<p><strong>ಹೈದರಾಬಾದ್ (ಐಎಎನ್ಎಸ್, ಪಿಟಿಐ):</strong> ತಮ್ಮ ವಿರುದ್ಧ ಮೊಕದ್ದಮೆ ದಾಖಲಿಸಲು ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ನೀಡಿದ್ದರೂ, ಟಿಆರ್ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಭಾನುವಾರ ಇಲ್ಲಿ ಮತ್ತೆ ವಿವಾದಾತ್ಮಕ ಹೇಳಿಕೆಯನ್ನು ಪುನರುಚ್ಚರಿಸಿದರು.<br /> <br /> `ಸಂಸತ್ನಲ್ಲಿ ಕೆಲಸ ಮಾಡುವ ಜವಾನ ಅರ್ಥಮಾಡಿಕೊಳ್ಳಬಲ್ಲ ತೆಲಂಗಾಣ ವಿಷಯವನ್ನು ಪ್ರಧಾನಿ ಅರ್ಥಮಾಡಿಕೊಳ್ಳಲಿಲ್ಲ' ಎಂದು ರಾವ್ ಇತ್ತೀಚೆಗೆ ಮನಮೋಹನ್ ಸಿಂಗ್ ಅವರನ್ನು ಟೀಕಿಸಿದ್ದರು.<br /> <br /> ಈ ಬಗ್ಗೆ `ಮೊಕದ್ದಮೆ ದಾಖಲಿಸಿದರೂ ಅಥವಾ ಜೈಲಿಗೆ ಕಳುಹಿಸಿದರೂ ಹೇಳಿಕೆ ಹಿಂಪಡೆಯುವುದಿಲ್ಲ' ಎಂದು ಅವರು ಹೇಳಿದರು.<br /> <br /> ಕಾಂಗ್ರೆಸ್ ಸಂಸದರಾದ ಜಿ. ವಿವೇಕ್, ಎಂ. ಜಗನ್ನಾಥ್, ಹಿರಿಯ ನಾಯಕ ಕೆ. ಕೇಶವರಾವ್, ಕೆಲವು ಮಾಜಿ ಸಚಿವರು ಸೇರಿದಂತೆ ಟಿಡಿಪಿ ಮತ್ತಿತರ ಪಕ್ಷಗಳ ಹಲವು ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಐಎಎನ್ಎಸ್, ಪಿಟಿಐ):</strong> ತಮ್ಮ ವಿರುದ್ಧ ಮೊಕದ್ದಮೆ ದಾಖಲಿಸಲು ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ನೀಡಿದ್ದರೂ, ಟಿಆರ್ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಭಾನುವಾರ ಇಲ್ಲಿ ಮತ್ತೆ ವಿವಾದಾತ್ಮಕ ಹೇಳಿಕೆಯನ್ನು ಪುನರುಚ್ಚರಿಸಿದರು.<br /> <br /> `ಸಂಸತ್ನಲ್ಲಿ ಕೆಲಸ ಮಾಡುವ ಜವಾನ ಅರ್ಥಮಾಡಿಕೊಳ್ಳಬಲ್ಲ ತೆಲಂಗಾಣ ವಿಷಯವನ್ನು ಪ್ರಧಾನಿ ಅರ್ಥಮಾಡಿಕೊಳ್ಳಲಿಲ್ಲ' ಎಂದು ರಾವ್ ಇತ್ತೀಚೆಗೆ ಮನಮೋಹನ್ ಸಿಂಗ್ ಅವರನ್ನು ಟೀಕಿಸಿದ್ದರು.<br /> <br /> ಈ ಬಗ್ಗೆ `ಮೊಕದ್ದಮೆ ದಾಖಲಿಸಿದರೂ ಅಥವಾ ಜೈಲಿಗೆ ಕಳುಹಿಸಿದರೂ ಹೇಳಿಕೆ ಹಿಂಪಡೆಯುವುದಿಲ್ಲ' ಎಂದು ಅವರು ಹೇಳಿದರು.<br /> <br /> ಕಾಂಗ್ರೆಸ್ ಸಂಸದರಾದ ಜಿ. ವಿವೇಕ್, ಎಂ. ಜಗನ್ನಾಥ್, ಹಿರಿಯ ನಾಯಕ ಕೆ. ಕೇಶವರಾವ್, ಕೆಲವು ಮಾಜಿ ಸಚಿವರು ಸೇರಿದಂತೆ ಟಿಡಿಪಿ ಮತ್ತಿತರ ಪಕ್ಷಗಳ ಹಲವು ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>