<p>ಬೆಂಗಳೂರು: ತೂಕ ಮತ್ತು ಅಳತೆಯಲ್ಲಿ ವಂಚನೆಗೊಳಗಾಗುವ ಗ್ರಾಹಕರು ದೂರು ಸಲ್ಲಿಸಿದಲ್ಲಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಕಾನೂನು ಮಾಪನಶಾಸ್ತ್ರ ಇಲಾಖೆಯ ಮುಖ್ಯ ನಿಯಂತ್ರಕ ಷಡಕ್ಷರಿಸ್ವಾಮಿ ಗುರುವಾರ ಇಲ್ಲಿ ಭರವಸೆ ನೀಡಿದರು.<br /> <br /> ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನ ಯಶವಂತಪುರದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ರಾಹಕ ಜಾಗೃತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.<br /> <br /> `ರಾಜ್ಯದಲ್ಲಿ ವಿವಿಧ ರೀತಿಯ ವ್ಯಾಪಾರ ಮಾಡುವಂತಹ ಆರೇಳು ಲಕ್ಷ ವ್ಯಾಪಾರಿಗಳಿದ್ದು, ಈ ಪೈಕಿ 4.5 ಲಕ್ಷ ವ್ಯಾಪಾರಿಗಳು ತೂಕ ಮತ್ತು ಅಳತೆ ಸಾಧನೆಗಳನ್ನು ಬಳಸುತ್ತಿದ್ದಾರೆ. ತೂಕ ಮತ್ತು ಅಳತೆಯಲ್ಲಿ ಗ್ರಾಹಕರನ್ನು ವಂಚಿಸಿದ ಆರೋಪದ ಮೇರೆಗೆ ಇಲಾಖೆಯು ಕಳೆದ ವರ್ಷ 36 ಸಾವಿರ ಪ್ರಕರಣಗಳನ್ನು ದಾಖಲಿಸಿದೆ~ ಎಂದು ಅವರು ತಿಳಿಸಿದರು.<br /> <br /> `ಬೆಂಗಳೂರಿನಲ್ಲಿ ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಹಾಲಿನ ಪೊಟ್ಟಣಗಳನ್ನು ಗ್ರಾಹಕರಿಗೆ ಪೂರೈಸುತ್ತಿದ್ದವರ ವಿರುದ್ಧ ಇತ್ತೀಚೆಗಷ್ಟೇ 25 ಪ್ರಕರಣ ದಾಖಲಿಸಲಾಗಿದೆ~ ಎಂದು ಅವರು ಮಾಹಿತಿ ನೀಡಿದರು.<br /> <br /> `ಬೀದರ್ನಿಂದ ಚಾಮರಾಜನಗರದವರೆಗೆ ಇಲಾಖೆ ಅನಿರೀಕ್ಷಿತ ದಾಳಿ ನಡೆಸಿ ತೂಕ ಮತ್ತು ಅಳತೆಯಲ್ಲಾಗುವ ವಂಚನೆ ಪ್ರಕರಣಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುತ್ತಿದೆ. ಆದರೆ, ಇಲಾಖೆಯಲ್ಲಿನ ಕೇವಲ 150 ಮಂದಿ ಕಾರ್ಯನಿರ್ವಾಹಕರಿಂದಲೇ ವ್ಯವಸ್ಥೆಯನ್ನು ಸಂಪೂರ್ಣ ಸುಧಾರಿಸಲು ಕಷ್ಟ. ಈ ಹಿನ್ನೆಲೆಯಲ್ಲಿ ಗ್ರಾಹಕರು ವಂಚನೆಗೊಳಗಾಗುವ ನಿರ್ದಿಷ್ಟ ಪ್ರಕರಣಗಳ ಬಗ್ಗೆ ಇಲಾಖೆಗೆ ದೂರು ಸಲ್ಲಿಸಿದಲ್ಲಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.<br /> <br /> ಕಾನೂನುಮಾಪನಶಾಸ್ತ್ರ ಇಲಾಖೆಯ ಉಪ ನಿರೀಕ್ಷಕ ಮಲ್ಲಿಕಾರ್ಜುನಯ್ಯ ಮಾತನಾಡಿ, `ತೂಕ ಮತ್ತು ಅಳತೆ ಮನುಷ್ಯನ ಹುಟ್ಟಿನಿಂದಲೇ ಶುರುವಾಗುತ್ತದೆ. ಅಂತೆಯೇ, ದಿನನಿತ್ಯ ಗ್ರಾಹಕ ಒಂದಲ್ಲಾ ಒಂದು ರೀತಿಯಲ್ಲಿ ತೂಕ ಮತ್ತು ಅಳತೆಯಲ್ಲಿ ಮೋಸ ಹೋಗುತ್ತಾನೆ. <br /> <br /> ಇದನ್ನು ತಡೆಯಲು ಇಲಾಖೆ ಪ್ರತಿ 12 ತಿಂಗಳಿಗೊಮ್ಮೆ ವ್ಯಾಪಾರಿಗಳು ಬಳಸುವಂತಹ ತೂಕ ಮತ್ತು ಅಳತೆಯ ಸಾಧನಗಳನ್ನು ಸರ್ಕಾರಿ ಮಾನಕಗಳೊಂದಿಗೆ ಹೋಲಿಕೆ ಮಾಡಿ ಮುದ್ರೆ ಹಾಕುವುದರ ಜತೆಗೆ, ಪ್ರಮಾಣ ಪತ್ರಗಳನ್ನು ನೀಡುತ್ತಿದೆ~ ಎಂದರು. <br /> <br /> `ಗ್ರಾಹಕರು ತೂಕ ಮತ್ತು ಅಳತೆಯಲ್ಲಿ ಮೋಸ ಹೋದಾಗ ಇಲಾಖೆಗೆ ದೂರು ನೀಡಬೇಕು. ಇದರಿಂದ ತಪ್ಪಿತಸ್ಥರ ವಿರುದ್ಧ ಕಾನೂನುರೀತ್ಯ ದಂಡ ವಿಧಿಸಲು ಸಹಕಾರಿಯಾಗಲಿದೆ. ಒಂದು ವೇಳೆ ತಪ್ಪಿತಸ್ಥರು ನ್ಯಾಯಾಲಯದ ಮೊರೆ ಹೋದರೂ ಇಲಾಖೆ ಕಾನೂನು ಹೋರಾಟ ನಡೆಸಲು ಅನುಕೂಲವಾಗಲಿದೆ.<br /> <br /> ಈ ರೀತಿ ಗ್ರಾಹಕರನ್ನು ವಂಚಿಸುವ ವ್ಯಾಪಾರಸ್ಥರಿಗೆ 5ರಿಂದ 25 ಸಾವಿರ ರೂಪಾಯಿ ದಂಡ ವಿಧಿಸಲು ಅವಕಾಶವಿದೆ. ಮೂರನೇ ಬಾರಿ ಮಾಡುವಂತಹ ತಪ್ಪಿಗೆ ಜೈಲು ಶಿಕ್ಷೆ ಕೂಡ ವಿಧಿಸಬಹುದಾಗಿದೆ~ ಎಂದರು.<br /> ಕಾನೂನು ಮಾಪನಶಾಸ್ತ್ರ ಇಲಾಖೆಯ ನಿರೀಕ್ಷಕ ಎಸ್.ಬಿ. ಸುಧಾಕರ್ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ತೂಕ ಮತ್ತು ಅಳತೆಯಲ್ಲಿ ವಂಚನೆಗೊಳಗಾಗುವ ಗ್ರಾಹಕರು ದೂರು ಸಲ್ಲಿಸಿದಲ್ಲಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಕಾನೂನು ಮಾಪನಶಾಸ್ತ್ರ ಇಲಾಖೆಯ ಮುಖ್ಯ ನಿಯಂತ್ರಕ ಷಡಕ್ಷರಿಸ್ವಾಮಿ ಗುರುವಾರ ಇಲ್ಲಿ ಭರವಸೆ ನೀಡಿದರು.<br /> <br /> ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನ ಯಶವಂತಪುರದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ರಾಹಕ ಜಾಗೃತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.<br /> <br /> `ರಾಜ್ಯದಲ್ಲಿ ವಿವಿಧ ರೀತಿಯ ವ್ಯಾಪಾರ ಮಾಡುವಂತಹ ಆರೇಳು ಲಕ್ಷ ವ್ಯಾಪಾರಿಗಳಿದ್ದು, ಈ ಪೈಕಿ 4.5 ಲಕ್ಷ ವ್ಯಾಪಾರಿಗಳು ತೂಕ ಮತ್ತು ಅಳತೆ ಸಾಧನೆಗಳನ್ನು ಬಳಸುತ್ತಿದ್ದಾರೆ. ತೂಕ ಮತ್ತು ಅಳತೆಯಲ್ಲಿ ಗ್ರಾಹಕರನ್ನು ವಂಚಿಸಿದ ಆರೋಪದ ಮೇರೆಗೆ ಇಲಾಖೆಯು ಕಳೆದ ವರ್ಷ 36 ಸಾವಿರ ಪ್ರಕರಣಗಳನ್ನು ದಾಖಲಿಸಿದೆ~ ಎಂದು ಅವರು ತಿಳಿಸಿದರು.<br /> <br /> `ಬೆಂಗಳೂರಿನಲ್ಲಿ ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಹಾಲಿನ ಪೊಟ್ಟಣಗಳನ್ನು ಗ್ರಾಹಕರಿಗೆ ಪೂರೈಸುತ್ತಿದ್ದವರ ವಿರುದ್ಧ ಇತ್ತೀಚೆಗಷ್ಟೇ 25 ಪ್ರಕರಣ ದಾಖಲಿಸಲಾಗಿದೆ~ ಎಂದು ಅವರು ಮಾಹಿತಿ ನೀಡಿದರು.<br /> <br /> `ಬೀದರ್ನಿಂದ ಚಾಮರಾಜನಗರದವರೆಗೆ ಇಲಾಖೆ ಅನಿರೀಕ್ಷಿತ ದಾಳಿ ನಡೆಸಿ ತೂಕ ಮತ್ತು ಅಳತೆಯಲ್ಲಾಗುವ ವಂಚನೆ ಪ್ರಕರಣಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುತ್ತಿದೆ. ಆದರೆ, ಇಲಾಖೆಯಲ್ಲಿನ ಕೇವಲ 150 ಮಂದಿ ಕಾರ್ಯನಿರ್ವಾಹಕರಿಂದಲೇ ವ್ಯವಸ್ಥೆಯನ್ನು ಸಂಪೂರ್ಣ ಸುಧಾರಿಸಲು ಕಷ್ಟ. ಈ ಹಿನ್ನೆಲೆಯಲ್ಲಿ ಗ್ರಾಹಕರು ವಂಚನೆಗೊಳಗಾಗುವ ನಿರ್ದಿಷ್ಟ ಪ್ರಕರಣಗಳ ಬಗ್ಗೆ ಇಲಾಖೆಗೆ ದೂರು ಸಲ್ಲಿಸಿದಲ್ಲಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.<br /> <br /> ಕಾನೂನುಮಾಪನಶಾಸ್ತ್ರ ಇಲಾಖೆಯ ಉಪ ನಿರೀಕ್ಷಕ ಮಲ್ಲಿಕಾರ್ಜುನಯ್ಯ ಮಾತನಾಡಿ, `ತೂಕ ಮತ್ತು ಅಳತೆ ಮನುಷ್ಯನ ಹುಟ್ಟಿನಿಂದಲೇ ಶುರುವಾಗುತ್ತದೆ. ಅಂತೆಯೇ, ದಿನನಿತ್ಯ ಗ್ರಾಹಕ ಒಂದಲ್ಲಾ ಒಂದು ರೀತಿಯಲ್ಲಿ ತೂಕ ಮತ್ತು ಅಳತೆಯಲ್ಲಿ ಮೋಸ ಹೋಗುತ್ತಾನೆ. <br /> <br /> ಇದನ್ನು ತಡೆಯಲು ಇಲಾಖೆ ಪ್ರತಿ 12 ತಿಂಗಳಿಗೊಮ್ಮೆ ವ್ಯಾಪಾರಿಗಳು ಬಳಸುವಂತಹ ತೂಕ ಮತ್ತು ಅಳತೆಯ ಸಾಧನಗಳನ್ನು ಸರ್ಕಾರಿ ಮಾನಕಗಳೊಂದಿಗೆ ಹೋಲಿಕೆ ಮಾಡಿ ಮುದ್ರೆ ಹಾಕುವುದರ ಜತೆಗೆ, ಪ್ರಮಾಣ ಪತ್ರಗಳನ್ನು ನೀಡುತ್ತಿದೆ~ ಎಂದರು. <br /> <br /> `ಗ್ರಾಹಕರು ತೂಕ ಮತ್ತು ಅಳತೆಯಲ್ಲಿ ಮೋಸ ಹೋದಾಗ ಇಲಾಖೆಗೆ ದೂರು ನೀಡಬೇಕು. ಇದರಿಂದ ತಪ್ಪಿತಸ್ಥರ ವಿರುದ್ಧ ಕಾನೂನುರೀತ್ಯ ದಂಡ ವಿಧಿಸಲು ಸಹಕಾರಿಯಾಗಲಿದೆ. ಒಂದು ವೇಳೆ ತಪ್ಪಿತಸ್ಥರು ನ್ಯಾಯಾಲಯದ ಮೊರೆ ಹೋದರೂ ಇಲಾಖೆ ಕಾನೂನು ಹೋರಾಟ ನಡೆಸಲು ಅನುಕೂಲವಾಗಲಿದೆ.<br /> <br /> ಈ ರೀತಿ ಗ್ರಾಹಕರನ್ನು ವಂಚಿಸುವ ವ್ಯಾಪಾರಸ್ಥರಿಗೆ 5ರಿಂದ 25 ಸಾವಿರ ರೂಪಾಯಿ ದಂಡ ವಿಧಿಸಲು ಅವಕಾಶವಿದೆ. ಮೂರನೇ ಬಾರಿ ಮಾಡುವಂತಹ ತಪ್ಪಿಗೆ ಜೈಲು ಶಿಕ್ಷೆ ಕೂಡ ವಿಧಿಸಬಹುದಾಗಿದೆ~ ಎಂದರು.<br /> ಕಾನೂನು ಮಾಪನಶಾಸ್ತ್ರ ಇಲಾಖೆಯ ನಿರೀಕ್ಷಕ ಎಸ್.ಬಿ. ಸುಧಾಕರ್ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>