅವಘಡ, ಕಟ್ಟಡ ಕುಸಿತ ಮುಂತಾದ ಸಂದರ್ಭದಲ್ಲಿ ಕರ್ನಾಟಕ ಪೌರ ರಕ್ಷಣಾ ಸಿಬ್ಬಂದಿಗಳು ಉತ್ತಮ ಸೇವೆಯನ್ನು ನೀಡಿದ್ದು ದುರಂತಗಳ ಪ್ರಮಾಣವನ್ನು ತಗ್ಗಿಸಿದ್ದಾರೆ’ ಎಂದರು.<br /> <br /> ಇದೇ ಸಂದರ್ಭದಲ್ಲಿ ಅಗ್ನಿ ಶಾಮಕ, ಪೌರ ರಕ್ಷಣೆ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಗಳು ಬೆಂಕಿ ಅವಘಡ, ಬಾಂಬ್ ಸ್ಫೋಟ ಸಂದರ್ಭಗಳ ನಿರ್ವಹಣೆ ಬಗ್ಗೆ ಅಣುಕು ಪ್ರದರ್ಶನವನ್ನು ಪ್ರಸ್ತುತ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತುರ್ತು ಸಂದರ್ಭಗಳ ನಿರ್ವಹಣೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದರು.<br /> <br /> ಗೃಹ ರಕ್ಷಕ, ಪೌರರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶನಾಲಯವು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ವಿಪತ್ತು ಕಡಿತ ದಿನಾಚರಣೆ ಮತ್ತು ರ್್ಯಾಲಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಬ್ರಿಟೀಷರು ಆರಂಭಿಸಿದ ಪೌರ ರಕ್ಷಣಾ ಪಡೆಗಳನ್ನು ನಾವು ಅದೇ ಸ್ವರೂಪದಲ್ಲಿಯೆ ಉಳಿಸಿಕೊಂಡಿದ್ದೇವೆ. ಅವುಗಳನ್ನು ಈಗಿನ ಅಗತ್ಯಗಳಿಗೆ ಪೂರಕವಾಗಿ ಆಧುನೀಕರಿಸಬೇಕು. ಮೂಲ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು’ ಎಂದರು.<br /> <br /> ‘ಪೌರ ರಕ್ಷಣೆಯೂ ಸೇನಾ ಪಡೆಗಳಷ್ಟೆ ಮಹತ್ವ ಹೊಂದಿದೆ. ಸರ್ಕಾರಿ ಸಂಸ್ಥೆಗಳು, ಸರ್ಕಾರೇತರ ಸಂಘಟನೆಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಪೌರ ರಕ್ಷಣೆಯ ಜವಾಬ್ದಾರಿ ವಹಿಸಿಕೊಂಡಾಗ ಮಾತ್ರ ವಿಪತ್ತುಗಳನ್ನು ಎದುರಿಸಲು ಸಾಧ್ಯ’ ಎಂದರು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಮಾತನಾಡಿ, ‘ಪ್ರಾಕೃತಿಕ ವಿಕೋಪ, ಬೆಂಕಿ ಅವಘಡ, ಕಟ್ಟಡ ಕುಸಿತ ಮುಂತಾದ ಸಂದರ್ಭದಲ್ಲಿ ಕರ್ನಾಟಕ ಪೌರ ರಕ್ಷಣಾ ಸಿಬ್ಬಂದಿಗಳು ಉತ್ತಮ ಸೇವೆಯನ್ನು ನೀಡಿದ್ದು ದುರಂತಗಳ ಪ್ರಮಾಣವನ್ನು ತಗ್ಗಿಸಿದ್ದಾರೆ’ ಎಂದರು.<br /> <br /> ಇದೇ ಸಂದರ್ಭದಲ್ಲಿ ಅಗ್ನಿ ಶಾಮಕ, ಪೌರ ರಕ್ಷಣೆ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಗಳು ಬೆಂಕಿ ಅವಘಡ, ಬಾಂಬ್ ಸ್ಫೋಟ ಸಂದರ್ಭಗಳ ನಿರ್ವಹಣೆ ಬಗ್ಗೆ ಅಣುಕು ಪ್ರದರ್ಶನವನ್ನು ಪ್ರಸ್ತುತ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>