<p><strong>ನವದೆಹಲಿ:</strong> `ಪ್ರತ್ಯೇಕ ತೆಲಂಗಾಣ ರಾಜ್ಯ ಬೇಡಿಕೆ' ಕುರಿತು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವ ಕಾಂಗ್ರೆಸ್, ಸರ್ವಪಕ್ಷ ಸಭೆ ಕರೆದು ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲು ಚಿಂತನೆ ನಡೆಸಿದೆ.<br /> <br /> ಸೋನಿಯಾಗಾಂಧಿ ನೇತೃತ್ವದಲ್ಲಿ ಶುಕ್ರವಾರ ಸೇರಿದ್ದ `ಪಕ್ಷದ ಪ್ರಮುಖರ ಸಭೆ'ಯಲ್ಲಿ ತೆಲಂಗಾಣ ವಿಷಯ ಪ್ರಸ್ತಾಪವಾಗಲಿಲ್ಲ. ಆದರೆ, ಇದೊಂದು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಕಾಂಗ್ರೆಸ್ ಪಕ್ಷವೊಂದೇ ದೋಷಾರೋಪಕ್ಕೆ ಒಳಗಾಗುವುದರಿಂದ ಪಾರಾಗಲು ಸರ್ವಪಕ್ಷ ಸಭೆ ಕರೆದು ಚರ್ಚಿಸಿದ ಬಳಿಕ ಸಾಮೂಹಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.<br /> <br /> ತೆಲಂಗಾಣ ಬೇಡಿಕೆ ಕುರಿತು ಚರ್ಚಿಸಲು ಸರ್ವ ಪಕ್ಷ ಸಭೆ ಕರೆಯುವ ಸಾಧ್ಯತೆಯಿದೆ. ಅಲ್ಲದೆ, ರಾಜ್ಯಗಳ ಪುನರ್ವಿಂಗಡಣೆ ಕುರಿತು ಅಧ್ಯಯನ ನಡೆಸಲು ಎರಡನೇ ಆಯೋಗ ರಚಿಸುವ ಮಾತುಗಳು ಕೇಳಿಬರುತ್ತಿವೆ.<br /> <br /> ಪ್ರಧಾನಿ ಮನಮೋಹನ್ಸಿಂಗ್ ಮತ್ತಿತರ ಪ್ರಮುಖ ನಾಯಕರು ಭಾಗವಹಿಸಿದ್ದ ಸಭೆಯಲ್ಲಿ ತೆಲಂಗಾಣ ವಿಷಯ ಪ್ರಸ್ತಾಪವಾಗಲಿಲ್ಲ.<br /> ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಗುರುವಾರ ಸಾಧ್ಯವಾದಷ್ಟು ಬೇಗನೆ ತೆಲಂಗಾಣ ವಿಷಯದಲ್ಲಿ ಏನಾದರೊಂದು ತೀರ್ಮಾನ ಮಾಡಲಾಗುವುದು ಎಂದು ಹೇಳಿದರು. ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮೊದಲು ತೀರ್ಮಾನ ಆಗುವುದೇ ಎಂಬ ಪ್ರಶ್ನೆಗೆ, ಗೃಹ ಸಚಿವರು ಉತ್ತರಿಸಿದರು.<br /> <br /> `ಪ್ರತ್ಯೇಕ ತೆಲಂಗಾಣ ರಾಜ್ಯ' ರಚನೆ ಕುರಿತಂತೆ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಈಗಾಗಲೇ ಸೋನಿಯಾ ಗಾಂಧಿಗೆ ವರದಿ ಸಲ್ಲಿಸಿದ್ದಾರೆ. ಬೇಡಿಕೆಯ ಸಾಧ್ಯಾಸಾಧ್ಯತೆ ಕುರಿತು ಯುಪಿಎ ಸರ್ಕಾರ ಪರಿಶೀಲನೆ ನಡೆಸುತ್ತಿದೆ.<br /> <br /> ಇದೇ ತಿಂಗಳು 12ರಂದು ಸೇರಿದ್ದ ಪ್ರಮುಖರ ಸಮಿತಿ ಸಭೆ ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಪಕ್ಷದ ಕಾರ್ಯಕಾರಿಣಿಗೆ ಬಿಟ್ಟಿದೆ.<br /> <br /> ತೆಲಂಗಾಣ ಬೇಡಿಕೆ ಕುರಿತು ಇನ್ನೂ ಒಂದೆರಡು ಸಭೆಗಳನ್ನು ಕರೆದು ಚರ್ಚಿಸಲಾಗುವುದು. ಅನಂತರ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿದ್ದವು.<br /> <br /> ಆದರೆ, ಕಾಂಗ್ರೆಸ್ ಕಾರ್ಯಕಾರಿಣಿಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.<br /> ತೆಲಂಗಾಣ ಕುರಿತಂತೆ ಎಲ್ಲ ರಾಜಕೀಯ ಪಕ್ಷಗಳಲ್ಲೂ ಒಡಕು ತಲೆದೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> `ಪ್ರತ್ಯೇಕ ತೆಲಂಗಾಣ ರಾಜ್ಯ ಬೇಡಿಕೆ' ಕುರಿತು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವ ಕಾಂಗ್ರೆಸ್, ಸರ್ವಪಕ್ಷ ಸಭೆ ಕರೆದು ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲು ಚಿಂತನೆ ನಡೆಸಿದೆ.<br /> <br /> ಸೋನಿಯಾಗಾಂಧಿ ನೇತೃತ್ವದಲ್ಲಿ ಶುಕ್ರವಾರ ಸೇರಿದ್ದ `ಪಕ್ಷದ ಪ್ರಮುಖರ ಸಭೆ'ಯಲ್ಲಿ ತೆಲಂಗಾಣ ವಿಷಯ ಪ್ರಸ್ತಾಪವಾಗಲಿಲ್ಲ. ಆದರೆ, ಇದೊಂದು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಕಾಂಗ್ರೆಸ್ ಪಕ್ಷವೊಂದೇ ದೋಷಾರೋಪಕ್ಕೆ ಒಳಗಾಗುವುದರಿಂದ ಪಾರಾಗಲು ಸರ್ವಪಕ್ಷ ಸಭೆ ಕರೆದು ಚರ್ಚಿಸಿದ ಬಳಿಕ ಸಾಮೂಹಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.<br /> <br /> ತೆಲಂಗಾಣ ಬೇಡಿಕೆ ಕುರಿತು ಚರ್ಚಿಸಲು ಸರ್ವ ಪಕ್ಷ ಸಭೆ ಕರೆಯುವ ಸಾಧ್ಯತೆಯಿದೆ. ಅಲ್ಲದೆ, ರಾಜ್ಯಗಳ ಪುನರ್ವಿಂಗಡಣೆ ಕುರಿತು ಅಧ್ಯಯನ ನಡೆಸಲು ಎರಡನೇ ಆಯೋಗ ರಚಿಸುವ ಮಾತುಗಳು ಕೇಳಿಬರುತ್ತಿವೆ.<br /> <br /> ಪ್ರಧಾನಿ ಮನಮೋಹನ್ಸಿಂಗ್ ಮತ್ತಿತರ ಪ್ರಮುಖ ನಾಯಕರು ಭಾಗವಹಿಸಿದ್ದ ಸಭೆಯಲ್ಲಿ ತೆಲಂಗಾಣ ವಿಷಯ ಪ್ರಸ್ತಾಪವಾಗಲಿಲ್ಲ.<br /> ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಗುರುವಾರ ಸಾಧ್ಯವಾದಷ್ಟು ಬೇಗನೆ ತೆಲಂಗಾಣ ವಿಷಯದಲ್ಲಿ ಏನಾದರೊಂದು ತೀರ್ಮಾನ ಮಾಡಲಾಗುವುದು ಎಂದು ಹೇಳಿದರು. ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮೊದಲು ತೀರ್ಮಾನ ಆಗುವುದೇ ಎಂಬ ಪ್ರಶ್ನೆಗೆ, ಗೃಹ ಸಚಿವರು ಉತ್ತರಿಸಿದರು.<br /> <br /> `ಪ್ರತ್ಯೇಕ ತೆಲಂಗಾಣ ರಾಜ್ಯ' ರಚನೆ ಕುರಿತಂತೆ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಈಗಾಗಲೇ ಸೋನಿಯಾ ಗಾಂಧಿಗೆ ವರದಿ ಸಲ್ಲಿಸಿದ್ದಾರೆ. ಬೇಡಿಕೆಯ ಸಾಧ್ಯಾಸಾಧ್ಯತೆ ಕುರಿತು ಯುಪಿಎ ಸರ್ಕಾರ ಪರಿಶೀಲನೆ ನಡೆಸುತ್ತಿದೆ.<br /> <br /> ಇದೇ ತಿಂಗಳು 12ರಂದು ಸೇರಿದ್ದ ಪ್ರಮುಖರ ಸಮಿತಿ ಸಭೆ ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಪಕ್ಷದ ಕಾರ್ಯಕಾರಿಣಿಗೆ ಬಿಟ್ಟಿದೆ.<br /> <br /> ತೆಲಂಗಾಣ ಬೇಡಿಕೆ ಕುರಿತು ಇನ್ನೂ ಒಂದೆರಡು ಸಭೆಗಳನ್ನು ಕರೆದು ಚರ್ಚಿಸಲಾಗುವುದು. ಅನಂತರ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿದ್ದವು.<br /> <br /> ಆದರೆ, ಕಾಂಗ್ರೆಸ್ ಕಾರ್ಯಕಾರಿಣಿಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.<br /> ತೆಲಂಗಾಣ ಕುರಿತಂತೆ ಎಲ್ಲ ರಾಜಕೀಯ ಪಕ್ಷಗಳಲ್ಲೂ ಒಡಕು ತಲೆದೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>