<p>ನವದೆಹಲಿ (ಪಿಟಿಐ): ಮುಂಬೈ, ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿರುವ ಚಿನ್ನಾಭರಣ ವರ್ತಕರು ಶನಿವಾರ, ಬಜೆಟ್ನಲ್ಲಿ ಚಿನ್ನದ ಆಮದು ಶುಲ್ಕ ಹೆಚ್ಚಿಸಿರುವ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಅಂಗವಾಗಿ ಮೂರು ದಿನಗಳ ಕಾಲ ವಹಿವಾಟು ಸ್ಥಗಿತಗೊಳಿಸಲು ವರ್ತಕ ಸಂಘಟನೆಗಳು ನಿರ್ಧರಿಸಿವೆ. <br /> <br /> ಸ್ಟಾಂಡರ್ಡ್ ಅಲ್ಲದ ಚಿನ್ನಾಭರಣಗಳ ಮೇಲಿನ ತೆರಿಗೆಯನ್ನು ಸದ್ಯದ ಶೇ 5ರಿಂದ ಶೇ 10ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಚಿಲ್ಲರೆ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಅಖಿಲ ಭಾರತ ಚಿನ್ನಾಭರಣ ವರ್ತಕರ ಒಕ್ಕೂಟದ ಅಧ್ಯಕ್ಷ ಶೀಲ ಚಾಂದ್ ಜೈನ್ ಹೇಳಿದ್ದಾರೆ. <br /> <br /> ಬಜೆಟ್ನಲ್ಲಿ ಚಿನ್ನದ ಆಮದು ಶುಲ್ಕ ಹೆಚ್ಚಿಸಿರುವುದನ್ನು ಹಿಂದಕ್ಕೆ ಪಡೆಯಬೇಕು ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರಿಗೆ ಪತ್ರ ಬರೆದು ಆಗ್ರಹಿಸಲಾಗಿದೆ. ಸರ್ಕಾರದ ಈ ಕ್ರಮದಿಂದ ಚಿನ್ನದ ಕಳ್ಳಸಾಗಾಣಿಕೆ, ಅಕ್ರಮ ವಹಿವಾಟು ಹೆಚ್ಚುವ ಸಾಧ್ಯತೆ ಇದೆ. ಗ್ರಾಹಕರು ಮತ್ತು ವರ್ತಕರ ಹಿತಾಸಕ್ತಿಯಿಂದ ತೆರಿಗೆ ಹೆಚ್ಚಳವನ್ನು ಕೈಬಿಡಬೇಕು ಎಂದು ಚಾಂದ್ ಆಗ್ರಹಿಸಿದ್ದಾರೆ. <br /> <br /> ಶುಕ್ರವಾರ ಮಂಡಿಸಲಾದ ಬಜೆಟ್ನಲ್ಲಿ 99.5 ಶುದ್ಧತೆ ಹೊಂದಿರುವ ಸ್ಟಾಂಡರ್ಡ್ ಚಿನ್ನದ ಗಟ್ಟಿ, ನಾಣ್ಯ ಮತ್ತು ಪ್ಲಾಟಿನಂ ಆಭರಣಗಳ ಮೇಲಿನ ಪ್ರಾಥಮಿಕ ಸೀಮಾ ಸುಂಕವನ್ನು ಶೇ 2ರಿಂದ ಶೇ 4ಕ್ಕೆ ಹೆಚ್ಚಿಸಲಾಗಿತ್ತು.<br /> <br /> ಅಬಕಾರಿ ಮತ್ತು ಸೀಮಾ ಸುಂಕವನ್ನು ವರ್ತಕರು ಗ್ರಾಹಕರ ಮೇಲೆ ವರ್ಗಾಯಿಸುತ್ತಾರೆ. ಇದರಿಂದ ಗ್ರಾಹಕರಿಗೆ ಹೆಚ್ಚಿನ ಹೊರೆ ಬೀಳುತ್ತದೆ ಎಂದು ಚಾಂದ್ ಅಭಿಪ್ರಾಯಪಟ್ಟಿದ್ದಾರೆ. <br /> <br /> ಬ್ರಾಂಡೆಡ್ ಅಲ್ಲದ ಚಿನ್ನಾಭರಣಗಳೂ ಸದ್ಯ ಶೇ1ರಷ್ಟು ಎಕ್ಸೈಜ್ ತೆರಿಗೆ ವ್ಯಾಪ್ತಿಯಲ್ಲಿವೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಮುಂಬೈ, ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿರುವ ಚಿನ್ನಾಭರಣ ವರ್ತಕರು ಶನಿವಾರ, ಬಜೆಟ್ನಲ್ಲಿ ಚಿನ್ನದ ಆಮದು ಶುಲ್ಕ ಹೆಚ್ಚಿಸಿರುವ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಅಂಗವಾಗಿ ಮೂರು ದಿನಗಳ ಕಾಲ ವಹಿವಾಟು ಸ್ಥಗಿತಗೊಳಿಸಲು ವರ್ತಕ ಸಂಘಟನೆಗಳು ನಿರ್ಧರಿಸಿವೆ. <br /> <br /> ಸ್ಟಾಂಡರ್ಡ್ ಅಲ್ಲದ ಚಿನ್ನಾಭರಣಗಳ ಮೇಲಿನ ತೆರಿಗೆಯನ್ನು ಸದ್ಯದ ಶೇ 5ರಿಂದ ಶೇ 10ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಚಿಲ್ಲರೆ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಅಖಿಲ ಭಾರತ ಚಿನ್ನಾಭರಣ ವರ್ತಕರ ಒಕ್ಕೂಟದ ಅಧ್ಯಕ್ಷ ಶೀಲ ಚಾಂದ್ ಜೈನ್ ಹೇಳಿದ್ದಾರೆ. <br /> <br /> ಬಜೆಟ್ನಲ್ಲಿ ಚಿನ್ನದ ಆಮದು ಶುಲ್ಕ ಹೆಚ್ಚಿಸಿರುವುದನ್ನು ಹಿಂದಕ್ಕೆ ಪಡೆಯಬೇಕು ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರಿಗೆ ಪತ್ರ ಬರೆದು ಆಗ್ರಹಿಸಲಾಗಿದೆ. ಸರ್ಕಾರದ ಈ ಕ್ರಮದಿಂದ ಚಿನ್ನದ ಕಳ್ಳಸಾಗಾಣಿಕೆ, ಅಕ್ರಮ ವಹಿವಾಟು ಹೆಚ್ಚುವ ಸಾಧ್ಯತೆ ಇದೆ. ಗ್ರಾಹಕರು ಮತ್ತು ವರ್ತಕರ ಹಿತಾಸಕ್ತಿಯಿಂದ ತೆರಿಗೆ ಹೆಚ್ಚಳವನ್ನು ಕೈಬಿಡಬೇಕು ಎಂದು ಚಾಂದ್ ಆಗ್ರಹಿಸಿದ್ದಾರೆ. <br /> <br /> ಶುಕ್ರವಾರ ಮಂಡಿಸಲಾದ ಬಜೆಟ್ನಲ್ಲಿ 99.5 ಶುದ್ಧತೆ ಹೊಂದಿರುವ ಸ್ಟಾಂಡರ್ಡ್ ಚಿನ್ನದ ಗಟ್ಟಿ, ನಾಣ್ಯ ಮತ್ತು ಪ್ಲಾಟಿನಂ ಆಭರಣಗಳ ಮೇಲಿನ ಪ್ರಾಥಮಿಕ ಸೀಮಾ ಸುಂಕವನ್ನು ಶೇ 2ರಿಂದ ಶೇ 4ಕ್ಕೆ ಹೆಚ್ಚಿಸಲಾಗಿತ್ತು.<br /> <br /> ಅಬಕಾರಿ ಮತ್ತು ಸೀಮಾ ಸುಂಕವನ್ನು ವರ್ತಕರು ಗ್ರಾಹಕರ ಮೇಲೆ ವರ್ಗಾಯಿಸುತ್ತಾರೆ. ಇದರಿಂದ ಗ್ರಾಹಕರಿಗೆ ಹೆಚ್ಚಿನ ಹೊರೆ ಬೀಳುತ್ತದೆ ಎಂದು ಚಾಂದ್ ಅಭಿಪ್ರಾಯಪಟ್ಟಿದ್ದಾರೆ. <br /> <br /> ಬ್ರಾಂಡೆಡ್ ಅಲ್ಲದ ಚಿನ್ನಾಭರಣಗಳೂ ಸದ್ಯ ಶೇ1ರಷ್ಟು ಎಕ್ಸೈಜ್ ತೆರಿಗೆ ವ್ಯಾಪ್ತಿಯಲ್ಲಿವೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>