<p><strong>ಚಿಕ್ಕಮಗಳೂರು: </strong> ಒತ್ತುವರಿ ತೆರವಿಗೆ ಮುಂದಾದರೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಮುಖ್ಯಮಂತ್ರಿಗಳು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ತೆರವು ಕಾರ್ಯ ಕೈಬಿಡಲು ಸೂಚಿಸಬೇಕೆಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ.ತಾರಾದೇವಿ ಸಿದ್ಧಾರ್ಥ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.<br /> <br /> ಜೀವನ ನಿರ್ವಹಣೆಗೆಂದು ಸಣ್ಣ ಮತ್ತು ಮಧ್ಯಮ ವರ್ಗದವರು ಸಾಗುವಳಿ ಮಾಡಿದ್ದ ಭೂಮಿಯನ್ನು ಏಕಾಏಕಿ ತೆರವುಗೊಳಿಸಿದರೆ ಅ ಕುಟುಂಬ ಬೀದಿಗೆ ಬೀಳುತ್ತವೆ. ಸರ್ಕಾರ ಬಡವರ ಹಿತರಕ್ಷಣೆಗೆ ಮುಂದಾಗಬೇಕು ಆಗ್ರಹಿಸಿದರು.<br /> <br /> ಜಿಲ್ಲೆಯಲ್ಲಿ 55 ಸಾವಿರ ಎಕರೆ ಭೂಮಿ ಒತ್ತುವರಿಯಾಗಿದೆ. ಇದನ್ನು ಖುಲ್ಲಾ ಪಡಿಸುವಂತೆ ಬಾಲಸುಬ್ರ ಹ್ಮಣ್ಯಂ ನೀಡಿ ರುವ ವರದಿ ಯಲ್ಲಿ ಸಲಹೆ ನೀಡಲಾಗಿದೆ. ಕಂದಾಯ ಭೂಮಿಯನ್ನು ಅರಣ್ಯ ಇಲಾಖೆ ವರ್ಗಾಯಿಸುವಾಗ ಈ ಭೂಮಿಯಲ್ಲಿ ಯಾರ್ಯಾರು ಎಷ್ಟು ಎಕರೆಯಲ್ಲಿ ಸಾಗುವಳಿ ಮಾಡಿದ್ದಾರೆಂದು ತಿಳಿಯದೆ ಭೂಮಿ ಹಸ್ತಾಂತರಿಸಲಾಗಿದೆ. ಇದರಿಂದ ಈಗ ಸಮಸ್ಯೆ ತಲೆದೋರಲು ಮುಖ್ಯ ಕಾರಣ ಎಂದು ತಿಳಿಸಿದರು.<br /> <br /> ಅಧಿಕಾರಿಗಳು ನೀಡಿರುವ ಮಾಹಿತಿಯೇ ಬಾಲಸುಬ್ರಹ್ಮಣ್ಯಂ ನೀಡಿರುವ ವರದಿಯಾಗಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸದೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಭೂಮಿ ವರ್ಗಾವಣೆಗೊಳಿಸಿದ್ದರಿಂದ ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದ ಬಡವರು, ಕೂಲಿಕಾರ್ಮಿಕರು ಭೂಮಿ ಕಳೆದುಕೊಳ್ಳುವಂತಾಗಿದೆ ಎಂದು ಹೇಳಿದರು.<br /> <br /> ಭೂಮಿ ಕಬಳಿಕೆಯಾಗಿದೆ. ಒಂದೇ ದೃಷ್ಟಿಯಲ್ಲಿ ನೋಡುವುದು ಸರಿಯಲ್ಲ. ಒತ್ತುವರಿ ಸಮಸ್ಯೆಗೆ ನಾನಾ ಮುಖಗಳಿರುವುದರಿಂದ ಈ ಬಗ್ಗೆ ಅಧ್ಯಯನ ನಡೆಸುವುದು ಸೂಕ್ತ. ಒತ್ತುವರಿಗೆ ಸಂಬಂಧಿಸಿದಂತೆ ಪುನರ್ ಪರಿಶೀಲನೆಗೆ ಸರ್ಕಾರ ಜನಪರ ಹೋರಾಟದಲ್ಲಿ ತೊಡಗಿಸಿಕೊಂಡಿರುವವರನ್ನು ಒಳಗೊಂಡ ಸಮಿತಿ ರಚಿಸಬೇಕು. ಈ ಹಿಂದೆ ಭೂಮಿ ಒತ್ತುವರಿ ಮಾಡಿ, ಬೇಲಿ ನಿರ್ಮಿಸುತ್ತಿದ್ದಾಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದರು? ಎಂದು ಪ್ರಶ್ನಿಸಿದರು.<br /> <br /> ಒತ್ತುವರಿ ತೆರವಿಗೆ ಆಯಾ ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸುತ್ತಿದ್ದಾರೆ. ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವುದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದರು.<br /> <br /> ಭಾರೀ ಭೂಮಾಲೀಕರು ಮಾಡಿರುವ ಒತ್ತುವರಿ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಗಳು ಸಭೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂದರು.<br /> <br /> ಗುಟ್ಕಾ ನಿಷೇಧ: ಗುಟ್ಕಾ ನಿಷೇಧ ಅನಿವಾರ್ಯ. ಇದರಲ್ಲಿ ಎರಡು ಮಾತಿಲ್ಲ. ಆದರೆ, ಹಳದಿ ಎಲೆ ರೋಗದಿಂದ ತತ್ತರಿಸಿ ಹೋಗಿರುವ ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಲೆಯೂ ಕುಸಿದಿದ್ದು, ಬೆಳೆಗಾರರ ಸಮಸ್ಯೆ ಪರಿಹರಿಸಲು ಸೂಕ್ತ ಗಮನ ಹರಿಸಬೇಕು ಎಂದು ಅವರು ಹೇಳಿದರು.<br /> <br /> ಪಕ್ಷದ ಜಿಲ್ಲಾ ಉಪಾಧ್ಯಕ್ಷ ಡಿ.ಎಲ್.ವಿಜಯಕುಮಾರ್, ಜಿಲ್ಲಾ ವಕ್ತಾರ ಎ.ಎನ್.ಮಹೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong> ಒತ್ತುವರಿ ತೆರವಿಗೆ ಮುಂದಾದರೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಮುಖ್ಯಮಂತ್ರಿಗಳು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ತೆರವು ಕಾರ್ಯ ಕೈಬಿಡಲು ಸೂಚಿಸಬೇಕೆಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ.ತಾರಾದೇವಿ ಸಿದ್ಧಾರ್ಥ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.<br /> <br /> ಜೀವನ ನಿರ್ವಹಣೆಗೆಂದು ಸಣ್ಣ ಮತ್ತು ಮಧ್ಯಮ ವರ್ಗದವರು ಸಾಗುವಳಿ ಮಾಡಿದ್ದ ಭೂಮಿಯನ್ನು ಏಕಾಏಕಿ ತೆರವುಗೊಳಿಸಿದರೆ ಅ ಕುಟುಂಬ ಬೀದಿಗೆ ಬೀಳುತ್ತವೆ. ಸರ್ಕಾರ ಬಡವರ ಹಿತರಕ್ಷಣೆಗೆ ಮುಂದಾಗಬೇಕು ಆಗ್ರಹಿಸಿದರು.<br /> <br /> ಜಿಲ್ಲೆಯಲ್ಲಿ 55 ಸಾವಿರ ಎಕರೆ ಭೂಮಿ ಒತ್ತುವರಿಯಾಗಿದೆ. ಇದನ್ನು ಖುಲ್ಲಾ ಪಡಿಸುವಂತೆ ಬಾಲಸುಬ್ರ ಹ್ಮಣ್ಯಂ ನೀಡಿ ರುವ ವರದಿ ಯಲ್ಲಿ ಸಲಹೆ ನೀಡಲಾಗಿದೆ. ಕಂದಾಯ ಭೂಮಿಯನ್ನು ಅರಣ್ಯ ಇಲಾಖೆ ವರ್ಗಾಯಿಸುವಾಗ ಈ ಭೂಮಿಯಲ್ಲಿ ಯಾರ್ಯಾರು ಎಷ್ಟು ಎಕರೆಯಲ್ಲಿ ಸಾಗುವಳಿ ಮಾಡಿದ್ದಾರೆಂದು ತಿಳಿಯದೆ ಭೂಮಿ ಹಸ್ತಾಂತರಿಸಲಾಗಿದೆ. ಇದರಿಂದ ಈಗ ಸಮಸ್ಯೆ ತಲೆದೋರಲು ಮುಖ್ಯ ಕಾರಣ ಎಂದು ತಿಳಿಸಿದರು.<br /> <br /> ಅಧಿಕಾರಿಗಳು ನೀಡಿರುವ ಮಾಹಿತಿಯೇ ಬಾಲಸುಬ್ರಹ್ಮಣ್ಯಂ ನೀಡಿರುವ ವರದಿಯಾಗಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸದೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಭೂಮಿ ವರ್ಗಾವಣೆಗೊಳಿಸಿದ್ದರಿಂದ ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದ ಬಡವರು, ಕೂಲಿಕಾರ್ಮಿಕರು ಭೂಮಿ ಕಳೆದುಕೊಳ್ಳುವಂತಾಗಿದೆ ಎಂದು ಹೇಳಿದರು.<br /> <br /> ಭೂಮಿ ಕಬಳಿಕೆಯಾಗಿದೆ. ಒಂದೇ ದೃಷ್ಟಿಯಲ್ಲಿ ನೋಡುವುದು ಸರಿಯಲ್ಲ. ಒತ್ತುವರಿ ಸಮಸ್ಯೆಗೆ ನಾನಾ ಮುಖಗಳಿರುವುದರಿಂದ ಈ ಬಗ್ಗೆ ಅಧ್ಯಯನ ನಡೆಸುವುದು ಸೂಕ್ತ. ಒತ್ತುವರಿಗೆ ಸಂಬಂಧಿಸಿದಂತೆ ಪುನರ್ ಪರಿಶೀಲನೆಗೆ ಸರ್ಕಾರ ಜನಪರ ಹೋರಾಟದಲ್ಲಿ ತೊಡಗಿಸಿಕೊಂಡಿರುವವರನ್ನು ಒಳಗೊಂಡ ಸಮಿತಿ ರಚಿಸಬೇಕು. ಈ ಹಿಂದೆ ಭೂಮಿ ಒತ್ತುವರಿ ಮಾಡಿ, ಬೇಲಿ ನಿರ್ಮಿಸುತ್ತಿದ್ದಾಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದರು? ಎಂದು ಪ್ರಶ್ನಿಸಿದರು.<br /> <br /> ಒತ್ತುವರಿ ತೆರವಿಗೆ ಆಯಾ ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸುತ್ತಿದ್ದಾರೆ. ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವುದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದರು.<br /> <br /> ಭಾರೀ ಭೂಮಾಲೀಕರು ಮಾಡಿರುವ ಒತ್ತುವರಿ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಗಳು ಸಭೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂದರು.<br /> <br /> ಗುಟ್ಕಾ ನಿಷೇಧ: ಗುಟ್ಕಾ ನಿಷೇಧ ಅನಿವಾರ್ಯ. ಇದರಲ್ಲಿ ಎರಡು ಮಾತಿಲ್ಲ. ಆದರೆ, ಹಳದಿ ಎಲೆ ರೋಗದಿಂದ ತತ್ತರಿಸಿ ಹೋಗಿರುವ ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಲೆಯೂ ಕುಸಿದಿದ್ದು, ಬೆಳೆಗಾರರ ಸಮಸ್ಯೆ ಪರಿಹರಿಸಲು ಸೂಕ್ತ ಗಮನ ಹರಿಸಬೇಕು ಎಂದು ಅವರು ಹೇಳಿದರು.<br /> <br /> ಪಕ್ಷದ ಜಿಲ್ಲಾ ಉಪಾಧ್ಯಕ್ಷ ಡಿ.ಎಲ್.ವಿಜಯಕುಮಾರ್, ಜಿಲ್ಲಾ ವಕ್ತಾರ ಎ.ಎನ್.ಮಹೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>