<p><strong>ಬೆಂಗಳೂರು:</strong> ಅರಣ್ಯ ಇಲಾಖೆಯವರು ಹಲವೆಡೆ ರೈತರ ತೋಟಗಳನ್ನು ಪದೇ ಪದೇ ತೆರವುಗೊಳಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಮತ್ತು ಸಂಬಂಧಪಟ್ಟ ಶಾಸಕರ ಸಭೆ ಕರೆದು ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಸೋಮವಾರ ವಿಧಾನ ಸಭೆಯಲ್ಲಿ ತಿಳಿಸಿದರು.<br /> <br /> ಪಕ್ಷೇತರ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪ್ರಶ್ನೋತ್ತರ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಚಿತ್ರದುರ್ಗ ಜಿಲ್ಲೆಯಲ್ಲಿ ತೆಂಗಿನ ತೋಟಗಳಿರುವ ಜಮೀನುಗಳ ಮಾಲೀಕರಿಗೆ ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿದೆ. ಅರಣ್ಯದ ಗಡಿಯನ್ನು ಸರಿಯಾಗಿ ಗುರುತಿಸದ ಕಾರಣ ಈ ರೀತಿ ಆಗಿದೆ ಎಂದರು.<br /> <br /> ಇದಕ್ಕೆ ಉತ್ತರಿಸಿದ ಸಚಿವರು, ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು. ಆದರೆ ಸಚಿವರ ಉತ್ತರದಿಂದ ತೃಪ್ತರಾಗದ ವಿರೋಧ ಪಕ್ಷದ ಉಪನಾಯಕ ಟಿ.ಬಿ.ಜಯಚಂದ್ರ, `ನನ್ನ ಕ್ಷೇತ್ರದಲ್ಲೂ ಈ ಸಮಸ್ಯೆ ಇದೆ. 100 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೂ, ಸರ್ಕಾರ ಮಾಡಿದ ತಪ್ಪಿನಿಂದಾಗಿ ರೈತರು ಬೀದಿ ಪಾಲಾಗುವಂತಾಗಿದೆ. ರೈತರನ್ನು ಒಕ್ಕಲೆಬ್ಬಿಸದೆ ಇರಲು ನ್ಯಾಯಾಲಯವೂ ಸಮ್ಮತಿಸಿದೆ. ಆದರೆ ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಮಾಹಿತಿಯನ್ನು ಕೇಂದ್ರಕ್ಕೆ ನೀಡಿಲ್ಲ~ ಎಂದು ಆಕ್ರೋಶ ವ್ಯಕ್ತಪಡಿಸಿದರು. `ಅಧಿಕಾರಿಗಳು ಹೇಳಿದ ಹಾಗೆ ಕೇಳಬೇಡಿ, ಕಾಯ್ದೆಯಡಿ ಕೆಲಸ ಮಾಡಿ~ ಎಂದು ಸ್ಪೀಕರ್ ಸಚಿವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅರಣ್ಯ ಇಲಾಖೆಯವರು ಹಲವೆಡೆ ರೈತರ ತೋಟಗಳನ್ನು ಪದೇ ಪದೇ ತೆರವುಗೊಳಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಮತ್ತು ಸಂಬಂಧಪಟ್ಟ ಶಾಸಕರ ಸಭೆ ಕರೆದು ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಸೋಮವಾರ ವಿಧಾನ ಸಭೆಯಲ್ಲಿ ತಿಳಿಸಿದರು.<br /> <br /> ಪಕ್ಷೇತರ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪ್ರಶ್ನೋತ್ತರ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಚಿತ್ರದುರ್ಗ ಜಿಲ್ಲೆಯಲ್ಲಿ ತೆಂಗಿನ ತೋಟಗಳಿರುವ ಜಮೀನುಗಳ ಮಾಲೀಕರಿಗೆ ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿದೆ. ಅರಣ್ಯದ ಗಡಿಯನ್ನು ಸರಿಯಾಗಿ ಗುರುತಿಸದ ಕಾರಣ ಈ ರೀತಿ ಆಗಿದೆ ಎಂದರು.<br /> <br /> ಇದಕ್ಕೆ ಉತ್ತರಿಸಿದ ಸಚಿವರು, ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು. ಆದರೆ ಸಚಿವರ ಉತ್ತರದಿಂದ ತೃಪ್ತರಾಗದ ವಿರೋಧ ಪಕ್ಷದ ಉಪನಾಯಕ ಟಿ.ಬಿ.ಜಯಚಂದ್ರ, `ನನ್ನ ಕ್ಷೇತ್ರದಲ್ಲೂ ಈ ಸಮಸ್ಯೆ ಇದೆ. 100 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೂ, ಸರ್ಕಾರ ಮಾಡಿದ ತಪ್ಪಿನಿಂದಾಗಿ ರೈತರು ಬೀದಿ ಪಾಲಾಗುವಂತಾಗಿದೆ. ರೈತರನ್ನು ಒಕ್ಕಲೆಬ್ಬಿಸದೆ ಇರಲು ನ್ಯಾಯಾಲಯವೂ ಸಮ್ಮತಿಸಿದೆ. ಆದರೆ ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಮಾಹಿತಿಯನ್ನು ಕೇಂದ್ರಕ್ಕೆ ನೀಡಿಲ್ಲ~ ಎಂದು ಆಕ್ರೋಶ ವ್ಯಕ್ತಪಡಿಸಿದರು. `ಅಧಿಕಾರಿಗಳು ಹೇಳಿದ ಹಾಗೆ ಕೇಳಬೇಡಿ, ಕಾಯ್ದೆಯಡಿ ಕೆಲಸ ಮಾಡಿ~ ಎಂದು ಸ್ಪೀಕರ್ ಸಚಿವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>