<p><strong>ಪಣಜಿ (ಐಎಎನ್ಎಸ್): </strong>ತೆಹೆಲ್ಕಾದ ಮಾಜಿ ಪ್ರಧಾನ ಸಂಪಾದಕ ತೇಜ್ಪಾಲ್ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಿ 60 ದಿನಗಳಲ್ಲಿ ಮುಗಿಸಬೇಕು ಎಂದು ಕೋರಿ ಪ್ರಾಸಿಕ್ಯೂಟರ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.<br /> <br /> ಪ್ರಮುಖ ವ್ಯಕ್ತಿ ಭಾಗಿಯಾಗಿರುವ ಪ್ರಕರಣ ಇದಾಗಿರುವುದರಿಂದ ಅತಿ ಸೂಕ್ಷ್ಮವಾಗಿದ್ದು ವಿಚಾರಣೆಯನ್ನು 60 ದಿನಗಳಲ್ಲಿ ಮುಗಿಸಬೇಕು ಎಂದು ಕೊರುತ್ತೇವೆ ಎಂದು ಸರ್ಕಾರಿ ವಕೀಲ ಫ್ರಾನ್ಸಿಸ್ ತವೊರಾ ತಿಳಿಸಿದ್ದಾರೆ.<br /> <br /> ಗೋವಾದ ಪಂಚತಾರಾ ಹೋಟೆಲ್ನಲ್ಲಿ ನಡೆದ ಸಮ್ಮೇಳನದ ವೇಳೆ ತೇಜ್ಪಾಲ್ ಅವರು ಲಿಪ್ಟಿನಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದರು ಎಂದು ಅವರ ಕಿರಿಯ ಸಹೋದ್ಯೋಗಿ ದೂರು ನೀಡಿದ್ದರಿಂದ ತನಿಖೆ ನಡೆಸಿದ ಗೋವಾ ಪೊಲೀಸರು ತೇಜ್ಪಾಲ್ ವಿರುದ್ಧ ಐಪಿಸಿಯ ಅನೇಕ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.<br /> <br /> ಬಾಂಬೈ ಹೈಕೋರ್ಟ್ನ ಪಣಜಿ ಪೀಠವು ತೇಜಪಾಲ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ತನಿಖಾ ಅಧಿಕಾರಿಗೆ ಬೆದರಿಕೆ ಹಾಕಿದ ಮತ್ತು ಜೈಲಿನಲ್ಲಿ ಮೊಬೈಲ್ ಹೊಂದಿದ್ದರು ಎಂಬ ಕಾರಣಕ್ಕೆ ತೇಜ್ಪಾಲ್ ವಿರುದ್ಧ ಮತ್ತೆ 2ಪ್ರಕರಣಗಳನ್ನು ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ (ಐಎಎನ್ಎಸ್): </strong>ತೆಹೆಲ್ಕಾದ ಮಾಜಿ ಪ್ರಧಾನ ಸಂಪಾದಕ ತೇಜ್ಪಾಲ್ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಿ 60 ದಿನಗಳಲ್ಲಿ ಮುಗಿಸಬೇಕು ಎಂದು ಕೋರಿ ಪ್ರಾಸಿಕ್ಯೂಟರ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.<br /> <br /> ಪ್ರಮುಖ ವ್ಯಕ್ತಿ ಭಾಗಿಯಾಗಿರುವ ಪ್ರಕರಣ ಇದಾಗಿರುವುದರಿಂದ ಅತಿ ಸೂಕ್ಷ್ಮವಾಗಿದ್ದು ವಿಚಾರಣೆಯನ್ನು 60 ದಿನಗಳಲ್ಲಿ ಮುಗಿಸಬೇಕು ಎಂದು ಕೊರುತ್ತೇವೆ ಎಂದು ಸರ್ಕಾರಿ ವಕೀಲ ಫ್ರಾನ್ಸಿಸ್ ತವೊರಾ ತಿಳಿಸಿದ್ದಾರೆ.<br /> <br /> ಗೋವಾದ ಪಂಚತಾರಾ ಹೋಟೆಲ್ನಲ್ಲಿ ನಡೆದ ಸಮ್ಮೇಳನದ ವೇಳೆ ತೇಜ್ಪಾಲ್ ಅವರು ಲಿಪ್ಟಿನಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದರು ಎಂದು ಅವರ ಕಿರಿಯ ಸಹೋದ್ಯೋಗಿ ದೂರು ನೀಡಿದ್ದರಿಂದ ತನಿಖೆ ನಡೆಸಿದ ಗೋವಾ ಪೊಲೀಸರು ತೇಜ್ಪಾಲ್ ವಿರುದ್ಧ ಐಪಿಸಿಯ ಅನೇಕ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.<br /> <br /> ಬಾಂಬೈ ಹೈಕೋರ್ಟ್ನ ಪಣಜಿ ಪೀಠವು ತೇಜಪಾಲ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ತನಿಖಾ ಅಧಿಕಾರಿಗೆ ಬೆದರಿಕೆ ಹಾಕಿದ ಮತ್ತು ಜೈಲಿನಲ್ಲಿ ಮೊಬೈಲ್ ಹೊಂದಿದ್ದರು ಎಂಬ ಕಾರಣಕ್ಕೆ ತೇಜ್ಪಾಲ್ ವಿರುದ್ಧ ಮತ್ತೆ 2ಪ್ರಕರಣಗಳನ್ನು ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>