<p>ಕುಶಾಲನಗರ: ಕೊಡಗಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ತಲಕಾವೇರಿಯಲ್ಲಿ ಸೋಮವಾರ ರಾತ್ರಿ ಕಾವೇರಿ ತೀರ್ಥೋದ್ಭವದ ಸಂದರ್ಭ ಸಂಗ್ರಹಿಸಿದ ತೀರ್ಥವನ್ನು ಮಂಗಳವಾರ ಇಲ್ಲಿನ ಕಾವೇರಿ ನದಿಯ ಸೇತುವೆ ಬಳಿ ಕಾವೇರಿ ಪ್ರತಿಮೆ ನಿರ್ಮಾಣ ಸಮಿತಿ ವತಿಯಿಂದ ಭಕ್ತಾದಿಗಳಿಗೆ ವಿತರಿಸಲಾಯಿತು.<br /> <br /> ತುಲಾ ಸಂಕ್ರಮಣದ ಅಂಗವಾಗಿ ಸಮಿತಿ ವತಿಯಿಂದ ನಾಗರಿಕರಿಗೆ ಕಾವೇರಿ ತೀರ್ಥ ವಿತರಿಸಿ ನಂತರ ಅನ್ನ ಸಂತರ್ಪಣೆ ಮಾಡಲಾಯಿತು. <br /> <br /> ಕಾವೇರಿ ತೀರ್ಥ ಸ್ವೀಕರಿಸಿ ರಸ್ತೆಬದಿ ಸಸಿನೆಟ್ಟು ಮಾತನಾಡಿದ ಸಂಸದ ಎಚ್.ವಿಶ್ವನಾಥ್, ಸಮಿತಿ ವತಿಯಿಂದ ನಿರ್ಮಿಸಲುದ್ದೇಶಿಸಿರುವ ಕಾವೇರಿ ಪ್ರತಿಮೆ ನಿರ್ಮಾಣಕ್ಕೆ ತಾವು ಅಗತ್ಯ ಸಹಕಾರ ನೀಡಲಾಗುವುದು ಎಂದ ಅವರು, ಜೀವನದಿ ಕಾವೇರಿಯಿಂದ ನಾಡಿನ ಜನತೆಗೆ ಸುಭೀಕ್ಷೆ, ಸುಖ- ಶಾಂತಿ, ನೆಮ್ಮದಿ ಲಭಿಸಲಿ ಎಂದು ನುಡಿದರು. <br /> <br /> ಸಮಿತಿ ಅಧ್ಯಕ್ಷ ಬಬೀಂದ್ರಪ್ರಸಾದ್ ಸಮಿತಿ ವತಿಯಿಂದ ರೂ.15 ಲಕ್ಷ ವೆಚ್ಚದಲ್ಲಿ ಕುಶಾಲನಗರ ಪಟ್ಟಣದ ಪ್ರವೇಶ ದ್ವಾರವಾದ ನದಿದಂಡೆಯ ಸೇತುವೆ ಬಳಿ ನಿರ್ಮಿಸಲಿರುವ ಕಾವೇರಿ ಪ್ರತಿಮೆ ನಿರ್ಮಾಣಕ್ಕೆ ಜನಪ್ರತಿನಿಧಿಗಳು, ದಾನಿಗಳ ಸಹಕಾರ ಕೋರಿದರು.<br /> <br /> ಜಿ.ಪಂ.ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಪ.ಪಂ.ಸದಸ್ಯ ಅಬ್ದುಲ್ ಖಾದರ್, ಉದ್ಯಮಿಗಳಾದ ಎಸ್ಎಲ್ಎನ್ ಕಾಫಿ ಕಂಪೆನಿಯ ವಿಶ್ವನಾಥ್, ವಿಶ್ವ ಕಾರ್ಯಪ್ಪ, ಮುಖಂಡರಾದ ಜೆ.ಪಿ.ಅರಸ್, ಬಿ.ಎಸ್.ಚಂದ್ರಶೇಖರ್, ಸಮಿತಿ ಪದಾಧಿಕಾರಿಗಳಾದ ರವೀಂದ್ರಪ್ರಸಾದ್, ಚಂದ್ರಮೋಹನ್, ವಿಜೇಂದ್ರಪ್ರಸಾದ್, ವನಿತಾ, ಎನ್ಎಸ್ಎಸ್ ಅಧಿಕಾರಿ ಸಬಲಂ ಭೋಜಣ್ಣರೆಡ್ಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಕೊಡಗಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ತಲಕಾವೇರಿಯಲ್ಲಿ ಸೋಮವಾರ ರಾತ್ರಿ ಕಾವೇರಿ ತೀರ್ಥೋದ್ಭವದ ಸಂದರ್ಭ ಸಂಗ್ರಹಿಸಿದ ತೀರ್ಥವನ್ನು ಮಂಗಳವಾರ ಇಲ್ಲಿನ ಕಾವೇರಿ ನದಿಯ ಸೇತುವೆ ಬಳಿ ಕಾವೇರಿ ಪ್ರತಿಮೆ ನಿರ್ಮಾಣ ಸಮಿತಿ ವತಿಯಿಂದ ಭಕ್ತಾದಿಗಳಿಗೆ ವಿತರಿಸಲಾಯಿತು.<br /> <br /> ತುಲಾ ಸಂಕ್ರಮಣದ ಅಂಗವಾಗಿ ಸಮಿತಿ ವತಿಯಿಂದ ನಾಗರಿಕರಿಗೆ ಕಾವೇರಿ ತೀರ್ಥ ವಿತರಿಸಿ ನಂತರ ಅನ್ನ ಸಂತರ್ಪಣೆ ಮಾಡಲಾಯಿತು. <br /> <br /> ಕಾವೇರಿ ತೀರ್ಥ ಸ್ವೀಕರಿಸಿ ರಸ್ತೆಬದಿ ಸಸಿನೆಟ್ಟು ಮಾತನಾಡಿದ ಸಂಸದ ಎಚ್.ವಿಶ್ವನಾಥ್, ಸಮಿತಿ ವತಿಯಿಂದ ನಿರ್ಮಿಸಲುದ್ದೇಶಿಸಿರುವ ಕಾವೇರಿ ಪ್ರತಿಮೆ ನಿರ್ಮಾಣಕ್ಕೆ ತಾವು ಅಗತ್ಯ ಸಹಕಾರ ನೀಡಲಾಗುವುದು ಎಂದ ಅವರು, ಜೀವನದಿ ಕಾವೇರಿಯಿಂದ ನಾಡಿನ ಜನತೆಗೆ ಸುಭೀಕ್ಷೆ, ಸುಖ- ಶಾಂತಿ, ನೆಮ್ಮದಿ ಲಭಿಸಲಿ ಎಂದು ನುಡಿದರು. <br /> <br /> ಸಮಿತಿ ಅಧ್ಯಕ್ಷ ಬಬೀಂದ್ರಪ್ರಸಾದ್ ಸಮಿತಿ ವತಿಯಿಂದ ರೂ.15 ಲಕ್ಷ ವೆಚ್ಚದಲ್ಲಿ ಕುಶಾಲನಗರ ಪಟ್ಟಣದ ಪ್ರವೇಶ ದ್ವಾರವಾದ ನದಿದಂಡೆಯ ಸೇತುವೆ ಬಳಿ ನಿರ್ಮಿಸಲಿರುವ ಕಾವೇರಿ ಪ್ರತಿಮೆ ನಿರ್ಮಾಣಕ್ಕೆ ಜನಪ್ರತಿನಿಧಿಗಳು, ದಾನಿಗಳ ಸಹಕಾರ ಕೋರಿದರು.<br /> <br /> ಜಿ.ಪಂ.ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಪ.ಪಂ.ಸದಸ್ಯ ಅಬ್ದುಲ್ ಖಾದರ್, ಉದ್ಯಮಿಗಳಾದ ಎಸ್ಎಲ್ಎನ್ ಕಾಫಿ ಕಂಪೆನಿಯ ವಿಶ್ವನಾಥ್, ವಿಶ್ವ ಕಾರ್ಯಪ್ಪ, ಮುಖಂಡರಾದ ಜೆ.ಪಿ.ಅರಸ್, ಬಿ.ಎಸ್.ಚಂದ್ರಶೇಖರ್, ಸಮಿತಿ ಪದಾಧಿಕಾರಿಗಳಾದ ರವೀಂದ್ರಪ್ರಸಾದ್, ಚಂದ್ರಮೋಹನ್, ವಿಜೇಂದ್ರಪ್ರಸಾದ್, ವನಿತಾ, ಎನ್ಎಸ್ಎಸ್ ಅಧಿಕಾರಿ ಸಬಲಂ ಭೋಜಣ್ಣರೆಡ್ಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>