<p><strong>ನವದೆಹಲಿ (ಪಿಟಿಐ): </strong>ಪ್ರತ್ಯೇಕ ತೆಲಂಗಾಣ ರಾಜ್ಯ ರಚಿಸಿರುವುದನ್ನು ಪ್ರಶ್ನಿಸಿ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಸುಪ್ರೀಂಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.<br /> <br /> ಮುಖ್ಯನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ಪೀಠ ಈ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಆಂಧ್ರಪ್ರದೇಶ ವಿಭಜನೆಗೆ ಸಂಬಂಧಿಸಿದ ಇತರ ಹಲವು ಅರ್ಜಿಗಳ ವಿಚಾರಣೆ ಕೂಡ ಇದೇ ಸಂದರ್ಭದಲ್ಲಿ ನಡೆಯಲಿದೆ.<br /> <br /> ‘ಮಸೂದೆಗೆ ಸಂಸತ್ ಅನುಮೋದನೆ ನೀಡಿಲ್ಲ. ಹಾಗಾಗಿ ಅರ್ಜಿಯ ವಿಚಾರಣೆಗೆ ಇದು ಸಮಯವಲ್ಲ’ ಎಂದು ಫೆ. 7 ಮತ್ತು 17ರಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆದರೆ ಸೂಕ್ತ ಸಮಯದಲ್ಲಿ ಮತ್ತೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ ಎಂಬುದನ್ನು ಸುಪ್ರೀಂಕೋರ್ಟ್ ಆಗಲೇ ಸ್ಪಷ್ಟಪಡಿಸಿತ್ತು.<br /> <br /> ಜೂನ್ 2 ತೆಲಂಗಾಣ ರಾಜ್ಯ ಸ್ಥಾಪನಾ ದಿನ ಎಂದು ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಘೋಷಿಸಿದ್ದು, ಅಂದಿನಿಂದ ತೆಲಂಗಾಣ ರಾಜ್ಯವಾಗಿ ಕಾರ್ಯನಿರ್ವಹಣೆ ಆರಂಭಿಸಲಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಪ್ರತ್ಯೇಕ ತೆಲಂಗಾಣ ರಾಜ್ಯ ರಚಿಸಿರುವುದನ್ನು ಪ್ರಶ್ನಿಸಿ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಸುಪ್ರೀಂಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.<br /> <br /> ಮುಖ್ಯನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ಪೀಠ ಈ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಆಂಧ್ರಪ್ರದೇಶ ವಿಭಜನೆಗೆ ಸಂಬಂಧಿಸಿದ ಇತರ ಹಲವು ಅರ್ಜಿಗಳ ವಿಚಾರಣೆ ಕೂಡ ಇದೇ ಸಂದರ್ಭದಲ್ಲಿ ನಡೆಯಲಿದೆ.<br /> <br /> ‘ಮಸೂದೆಗೆ ಸಂಸತ್ ಅನುಮೋದನೆ ನೀಡಿಲ್ಲ. ಹಾಗಾಗಿ ಅರ್ಜಿಯ ವಿಚಾರಣೆಗೆ ಇದು ಸಮಯವಲ್ಲ’ ಎಂದು ಫೆ. 7 ಮತ್ತು 17ರಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆದರೆ ಸೂಕ್ತ ಸಮಯದಲ್ಲಿ ಮತ್ತೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ ಎಂಬುದನ್ನು ಸುಪ್ರೀಂಕೋರ್ಟ್ ಆಗಲೇ ಸ್ಪಷ್ಟಪಡಿಸಿತ್ತು.<br /> <br /> ಜೂನ್ 2 ತೆಲಂಗಾಣ ರಾಜ್ಯ ಸ್ಥಾಪನಾ ದಿನ ಎಂದು ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಘೋಷಿಸಿದ್ದು, ಅಂದಿನಿಂದ ತೆಲಂಗಾಣ ರಾಜ್ಯವಾಗಿ ಕಾರ್ಯನಿರ್ವಹಣೆ ಆರಂಭಿಸಲಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>