<p><strong>ನವದೆಹಲಿ (ಪಿಟಿಐ): </strong>ತೆಲಂಗಾಣ ರಚನೆಗೆ ಸಂಸತ್ ಅಂಗೀಕರಿಸಿದ ‘ಆಂಧ್ರಪ್ರದೇಶ ಪುನರ್ರಚನೆ ಮಸೂದೆ’ ಮತ್ತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ವಿಧಿಸುವ ಕೇಂದ್ರ ಸಚಿವ ಸಂಪುಟದ ಶಿಫಾರಸಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಶನಿವಾರ ಅಂಕಿತ ಹಾಕಿದ್ದಾರೆ.<br /> <br /> ಈ ಮೂಲಕ ದೇಶದ 29ನೇ ರಾಜ್ಯವಾಗಿ ತೆಲಂಗಾಣ ಅಧಿಕೃತವಾಗಿ ಉದಯವಾಗಿದೆ. 15ನೇ ಲೋಕಸಭೆಯ ಕಡೆಯ ಅಧಿವೇಶನದಲ್ಲಿ ಕೋಲಾಹಲಕ್ಕೆ ಕಾರಣವಾಗಿ ಗದ್ದಲ, ರಂಪಾಟದ ಮಧ್ಯೆಯೇ ಈ ಮಸೂದೆಗೆ ಅಂಗೀಕಾರ ದೊರಕಿತ್ತು.<br /> <br /> ಅಖಂಡ ಆಂಧ್ರವನ್ನು ಸೀಮಾಂಧ್ರ (ಕರಾವಳಿ ಮತ್ತು ರಾಯಲಸೀಮೆ) ಮತ್ತು ತೆಲಂಗಾಣ ಎಂದು ವಿಭಜಿಸಿ ಸೀಮಾಂಧ್ರ ಭಾಗಕ್ಕೆ 13 ಜಿಲ್ಲೆಗಳು, ತೆಲಂಗಾಣಕ್ಕೆ ಹೈದರಾಬಾದ್ ನಗರವೂ ಸೇರಿ 10 ಜಿಲ್ಲೆಗಳನ್ನು ಸೇರಿಸಲಾಗಿದೆ.<br /> <br /> ಆಂಧ್ರ ಇಬ್ಭಾಗದಿಂದ ಸಿಟ್ಟಿಗೆದಿರುವ ಸೀಮಾಂಧ್ರದ ಜನರನ್ನು ಸಮಾಧಾನ ಪಡಿಸಲು ಕೇಂದ್ರ ಸರ್ಕಾರ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಘೋಷಣೆ ಮಾಡಿದೆ. ಜೊತೆಗೆ ಈ ಎರಡೂ ರಾಜ್ಯಗಳ ಅಭಿವೃದ್ಧಿಗೆ ಆರು ಅಂಶಗಳ ಯೋಜನೆಯನ್ನು ಘೋಷಿಸಿದೆ.<br /> <br /> ತೆಲಂಗಾಣ ರಚನೆ ವಿರೋಧಿಸಿ ಆಂಧ್ರಪ್ರದೇಶಚ ಮುಖ್ಯಮಂತ್ರಿ ಕಿರಣ್ ಕುಮಾರ್ ಅವರ ಸರ್ಕಾರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ವಿಧಿಸಲು ಶುಕ್ರವಾರ ಮಾಡಿದ್ದ ಶಿಫಾರಸಿಗೂ ರಾಷ್ಟ್ರಪತಿ ಶನಿವಾರ ಸಹಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ತೆಲಂಗಾಣ ರಚನೆಗೆ ಸಂಸತ್ ಅಂಗೀಕರಿಸಿದ ‘ಆಂಧ್ರಪ್ರದೇಶ ಪುನರ್ರಚನೆ ಮಸೂದೆ’ ಮತ್ತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ವಿಧಿಸುವ ಕೇಂದ್ರ ಸಚಿವ ಸಂಪುಟದ ಶಿಫಾರಸಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಶನಿವಾರ ಅಂಕಿತ ಹಾಕಿದ್ದಾರೆ.<br /> <br /> ಈ ಮೂಲಕ ದೇಶದ 29ನೇ ರಾಜ್ಯವಾಗಿ ತೆಲಂಗಾಣ ಅಧಿಕೃತವಾಗಿ ಉದಯವಾಗಿದೆ. 15ನೇ ಲೋಕಸಭೆಯ ಕಡೆಯ ಅಧಿವೇಶನದಲ್ಲಿ ಕೋಲಾಹಲಕ್ಕೆ ಕಾರಣವಾಗಿ ಗದ್ದಲ, ರಂಪಾಟದ ಮಧ್ಯೆಯೇ ಈ ಮಸೂದೆಗೆ ಅಂಗೀಕಾರ ದೊರಕಿತ್ತು.<br /> <br /> ಅಖಂಡ ಆಂಧ್ರವನ್ನು ಸೀಮಾಂಧ್ರ (ಕರಾವಳಿ ಮತ್ತು ರಾಯಲಸೀಮೆ) ಮತ್ತು ತೆಲಂಗಾಣ ಎಂದು ವಿಭಜಿಸಿ ಸೀಮಾಂಧ್ರ ಭಾಗಕ್ಕೆ 13 ಜಿಲ್ಲೆಗಳು, ತೆಲಂಗಾಣಕ್ಕೆ ಹೈದರಾಬಾದ್ ನಗರವೂ ಸೇರಿ 10 ಜಿಲ್ಲೆಗಳನ್ನು ಸೇರಿಸಲಾಗಿದೆ.<br /> <br /> ಆಂಧ್ರ ಇಬ್ಭಾಗದಿಂದ ಸಿಟ್ಟಿಗೆದಿರುವ ಸೀಮಾಂಧ್ರದ ಜನರನ್ನು ಸಮಾಧಾನ ಪಡಿಸಲು ಕೇಂದ್ರ ಸರ್ಕಾರ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಘೋಷಣೆ ಮಾಡಿದೆ. ಜೊತೆಗೆ ಈ ಎರಡೂ ರಾಜ್ಯಗಳ ಅಭಿವೃದ್ಧಿಗೆ ಆರು ಅಂಶಗಳ ಯೋಜನೆಯನ್ನು ಘೋಷಿಸಿದೆ.<br /> <br /> ತೆಲಂಗಾಣ ರಚನೆ ವಿರೋಧಿಸಿ ಆಂಧ್ರಪ್ರದೇಶಚ ಮುಖ್ಯಮಂತ್ರಿ ಕಿರಣ್ ಕುಮಾರ್ ಅವರ ಸರ್ಕಾರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ವಿಧಿಸಲು ಶುಕ್ರವಾರ ಮಾಡಿದ್ದ ಶಿಫಾರಸಿಗೂ ರಾಷ್ಟ್ರಪತಿ ಶನಿವಾರ ಸಹಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>