<p>ಬಳ್ಳಾರಿ: ತೋಟಗಾರಿಕೆ ಇಲಾಖೆಯು ಜಿಲ್ಲೆಯ ರೈತರ ಮಕ್ಕಳಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ನೆರವಾಗಲು ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.<br /> <br /> ಈ ತರಬೇತಿಯನ್ನು ಆಯ್ದ 25 ಅಭ್ಯರ್ಥಿಗಳಿಗೆ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿ ಅವಧಿಯು 10 ತಿಂಗಳಿನದ್ದಾಗಿದ್ದು, ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅಭ್ಯರ್ಥಿಗಳು ತಮ್ಮ ಪಾಲಕರ ಹೆಸರಿನಲ್ಲಿ ಜಮೀನು ಹೊಂದಿರುವ, ವ್ಯವಸಾಯ ಮಾಡುತ್ತಿರುವ ವಿವರ ಸಲ್ಲಿಸಬೇಕು. <br /> <br /> ಅಭ್ಯರ್ಥಿ 10ನೇ ತರಗತಿ ಉತ್ತೀರ್ಣರಾಗಿದ್ದು, 18ರಿಂದ 30 ವರ್ಷ ವಯೋಮಿತಿ ಒಳಗಿರಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 23ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ), ಬಳ್ಳಾರಿ ಅಥವಾ ಜಿಲ್ಲೆಯ ಎಲ್ಲ ತಾಲ್ಲೂಕು ತೋಟಗಾರಿಕೆ ಕಚೇರಿಗಳಲ್ಲಿ ಸಲ್ಲಿಸಬಹುದು.<br /> <br /> ಅಭ್ಯರ್ಥಿಗಳ ಆಯ್ಕೆಗಾಗಿ ಏಪ್ರಿಲ್ 27ರಂದು ಬೆಳಿಗ್ಗೆ 10ಕ್ಕೆ ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ತರಬೇತಿಗೆ ಸೇರಬಯಸುವವರು ರೂ 1000 ಭದ್ರತಾ ಠೇವಣಿ ತುಂಬಬೇಕು. <br /> <br /> ಆಸಕ್ತ ಅಭ್ಯರ್ಥಿಗಳು ಸಂದರ್ಶನದ ವೇಳೆ ವಿದ್ಯಾರ್ಹತೆ ಅಂಕಪಟ್ಟಿ, ಹುಟ್ಟಿದ ದಿನಾಂಕದ ಪ್ರಮಾಣ ಪತ್ರ, ಪಹಣಿ, ಜಾತಿ ಪ್ರಮಾಣ ಪತ್ರ ಹಾಗೂ ಇತರ ಅಗತ್ಯ ದಾಖಲೆಗಳ ಮೂಲಪ್ರತಿ ಹಾಜರುಪಡಿಸಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ತೋಟಗಾರಿಕೆ ಇಲಾಖೆಯು ಜಿಲ್ಲೆಯ ರೈತರ ಮಕ್ಕಳಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ನೆರವಾಗಲು ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.<br /> <br /> ಈ ತರಬೇತಿಯನ್ನು ಆಯ್ದ 25 ಅಭ್ಯರ್ಥಿಗಳಿಗೆ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿ ಅವಧಿಯು 10 ತಿಂಗಳಿನದ್ದಾಗಿದ್ದು, ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅಭ್ಯರ್ಥಿಗಳು ತಮ್ಮ ಪಾಲಕರ ಹೆಸರಿನಲ್ಲಿ ಜಮೀನು ಹೊಂದಿರುವ, ವ್ಯವಸಾಯ ಮಾಡುತ್ತಿರುವ ವಿವರ ಸಲ್ಲಿಸಬೇಕು. <br /> <br /> ಅಭ್ಯರ್ಥಿ 10ನೇ ತರಗತಿ ಉತ್ತೀರ್ಣರಾಗಿದ್ದು, 18ರಿಂದ 30 ವರ್ಷ ವಯೋಮಿತಿ ಒಳಗಿರಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 23ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ), ಬಳ್ಳಾರಿ ಅಥವಾ ಜಿಲ್ಲೆಯ ಎಲ್ಲ ತಾಲ್ಲೂಕು ತೋಟಗಾರಿಕೆ ಕಚೇರಿಗಳಲ್ಲಿ ಸಲ್ಲಿಸಬಹುದು.<br /> <br /> ಅಭ್ಯರ್ಥಿಗಳ ಆಯ್ಕೆಗಾಗಿ ಏಪ್ರಿಲ್ 27ರಂದು ಬೆಳಿಗ್ಗೆ 10ಕ್ಕೆ ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ತರಬೇತಿಗೆ ಸೇರಬಯಸುವವರು ರೂ 1000 ಭದ್ರತಾ ಠೇವಣಿ ತುಂಬಬೇಕು. <br /> <br /> ಆಸಕ್ತ ಅಭ್ಯರ್ಥಿಗಳು ಸಂದರ್ಶನದ ವೇಳೆ ವಿದ್ಯಾರ್ಹತೆ ಅಂಕಪಟ್ಟಿ, ಹುಟ್ಟಿದ ದಿನಾಂಕದ ಪ್ರಮಾಣ ಪತ್ರ, ಪಹಣಿ, ಜಾತಿ ಪ್ರಮಾಣ ಪತ್ರ ಹಾಗೂ ಇತರ ಅಗತ್ಯ ದಾಖಲೆಗಳ ಮೂಲಪ್ರತಿ ಹಾಜರುಪಡಿಸಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>