<p><strong>ಹೈದರಾಬಾದ್</strong>: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿವಾದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಎರಡನೇ ಬಾರಿಗೆ ರಾಷ್ಟ್ರಪತಿ ಆಡಳಿತದತ್ತ ಸಾಗುತ್ತಿದೆಯೇ?<br /> <br /> ರಾಜ್ಯದಲ್ಲಿ ಹದಗೆಟ್ಟಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದಸರಾ ಉತ್ಸವದ ನಂತರ ರಾಷ್ಟ್ರಪತಿ ಆಡಳಿತ ವಿಧಿಸುವ ಅನಧಿಕೃತ ವದಂತಿ ಈಗ ಹರಿದಾಡುತ್ತಿದೆ. ಮುಖ್ಯಮಂತ್ರಿ ಕಚೇರಿ ಮತ್ತು ಗುಪ್ತಚರ ಮೂಲಗಳ ಪ್ರಕಾರ, ಈಗಾಗಲೇ ಈ ಯೋಜನೆ ಸಿದ್ಧವಾಗಿದ್ದು ಇನ್ನೊಂದು ವಾರದಲ್ಲಿ ದೆಹಲಿಯಲ್ಲಿ ನಿರ್ಧಾರ ಪ್ರಕಟವಾಗಲಿದೆ. <br /> <br /> ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿರುವುದಕ್ಕಿಂತ ಹೆಚ್ಚಾಗಿ ನಾಗರಿಕ ಸೇವೆ ಕುಸಿದಿರುವ ಕಾರಣವನ್ನು ಮುಂದೊಡ್ಡಿ ಕಾಂಗ್ರೆಸ್ ವರಿಷ್ಠರು ಈ ತೀರ್ಮಾನಕ್ಕೆ ಬರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.<br /> <br /> ಮಾಜಿ ಗುಪ್ತಚರ ದಳದ ಮುಖ್ಯಸ್ಥರೂ ಆದ ರಾಜ್ಯಪಾಲ ಎ.ಎಸ್. ಎಲ್. ನರಸಿಂಹನ್ ಅವರನ್ನು ದೆಹಲಿಗೆ ಬುಲಾವ್ ಮಾಡಲಾಗಿದ್ದು, ಇವರು ರಾಜ್ಯದಲ್ಲಿನ ನೈಜ ಪರಿಸ್ಥಿತಿ ಕುರಿತು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ವಿವರಣೆ ನೀಡಲಿದ್ದಾರೆ. <br /> <br /> ಆನಂತರ ಕಾಂಗ್ರೆಸ್ ಪ್ರಮುಖರ ಸಭೆ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯಪಾಲರ ಅಭಿಪ್ರಾಯ ಪಡೆಯುವುದು ಅವಶ್ಯಕವಾಗಿರುವುದರಿಂದ ಅವರನ್ನು ದೆಹಲಿಗೆ ಬರಹೇಳಲಾಗಿದೆ. ಗುರುವಾರ ಸಂಜೆ ತಿರುಪತಿಯ ತಿರುಮಲದಲ್ಲಿ ಶ್ರೀಚಕ್ರ ಪೂಜೆ ಸಲ್ಲಿಸಲು ತೆರಳಿದ ರಾಜ್ಯಪಾಲರು, ಶುಕ್ರವಾರ ದೆಹಲಿಗೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿವಾದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಎರಡನೇ ಬಾರಿಗೆ ರಾಷ್ಟ್ರಪತಿ ಆಡಳಿತದತ್ತ ಸಾಗುತ್ತಿದೆಯೇ?<br /> <br /> ರಾಜ್ಯದಲ್ಲಿ ಹದಗೆಟ್ಟಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದಸರಾ ಉತ್ಸವದ ನಂತರ ರಾಷ್ಟ್ರಪತಿ ಆಡಳಿತ ವಿಧಿಸುವ ಅನಧಿಕೃತ ವದಂತಿ ಈಗ ಹರಿದಾಡುತ್ತಿದೆ. ಮುಖ್ಯಮಂತ್ರಿ ಕಚೇರಿ ಮತ್ತು ಗುಪ್ತಚರ ಮೂಲಗಳ ಪ್ರಕಾರ, ಈಗಾಗಲೇ ಈ ಯೋಜನೆ ಸಿದ್ಧವಾಗಿದ್ದು ಇನ್ನೊಂದು ವಾರದಲ್ಲಿ ದೆಹಲಿಯಲ್ಲಿ ನಿರ್ಧಾರ ಪ್ರಕಟವಾಗಲಿದೆ. <br /> <br /> ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿರುವುದಕ್ಕಿಂತ ಹೆಚ್ಚಾಗಿ ನಾಗರಿಕ ಸೇವೆ ಕುಸಿದಿರುವ ಕಾರಣವನ್ನು ಮುಂದೊಡ್ಡಿ ಕಾಂಗ್ರೆಸ್ ವರಿಷ್ಠರು ಈ ತೀರ್ಮಾನಕ್ಕೆ ಬರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.<br /> <br /> ಮಾಜಿ ಗುಪ್ತಚರ ದಳದ ಮುಖ್ಯಸ್ಥರೂ ಆದ ರಾಜ್ಯಪಾಲ ಎ.ಎಸ್. ಎಲ್. ನರಸಿಂಹನ್ ಅವರನ್ನು ದೆಹಲಿಗೆ ಬುಲಾವ್ ಮಾಡಲಾಗಿದ್ದು, ಇವರು ರಾಜ್ಯದಲ್ಲಿನ ನೈಜ ಪರಿಸ್ಥಿತಿ ಕುರಿತು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ವಿವರಣೆ ನೀಡಲಿದ್ದಾರೆ. <br /> <br /> ಆನಂತರ ಕಾಂಗ್ರೆಸ್ ಪ್ರಮುಖರ ಸಭೆ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯಪಾಲರ ಅಭಿಪ್ರಾಯ ಪಡೆಯುವುದು ಅವಶ್ಯಕವಾಗಿರುವುದರಿಂದ ಅವರನ್ನು ದೆಹಲಿಗೆ ಬರಹೇಳಲಾಗಿದೆ. ಗುರುವಾರ ಸಂಜೆ ತಿರುಪತಿಯ ತಿರುಮಲದಲ್ಲಿ ಶ್ರೀಚಕ್ರ ಪೂಜೆ ಸಲ್ಲಿಸಲು ತೆರಳಿದ ರಾಜ್ಯಪಾಲರು, ಶುಕ್ರವಾರ ದೆಹಲಿಗೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>