<p><strong>ಸಂತೇಮರಹಳ್ಳಿ: </strong>ತೆಳ್ಳನೂರು ಗ್ರಾಮಕ್ಕೆ ಭೇಟಿ ನೀಡಿದರೆ ಕಸದ ರಾಶಿಗಳು ಸ್ವಾಗತಿಸುತ್ತವೆ. ರಸ್ತೆಯ ಇಕ್ಕೆಲಗಳು ಬಹಿರ್ದೆಸೆಯ ತಾಣವಾಗಿವೆ. ಇದರಿಂದ ಗ್ರಾಮದಲ್ಲಿ ನಿರ್ಮಲ ಭಾರತ್ ಯೋಜನೆ ಅನುಷ್ಠಾನ ಆಗಿಲ್ಲ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತದೆ.<br /> <br /> ಈ ರಸ್ತೆಯಲ್ಲಿ ನಡೆಯಬೇಕಾದರೆ ಮೂಗು ಮುಚ್ಚಿಕೊಂಡು ನಡೆಯಬೇಕು. ರಸ್ತೆಯ ಮಗ್ಗುಲಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಇರುವುದರಿಂದ ಮಕ್ಕಳು ಪ್ರತಿ ದಿನ ದುರ್ವಾಸನೆ ಸಹಿಸಿಕೊಂಡಿರಬೇಕಾದ ಪರಿಸ್ಥಿತಿ ಇದೆ.<br /> <br /> ಶಾಲೆ ಮತ್ತು ಅಂಗನವಾಡಿ ಕೇಂದ್ರದ ಮುಂಭಾಗ ಚರಂಡಿ ವ್ಯವಸ್ಥೆ ಇಲ್ಲದೇ ತ್ಯಾಜ್ಯ ನೀರು ಹರಿಯುತ್ತಿದೆ. ಸಮೀಪದಲ್ಲಿಯೇ ಕೈಪಂಪು ಇದ್ದು ಅದರ ತ್ಯಾಜ್ಯಮಯ ನೀರು ಕೂಡ ರಸ್ತೆ ಸೇರುತ್ತಿದೆ.<br /> <br /> ಗ್ರಾಮದ ಮುಂಭಾಗ ನಿಂತ ಚರಂಡಿ ನೀರಿನಿಂದ ಸುತ್ತಲೂ ಕಳೆ ಗಿಡಗಳು ಬೆಳೆದುಕೊಂಡಿವೆ. ಜತೆಗೆ ಅನೈರ್ಮಲ್ಯಕ್ಕೂ ಕಾರಣವಾಗಿದೆ. ಕೊಚ್ಚೆ ನೀರಿನಿಂದ ಸೊಳ್ಳೆ ಕಾಟವೂ ಹೆಚ್ಚಾಗಿ, ರೋಗ ರುಜಿನುಗಳ ಭಯ ಹೆಚ್ಚಿದೆ.<br /> <br /> ಗ್ರಾಮದೊಳಗಿನ ರಸ್ತೆ ವ್ಯವಸ್ಥೆ ಹದಗೆಟ್ಟಿದೆ. ಮಳೆಗಾಲದಲ್ಲಿ ನೀರು ನಿಂತಲ್ಲಿಯೇ ನಿಂತು ಜನ ಸಂಚಾರಕ್ಕೂ ಅಡಚಣೆ ಉಂಟಾಗುತ್ತಿದೆ.<br /> ವಿದ್ಯುತ್ ಕಂಬಗಳಿಗೆ ಬಲ್್ಬ ಗಳನ್ನು ಅಳವಡಿಸಿದ ನಂತರ 2 ದಿನ ಉರಿಯುತ್ತದೆ. ನಂತರದ ದಿನಗಳಿಂದ ಬೀದಿ ದೀಪಗಳು ಉರಿಯುವುದಿಲ್ಲ. ಇದರಿಂದ ರಾತ್ರಿ ಸಮಯದಲ್ಲಿ ತಿರುಗಾಡುವುದು ಕಷ್ಟವಾಗಿದೆ ಎಂದು ನಿವಾಸಿಗಳು ದೂರುತ್ತಾರೆ.<br /> <br /> ಇನ್ನಾದರೂ ಸಂಬಂಧಪಟ್ಟವರು ಚರಂಡಿ ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಬೇಕು ಎಂದು ಗ್ರಾಮದ ನಿವಾಸಿಗಳಾದ ರವೀಶ್, ಗುರುಸ್ವಾಮಪ್ಪ ಒತ್ತಾಯಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ: </strong>ತೆಳ್ಳನೂರು ಗ್ರಾಮಕ್ಕೆ ಭೇಟಿ ನೀಡಿದರೆ ಕಸದ ರಾಶಿಗಳು ಸ್ವಾಗತಿಸುತ್ತವೆ. ರಸ್ತೆಯ ಇಕ್ಕೆಲಗಳು ಬಹಿರ್ದೆಸೆಯ ತಾಣವಾಗಿವೆ. ಇದರಿಂದ ಗ್ರಾಮದಲ್ಲಿ ನಿರ್ಮಲ ಭಾರತ್ ಯೋಜನೆ ಅನುಷ್ಠಾನ ಆಗಿಲ್ಲ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತದೆ.<br /> <br /> ಈ ರಸ್ತೆಯಲ್ಲಿ ನಡೆಯಬೇಕಾದರೆ ಮೂಗು ಮುಚ್ಚಿಕೊಂಡು ನಡೆಯಬೇಕು. ರಸ್ತೆಯ ಮಗ್ಗುಲಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಇರುವುದರಿಂದ ಮಕ್ಕಳು ಪ್ರತಿ ದಿನ ದುರ್ವಾಸನೆ ಸಹಿಸಿಕೊಂಡಿರಬೇಕಾದ ಪರಿಸ್ಥಿತಿ ಇದೆ.<br /> <br /> ಶಾಲೆ ಮತ್ತು ಅಂಗನವಾಡಿ ಕೇಂದ್ರದ ಮುಂಭಾಗ ಚರಂಡಿ ವ್ಯವಸ್ಥೆ ಇಲ್ಲದೇ ತ್ಯಾಜ್ಯ ನೀರು ಹರಿಯುತ್ತಿದೆ. ಸಮೀಪದಲ್ಲಿಯೇ ಕೈಪಂಪು ಇದ್ದು ಅದರ ತ್ಯಾಜ್ಯಮಯ ನೀರು ಕೂಡ ರಸ್ತೆ ಸೇರುತ್ತಿದೆ.<br /> <br /> ಗ್ರಾಮದ ಮುಂಭಾಗ ನಿಂತ ಚರಂಡಿ ನೀರಿನಿಂದ ಸುತ್ತಲೂ ಕಳೆ ಗಿಡಗಳು ಬೆಳೆದುಕೊಂಡಿವೆ. ಜತೆಗೆ ಅನೈರ್ಮಲ್ಯಕ್ಕೂ ಕಾರಣವಾಗಿದೆ. ಕೊಚ್ಚೆ ನೀರಿನಿಂದ ಸೊಳ್ಳೆ ಕಾಟವೂ ಹೆಚ್ಚಾಗಿ, ರೋಗ ರುಜಿನುಗಳ ಭಯ ಹೆಚ್ಚಿದೆ.<br /> <br /> ಗ್ರಾಮದೊಳಗಿನ ರಸ್ತೆ ವ್ಯವಸ್ಥೆ ಹದಗೆಟ್ಟಿದೆ. ಮಳೆಗಾಲದಲ್ಲಿ ನೀರು ನಿಂತಲ್ಲಿಯೇ ನಿಂತು ಜನ ಸಂಚಾರಕ್ಕೂ ಅಡಚಣೆ ಉಂಟಾಗುತ್ತಿದೆ.<br /> ವಿದ್ಯುತ್ ಕಂಬಗಳಿಗೆ ಬಲ್್ಬ ಗಳನ್ನು ಅಳವಡಿಸಿದ ನಂತರ 2 ದಿನ ಉರಿಯುತ್ತದೆ. ನಂತರದ ದಿನಗಳಿಂದ ಬೀದಿ ದೀಪಗಳು ಉರಿಯುವುದಿಲ್ಲ. ಇದರಿಂದ ರಾತ್ರಿ ಸಮಯದಲ್ಲಿ ತಿರುಗಾಡುವುದು ಕಷ್ಟವಾಗಿದೆ ಎಂದು ನಿವಾಸಿಗಳು ದೂರುತ್ತಾರೆ.<br /> <br /> ಇನ್ನಾದರೂ ಸಂಬಂಧಪಟ್ಟವರು ಚರಂಡಿ ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಬೇಕು ಎಂದು ಗ್ರಾಮದ ನಿವಾಸಿಗಳಾದ ರವೀಶ್, ಗುರುಸ್ವಾಮಪ್ಪ ಒತ್ತಾಯಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>