<p><strong>ಕರೀಂನಗರ, ಆಂಧ್ರಪ್ರದೇಶ (ಪಿಟಿಐ):</strong> ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಕುರಿತು ತಮ್ಮ ಪ್ರಾಂತ್ಯದ ರಾಜಕಾರಣಿಗಳ `ನಿಷ್ಕ್ರಿಯತೆ~ಗೆ ಬೇಸತ್ತು ವಾರಂಗಲ್ ಜಿಲ್ಲೆಯ 23 ವರ್ಷದ ಯುವಕನೊಬ್ಬ ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.</p>.<p>ಸೀತಾಮ್ಪೇಟ್ ಗ್ರಾಮದ ಎಲ್ ನಾಗರಾಜು ಎಂಬಾತ ಪೆದ್ದಪಲ್ಲಿಯಲ್ಲಿ ರೈಲ್ವೆ ಮೇಲ್ಸೆತುವೆಯಿಂದ ಚಲಿಸುತ್ತಿದ್ದ ರೈಲಿನ ಎದುರು ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದ ಮೂಲಗಳು ಹೇಳಿವೆ.</p>.<p>ತೆಲಂಗಾಣ ರಾಜ್ಯ ರಚನೆಗೆ ಒತ್ತಾಯಿಸಿ ಪ್ರಾಣ ಕಳೆದುಕೊಳ್ಳುತ್ತಿರುವುದಾಗಿ ನಾಗರಾಜು ಆತ್ಮಹತ್ಯೆಗೆ ಮುನ್ನ ಮೊಬೈಲ್ನಲ್ಲಿ ತಮಗೆ ತಿಳಿಸಿದ ಎಂದು ಕುಟುಂಬದವರು ಹೇಳಿದ್ದಾರೆ. ಇದೇ ಬೇಡಿಕೆಗಾಗಿ ಕಳೆದ ವಾರ ಎಂಬಿಎ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರೀಂನಗರ, ಆಂಧ್ರಪ್ರದೇಶ (ಪಿಟಿಐ):</strong> ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಕುರಿತು ತಮ್ಮ ಪ್ರಾಂತ್ಯದ ರಾಜಕಾರಣಿಗಳ `ನಿಷ್ಕ್ರಿಯತೆ~ಗೆ ಬೇಸತ್ತು ವಾರಂಗಲ್ ಜಿಲ್ಲೆಯ 23 ವರ್ಷದ ಯುವಕನೊಬ್ಬ ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.</p>.<p>ಸೀತಾಮ್ಪೇಟ್ ಗ್ರಾಮದ ಎಲ್ ನಾಗರಾಜು ಎಂಬಾತ ಪೆದ್ದಪಲ್ಲಿಯಲ್ಲಿ ರೈಲ್ವೆ ಮೇಲ್ಸೆತುವೆಯಿಂದ ಚಲಿಸುತ್ತಿದ್ದ ರೈಲಿನ ಎದುರು ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದ ಮೂಲಗಳು ಹೇಳಿವೆ.</p>.<p>ತೆಲಂಗಾಣ ರಾಜ್ಯ ರಚನೆಗೆ ಒತ್ತಾಯಿಸಿ ಪ್ರಾಣ ಕಳೆದುಕೊಳ್ಳುತ್ತಿರುವುದಾಗಿ ನಾಗರಾಜು ಆತ್ಮಹತ್ಯೆಗೆ ಮುನ್ನ ಮೊಬೈಲ್ನಲ್ಲಿ ತಮಗೆ ತಿಳಿಸಿದ ಎಂದು ಕುಟುಂಬದವರು ಹೇಳಿದ್ದಾರೆ. ಇದೇ ಬೇಡಿಕೆಗಾಗಿ ಕಳೆದ ವಾರ ಎಂಬಿಎ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>