<p><strong>ನೆಲಮಂಗಲ:</strong> ಪಟ್ಟಣದ ಗಜಾರಿಯ ಲೇ ಔಟ್ನಲ್ಲಿ ತೆರೆದ ಗುಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ಗುರುವಾರ ಮಧ್ಯಾಹ್ನ ಸುಮಾರು 2.30ರ ಸಮಯದಲ್ಲಿ ನಡೆದಿದೆ.</p>.<p>ಮೃತನನ್ನು ಭರತ್ (13) ಎಂದು ಗುರುತಿಸಲಾಗಿದೆ. ಈತ ಹಿಪ್ಪೆ ಆಂಜನೇಯಸ್ವಾಮಿ ಬಡಾವಣೆಯ ನಿವಾಸಿ ನಾಗರಾಜ್ ಎಂಬುವರ ಏಕೈಕ ಪುತ್ರ. ಪಟ್ಟಣದ ಅಡೇಪೇಟೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಭರತ್, ತನ್ನ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಕಾಲು ಜಾರಿ ಗುಂಡಿಗೆ ಬಿದ್ದು ಮೃತನಾಗಿದ್ದಾನೆ.</p>.<p> ಬಡಾವಣೆಯಲ್ಲಿ ತೆಗೆದಿದ್ದ ತೆರೆದ ಗುಂಡಿಗೆ ಭರತ್ ಬಿದ್ದಾಗ ಗೆಳೆಯರು ಗಾಬರಿಗೊಂಡು ಸ್ಥಳೀಯರಿಗೆ ಸುದ್ದಿ ಮುಟ್ಟಿಸಿದರು. ತಕ್ಷಣ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಒಂದು ತಾಸಿಗೂ ಹೆಚ್ಚು ಕಾರ್ಯಾಚರಣೆ ನಡೆಸುವ ಮೂಲಕ ಮೃತದೇಹವನ್ನು ಹೊರತೆಗೆದಿದ್ದಾರೆ.</p>.<p>ಶಾಸಕ ಎಂ.ವಿ.ನಾಗರಾಜು ಸ್ಥಳಕ್ಕೆ ಭೇಟಿ ನೀಡಿ ಮೃತನ ಪೋಷಕರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಪಟ್ಟಣದ ಗಜಾರಿಯ ಲೇ ಔಟ್ನಲ್ಲಿ ತೆರೆದ ಗುಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ಗುರುವಾರ ಮಧ್ಯಾಹ್ನ ಸುಮಾರು 2.30ರ ಸಮಯದಲ್ಲಿ ನಡೆದಿದೆ.</p>.<p>ಮೃತನನ್ನು ಭರತ್ (13) ಎಂದು ಗುರುತಿಸಲಾಗಿದೆ. ಈತ ಹಿಪ್ಪೆ ಆಂಜನೇಯಸ್ವಾಮಿ ಬಡಾವಣೆಯ ನಿವಾಸಿ ನಾಗರಾಜ್ ಎಂಬುವರ ಏಕೈಕ ಪುತ್ರ. ಪಟ್ಟಣದ ಅಡೇಪೇಟೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಭರತ್, ತನ್ನ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಕಾಲು ಜಾರಿ ಗುಂಡಿಗೆ ಬಿದ್ದು ಮೃತನಾಗಿದ್ದಾನೆ.</p>.<p> ಬಡಾವಣೆಯಲ್ಲಿ ತೆಗೆದಿದ್ದ ತೆರೆದ ಗುಂಡಿಗೆ ಭರತ್ ಬಿದ್ದಾಗ ಗೆಳೆಯರು ಗಾಬರಿಗೊಂಡು ಸ್ಥಳೀಯರಿಗೆ ಸುದ್ದಿ ಮುಟ್ಟಿಸಿದರು. ತಕ್ಷಣ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಒಂದು ತಾಸಿಗೂ ಹೆಚ್ಚು ಕಾರ್ಯಾಚರಣೆ ನಡೆಸುವ ಮೂಲಕ ಮೃತದೇಹವನ್ನು ಹೊರತೆಗೆದಿದ್ದಾರೆ.</p>.<p>ಶಾಸಕ ಎಂ.ವಿ.ನಾಗರಾಜು ಸ್ಥಳಕ್ಕೆ ಭೇಟಿ ನೀಡಿ ಮೃತನ ಪೋಷಕರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>