<p> ಚೆನ್ನೈ(ಪಿಟಿಐ/ಐಎಎನ್ಎಸ್): ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ - ಡಿಎಂಕೆ ಸೀಟು ಹಂಚಿಕೆ ತೊಡಕಾಗಿ ಪರಿಣಮಿಸಿದ್ದು, 7 ವರ್ಷದ ಮೈತ್ರಿ ಮುರಿದು ಬೀಳುವ ಸಂಭವ ಹೆಚ್ಚಾಗಿದೆ.</p>.<p>ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಹಾಗೂ ಉಪಮುಖ್ಯಮಂತ್ರಿ ಸ್ಟಾಲಿನ್ ಅವರು ಇಲ್ಲಿನ ಪಕ್ಷದ ಮುಖ್ಯ ಕಚೇರಿಯಲ್ಲಿ ತಮ್ಮ ಪಕ್ಷದ ಮುಖಂಡರ ಜತೆಗೆ ಶನಿವಾರ ಬೆಳಿಗ್ಗೆ ಸೀಟು ಹಂಚಿಕೆ ಸಂಬಂಧ ಮಾತುಕತೆ ನಡೆಸಿದರು.</p>.<p>ಪ್ರಸ್ತುತ ಕಾಂಗ್ರೆಸ್ ಒಟ್ಟು 234 ಕ್ಷೇತ್ರಗಳಲ್ಲಿ 63 ಕ್ಷೇತ್ರಗಳನ್ನು ತನಗೆ ಬಿಟ್ಟು ಕೊಡಬೇಕೆಂದು ಡಿಎಂಕೆಯನ್ನು ಒತ್ತಾಯಿಸುತ್ತಿದೆ. ಆದರೆ ಡಿಎಂಕೆ ಇದಕ್ಕೆ ಸಮ್ಮತಿಸುತ್ತಿಲ್ಲ. ಉಭಯ ಪಕ್ಷಗಳು ಕೇವಲ ದೂರವಾಣಿ ಮುಖಾಂತರವೇ ಮಾತುಕತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.</p>.<p>ಡಿಎಂಕೆ ಯು ಕಾಂಗ್ರೆಸ್ ಬೇಡಿಕೆ ನ್ಯಾಯಯುತವಾಗಿಲ್ಲ ಎಂದು ಟೀಕಿಸಿದ್ದು, ಶನಿವಾರ ಮೈತ್ರಿ ಮುಂದುವರೆಸಬೇಕೆ ಬೇಡವೆ ಎಂಬುದನ್ನು ನಿರ್ಧರಿಸುವುದಾಗಿ ಈಗಾಗಲೇ ತಿಳಿಸಿವೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ತನ್ನ ಬೇಡಿಕೆಯಲ್ಲಿ ಸ್ವಲ್ಪಮಟ್ಟಿಗೆ ಕಡಿಮೆಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದೆ.</p>.<p>ಸಣ್ಣಪುಟ್ಟ ಪಕ್ಷಗಳು ಈಗಾಗಲೇ ಕಾಂಗ್ರೆಸ್ ವಿರುದ್ಧ ಈಗಾಗಲೇ ದನಿ ಎತ್ತಿದ್ದು, ಮೈತ್ರಿಕೂಟದಲ್ಲಿ ಬಿರುಕು ಸ್ವಷ್ಟವಾಗಿಯೇ ಕಾಣಹತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> ಚೆನ್ನೈ(ಪಿಟಿಐ/ಐಎಎನ್ಎಸ್): ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ - ಡಿಎಂಕೆ ಸೀಟು ಹಂಚಿಕೆ ತೊಡಕಾಗಿ ಪರಿಣಮಿಸಿದ್ದು, 7 ವರ್ಷದ ಮೈತ್ರಿ ಮುರಿದು ಬೀಳುವ ಸಂಭವ ಹೆಚ್ಚಾಗಿದೆ.</p>.<p>ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಹಾಗೂ ಉಪಮುಖ್ಯಮಂತ್ರಿ ಸ್ಟಾಲಿನ್ ಅವರು ಇಲ್ಲಿನ ಪಕ್ಷದ ಮುಖ್ಯ ಕಚೇರಿಯಲ್ಲಿ ತಮ್ಮ ಪಕ್ಷದ ಮುಖಂಡರ ಜತೆಗೆ ಶನಿವಾರ ಬೆಳಿಗ್ಗೆ ಸೀಟು ಹಂಚಿಕೆ ಸಂಬಂಧ ಮಾತುಕತೆ ನಡೆಸಿದರು.</p>.<p>ಪ್ರಸ್ತುತ ಕಾಂಗ್ರೆಸ್ ಒಟ್ಟು 234 ಕ್ಷೇತ್ರಗಳಲ್ಲಿ 63 ಕ್ಷೇತ್ರಗಳನ್ನು ತನಗೆ ಬಿಟ್ಟು ಕೊಡಬೇಕೆಂದು ಡಿಎಂಕೆಯನ್ನು ಒತ್ತಾಯಿಸುತ್ತಿದೆ. ಆದರೆ ಡಿಎಂಕೆ ಇದಕ್ಕೆ ಸಮ್ಮತಿಸುತ್ತಿಲ್ಲ. ಉಭಯ ಪಕ್ಷಗಳು ಕೇವಲ ದೂರವಾಣಿ ಮುಖಾಂತರವೇ ಮಾತುಕತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.</p>.<p>ಡಿಎಂಕೆ ಯು ಕಾಂಗ್ರೆಸ್ ಬೇಡಿಕೆ ನ್ಯಾಯಯುತವಾಗಿಲ್ಲ ಎಂದು ಟೀಕಿಸಿದ್ದು, ಶನಿವಾರ ಮೈತ್ರಿ ಮುಂದುವರೆಸಬೇಕೆ ಬೇಡವೆ ಎಂಬುದನ್ನು ನಿರ್ಧರಿಸುವುದಾಗಿ ಈಗಾಗಲೇ ತಿಳಿಸಿವೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ತನ್ನ ಬೇಡಿಕೆಯಲ್ಲಿ ಸ್ವಲ್ಪಮಟ್ಟಿಗೆ ಕಡಿಮೆಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದೆ.</p>.<p>ಸಣ್ಣಪುಟ್ಟ ಪಕ್ಷಗಳು ಈಗಾಗಲೇ ಕಾಂಗ್ರೆಸ್ ವಿರುದ್ಧ ಈಗಾಗಲೇ ದನಿ ಎತ್ತಿದ್ದು, ಮೈತ್ರಿಕೂಟದಲ್ಲಿ ಬಿರುಕು ಸ್ವಷ್ಟವಾಗಿಯೇ ಕಾಣಹತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>