<p>ಎಚ್.ಡಿ. ಕೋಟೆ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಒಂದೆಡೆ ರೈತರು ಕೃಷಿ ಚಟುವಟಿಕೆಯಲ್ಲಿ ಸಂತಸದಿಂದ ತೊಡಗಿದ್ದಾರೆ. ಆದರೆ ಇನ್ನೊಂದೆಡೆ ತೆಂಗಿನ ಮರಗಳ ಸುಳಿ ಒಣಗಿ ಹೋಗುತ್ತಿರುವುದು ತೆಂಗು ಬೆಳೆಗಾರರ ನಿದ್ದೆಗೆಡಿಸಿದೆ.<br /> <br /> ತಾಲ್ಲೂಕಿನ ರಾಜೇಗೌಡನಹುಂಡಿ ಗ್ರಾಮದ ರೈತ ಸೋಮಣ್ಣಾಚಾರಿ ಅವರ 2 ಎಕರೆ ಜಮೀನಿನಲ್ಲಿ ತೆಂಗಿನ ಮರಗಳನ್ನು ಬೆಳೆಸಲಾಗಿದೆ. ಆದರೆ ಆ ಮರಗಳು ಕಳೆದ 2 ವರ್ಷಗಳಿಂದ ನೀರಿಲ್ಲದೇ ಒಣಗಿ ನಿಂತಿದ್ದು ತೆಂಗಿನಮರದ ಮೇಲ್ಭಾಗ ಕಳಚಿ ಬೀಳುತ್ತಿದೆ. ಅಲ್ಲದೇ ಅಕ್ಕಪಕ್ಕದ ತೋಟಗಳಿಗೂ ಈ ರೋಗ ಹರಡುತ್ತಿದ್ದು, ತೆಂಗು ಬೆಳೆಗಾರರು ತೀವ್ರ ಆತಂಕದ ಪರಿಸ್ಥಿತಿ ಎದುರಿಸುತ್ತಿದ್ದು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಹಚ್ಚಹಸಿರಿನಿಂದ ಕಂಗೊಳಿಸುತ್ತಿದ್ದ ತೆಂಗಿನ ಮರಗಳ ಸುಳಿ ಒಣಗಿ ಕಳಚಿ ಬೀಳುತ್ತಿವೆ. ಇದು ಯಾವ ರೀತಿಯ ರೋಗ ಎನ್ನುವುದು ತೋಚದೆ ರೈತರು ಕಂಗಾಲಾಗಿದ್ದಾರೆ.<br /> <br /> ಎಚ್.ಡಿ.ಕೋಟೆ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಿದ್ದರಾಜು ಪ್ರಜಾವಾಣಿಯೊಂದಿಗೆ ಮಾತನಾಡಿ ಇಂತಹ ರೋಗಗಳು ಕೆಲ ಭಾಗದಲ್ಲಿ ಪತ್ತೆಯಾಗಿದ್ದು, ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸ್ಥಳಪರಿಶೀಲನೆ ನಡೆಸಿ ನಂತರ ಹೆಚ್ಚಿನ ಮಾಹಿತಿಯನ್ನು ತಿಳಿಸಿಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎಚ್.ಡಿ. ಕೋಟೆ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಒಂದೆಡೆ ರೈತರು ಕೃಷಿ ಚಟುವಟಿಕೆಯಲ್ಲಿ ಸಂತಸದಿಂದ ತೊಡಗಿದ್ದಾರೆ. ಆದರೆ ಇನ್ನೊಂದೆಡೆ ತೆಂಗಿನ ಮರಗಳ ಸುಳಿ ಒಣಗಿ ಹೋಗುತ್ತಿರುವುದು ತೆಂಗು ಬೆಳೆಗಾರರ ನಿದ್ದೆಗೆಡಿಸಿದೆ.<br /> <br /> ತಾಲ್ಲೂಕಿನ ರಾಜೇಗೌಡನಹುಂಡಿ ಗ್ರಾಮದ ರೈತ ಸೋಮಣ್ಣಾಚಾರಿ ಅವರ 2 ಎಕರೆ ಜಮೀನಿನಲ್ಲಿ ತೆಂಗಿನ ಮರಗಳನ್ನು ಬೆಳೆಸಲಾಗಿದೆ. ಆದರೆ ಆ ಮರಗಳು ಕಳೆದ 2 ವರ್ಷಗಳಿಂದ ನೀರಿಲ್ಲದೇ ಒಣಗಿ ನಿಂತಿದ್ದು ತೆಂಗಿನಮರದ ಮೇಲ್ಭಾಗ ಕಳಚಿ ಬೀಳುತ್ತಿದೆ. ಅಲ್ಲದೇ ಅಕ್ಕಪಕ್ಕದ ತೋಟಗಳಿಗೂ ಈ ರೋಗ ಹರಡುತ್ತಿದ್ದು, ತೆಂಗು ಬೆಳೆಗಾರರು ತೀವ್ರ ಆತಂಕದ ಪರಿಸ್ಥಿತಿ ಎದುರಿಸುತ್ತಿದ್ದು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಹಚ್ಚಹಸಿರಿನಿಂದ ಕಂಗೊಳಿಸುತ್ತಿದ್ದ ತೆಂಗಿನ ಮರಗಳ ಸುಳಿ ಒಣಗಿ ಕಳಚಿ ಬೀಳುತ್ತಿವೆ. ಇದು ಯಾವ ರೀತಿಯ ರೋಗ ಎನ್ನುವುದು ತೋಚದೆ ರೈತರು ಕಂಗಾಲಾಗಿದ್ದಾರೆ.<br /> <br /> ಎಚ್.ಡಿ.ಕೋಟೆ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಿದ್ದರಾಜು ಪ್ರಜಾವಾಣಿಯೊಂದಿಗೆ ಮಾತನಾಡಿ ಇಂತಹ ರೋಗಗಳು ಕೆಲ ಭಾಗದಲ್ಲಿ ಪತ್ತೆಯಾಗಿದ್ದು, ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸ್ಥಳಪರಿಶೀಲನೆ ನಡೆಸಿ ನಂತರ ಹೆಚ್ಚಿನ ಮಾಹಿತಿಯನ್ನು ತಿಳಿಸಿಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>