<p><span style="font-size: 26px;"><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಕಾಫಿ ಪಲ್ಪಿಂಗ್ ಘಟಕಗಳಿಂದ ಉಂಟಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಕಾಫಿ ಬೆಳೆಗಾರರಲ್ಲಿ ಹಾಗೂ ಪಲ್ಪಿಂಗ್ ಘಟಕಗಳ ಮಾಲೀಕರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</span><br /> <br /> ವಿಭಾಗ ಮಟ್ಟದ ಲೋಕ ಅದಾಲತ್ಗೆ ಮಾಹಿತಿ ನೀಡುವ ಬಗ್ಗೆ ನಗರದ ಕೋಟೆ ಹಳೇ ವಿಧಾನಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.<br /> <br /> ಇದೇ ತಿಂಗಳ 3 ರಂದು (ಬುಧವಾರ) ಮೈಸೂರಿನಲ್ಲಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೈಸೂರಿನ ವಿಭಾಗ ಮಟ್ಟದ ಲೋಕ ಅದಾಲತ್ ಪೂರ್ವಭಾವಿ ಸಭೆ ನಡೆಯಲಿದ್ದು, ಆ ನಿಟ್ಟಿನಲ್ಲಿ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಲಾಯಿತು.<br /> <br /> ಕಾವೇರಿ ನದಿ ಪಾತ್ರ ಸೇರಿದಂತೆ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಸಂಬಂಧಿಸಿದಂತೆ ಇದುವರೆಗೆ ನಿರ್ವಹಣೆ ಮಾಡಲಾಗಿರುವ ಕ್ರಮಗಳು, ಆನೆ-ಮಾನವ ಸಂಘರ್ಷ, ಪರಿಸರ ಸಂರಕ್ಷಣೆ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಯಿತು.<br /> <br /> ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆ ಕಾಪಾಡುವುದು, ಕಾವೇರಿ ನದಿಗೆ ಯಾವುದೇ ರೀತಿಯ ಘನ ತ್ಯಾಜ್ಯಗಳು ಸೇರದಂತೆ ಎಚ್ಚರಿಕೆ ವಹಿಸುವುದು, ಆ ನಿಟ್ಟಿನಲ್ಲಿ ಗ್ರಾಮಸ್ಥರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮಾತನಾಡಿ, ಕಾವೇರಿ ನದಿಗೆ ಕಲುಷಿತ ನೀರು ಸೇರದಂತೆ ನದಿಪಾತ್ರದ ಗ್ರಾಮಗಳಲ್ಲಿನ ಚರಂಡಿಯಿಂದ ಹರಿಯುವ ನೀರು ಒಂದು ಕಡೆ ಸೇರಲು ಇಂಗುಗುಂಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.<br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಪ್ರಭು, ನಗರಾಭಿವೃದ್ಧಿ ಕೋಶದ ಅಧಿಕಾರಿ ಬಿಳಿಕೆಂಚಪ್ಪ, ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಅಭಿಯಂತರರಾದ ಎ.ಸಿ.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ಶಿವಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಮುತ್ತಪ್ಪ, ನಗರಸಭೆ ಆಯುಕ್ತ ಎನ್.ಎಂ.ಶಶಿಕುಮಾರ್, ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಕಾಫಿ ಪಲ್ಪಿಂಗ್ ಘಟಕಗಳಿಂದ ಉಂಟಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಕಾಫಿ ಬೆಳೆಗಾರರಲ್ಲಿ ಹಾಗೂ ಪಲ್ಪಿಂಗ್ ಘಟಕಗಳ ಮಾಲೀಕರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</span><br /> <br /> ವಿಭಾಗ ಮಟ್ಟದ ಲೋಕ ಅದಾಲತ್ಗೆ ಮಾಹಿತಿ ನೀಡುವ ಬಗ್ಗೆ ನಗರದ ಕೋಟೆ ಹಳೇ ವಿಧಾನಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.<br /> <br /> ಇದೇ ತಿಂಗಳ 3 ರಂದು (ಬುಧವಾರ) ಮೈಸೂರಿನಲ್ಲಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೈಸೂರಿನ ವಿಭಾಗ ಮಟ್ಟದ ಲೋಕ ಅದಾಲತ್ ಪೂರ್ವಭಾವಿ ಸಭೆ ನಡೆಯಲಿದ್ದು, ಆ ನಿಟ್ಟಿನಲ್ಲಿ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಲಾಯಿತು.<br /> <br /> ಕಾವೇರಿ ನದಿ ಪಾತ್ರ ಸೇರಿದಂತೆ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಸಂಬಂಧಿಸಿದಂತೆ ಇದುವರೆಗೆ ನಿರ್ವಹಣೆ ಮಾಡಲಾಗಿರುವ ಕ್ರಮಗಳು, ಆನೆ-ಮಾನವ ಸಂಘರ್ಷ, ಪರಿಸರ ಸಂರಕ್ಷಣೆ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಯಿತು.<br /> <br /> ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆ ಕಾಪಾಡುವುದು, ಕಾವೇರಿ ನದಿಗೆ ಯಾವುದೇ ರೀತಿಯ ಘನ ತ್ಯಾಜ್ಯಗಳು ಸೇರದಂತೆ ಎಚ್ಚರಿಕೆ ವಹಿಸುವುದು, ಆ ನಿಟ್ಟಿನಲ್ಲಿ ಗ್ರಾಮಸ್ಥರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮಾತನಾಡಿ, ಕಾವೇರಿ ನದಿಗೆ ಕಲುಷಿತ ನೀರು ಸೇರದಂತೆ ನದಿಪಾತ್ರದ ಗ್ರಾಮಗಳಲ್ಲಿನ ಚರಂಡಿಯಿಂದ ಹರಿಯುವ ನೀರು ಒಂದು ಕಡೆ ಸೇರಲು ಇಂಗುಗುಂಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.<br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಪ್ರಭು, ನಗರಾಭಿವೃದ್ಧಿ ಕೋಶದ ಅಧಿಕಾರಿ ಬಿಳಿಕೆಂಚಪ್ಪ, ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಅಭಿಯಂತರರಾದ ಎ.ಸಿ.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ಶಿವಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಮುತ್ತಪ್ಪ, ನಗರಸಭೆ ಆಯುಕ್ತ ಎನ್.ಎಂ.ಶಶಿಕುಮಾರ್, ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>