<p>ಸಂತೇಮರಹಳ್ಳಿ: ಸಮೀಪದ ತೆಳ್ಳನೂರು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿದ್ದ ಕೆರೆಯನ್ನು ಕಂದಾಯ ಅಧಿಕಾರಿಗಳು ಗುರುವಾರ ತೆರವುಗೊಳಿಸಿದರು.<br /> <br /> ಒತ್ತುವರಿಯಾಗಿರುವ ಕೆರೆಯನ್ನು ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದರಲ್ಲದೇ, ಉಳಿದಿರುವ ಕೆರೆಗಳ ಸರ್ವೆ ನಡೆಸಲು ಮುಂದಾಗಿರುವುದು ಜನರ ಹರ್ಷಕ್ಕೆ ಕಾರಣವಾಗಿದೆ.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಸಂತೇಮರಹಳ್ಳಿ ನಾಡಕಚೇರಿಯ ಉಪತಹಶೀಲ್ದಾರ್ ಪ್ರಭುರಾಜ್, ಸರ್ಕಾರದ ನಿರ್ದೇಶನ ಮತ್ತು ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಒತ್ತುವರಿಯಾಗಿರುವ ಸರ್ಕಾರಕ್ಕೆ ಸೇರಿದ ಕೆರೆಗಳು ಮತ್ತು ರಸ್ತೆಗಳನ್ನು ತೆರವುಗೊಳಿಸಲಾಗುತ್ತಿದೆ. ಗ್ರಾಮದ ಸರ್ವೆ ನಂ 23 ರಲ್ಲಿ 1.29 ಎಕರೆ ವಿಸ್ತೀರ್ಣದಲ್ಲಿ ಕೆರೆ ಇದ್ದು, 1 ಎಕರೆ ಪ್ರದೇಶ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿತ್ತು. ಒತ್ತುವರಿಯಾಗಿರುವ ಕೆರೆಯನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಗ್ರಾಮದಲ್ಲಿ ಉಳಿದಿರುವ 3 ಕೆರೆಗಳನ್ನು ಸರ್ವೆ ಮಾಡಿ ಒತ್ತುವರಿಯಾಗಿರುವ ಸ್ಥಳವನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.<br /> <br /> ಗ್ರಾಮಲೆಕ್ಕಿಗರಾದ ನಾಗರಾಜು, ಲಿಂಗರಾಜಮೂರ್ತಿ, ರಮೇಶ್, ಶಿವಕುಮಾರ್, ವಿಜಯರಾಜ್, ಗ್ರಾಮಸಹಾಯಕ ಬಸವಣ್ಣ, ಪುಟ್ಟರಾಜು, ರವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಮರಹಳ್ಳಿ: ಸಮೀಪದ ತೆಳ್ಳನೂರು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿದ್ದ ಕೆರೆಯನ್ನು ಕಂದಾಯ ಅಧಿಕಾರಿಗಳು ಗುರುವಾರ ತೆರವುಗೊಳಿಸಿದರು.<br /> <br /> ಒತ್ತುವರಿಯಾಗಿರುವ ಕೆರೆಯನ್ನು ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದರಲ್ಲದೇ, ಉಳಿದಿರುವ ಕೆರೆಗಳ ಸರ್ವೆ ನಡೆಸಲು ಮುಂದಾಗಿರುವುದು ಜನರ ಹರ್ಷಕ್ಕೆ ಕಾರಣವಾಗಿದೆ.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಸಂತೇಮರಹಳ್ಳಿ ನಾಡಕಚೇರಿಯ ಉಪತಹಶೀಲ್ದಾರ್ ಪ್ರಭುರಾಜ್, ಸರ್ಕಾರದ ನಿರ್ದೇಶನ ಮತ್ತು ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಒತ್ತುವರಿಯಾಗಿರುವ ಸರ್ಕಾರಕ್ಕೆ ಸೇರಿದ ಕೆರೆಗಳು ಮತ್ತು ರಸ್ತೆಗಳನ್ನು ತೆರವುಗೊಳಿಸಲಾಗುತ್ತಿದೆ. ಗ್ರಾಮದ ಸರ್ವೆ ನಂ 23 ರಲ್ಲಿ 1.29 ಎಕರೆ ವಿಸ್ತೀರ್ಣದಲ್ಲಿ ಕೆರೆ ಇದ್ದು, 1 ಎಕರೆ ಪ್ರದೇಶ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿತ್ತು. ಒತ್ತುವರಿಯಾಗಿರುವ ಕೆರೆಯನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಗ್ರಾಮದಲ್ಲಿ ಉಳಿದಿರುವ 3 ಕೆರೆಗಳನ್ನು ಸರ್ವೆ ಮಾಡಿ ಒತ್ತುವರಿಯಾಗಿರುವ ಸ್ಥಳವನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.<br /> <br /> ಗ್ರಾಮಲೆಕ್ಕಿಗರಾದ ನಾಗರಾಜು, ಲಿಂಗರಾಜಮೂರ್ತಿ, ರಮೇಶ್, ಶಿವಕುಮಾರ್, ವಿಜಯರಾಜ್, ಗ್ರಾಮಸಹಾಯಕ ಬಸವಣ್ಣ, ಪುಟ್ಟರಾಜು, ರವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>