<p><strong>ಚಿತ್ರದುರ್ಗ:</strong> ತಾಲ್ಲೂಕಿನ ಜಾನಕೊಂಡ ಸಮೀಪದ ಉಪ್ಪನಾಯಕನಹಳ್ಳಿಯಲ್ಲಿ ಗ್ರಾಮಸ್ಥರ ಥಳಿತದಿಂದ ಅಸ್ವಸ್ಥಗೊಂಡು ಆಡುಮಲ್ಲೇಶ್ವರ ಕಿರುಮೃಗಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರಡಿ ಗುರುವಾರ ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ.<br /> <br /> ಮಂಗಳವಾರ ಕರಡಿ ಗ್ರಾಮದಲ್ಲಿ ರೈತರ ಮೇಲೆ ದಾಳಿ ನಡೆಸಿತ್ತು. ರೊಚ್ಚಿಗೆದ್ದ ಗ್ರಾಮಸ್ಥರು, ಬುಧವಾರ ಕರಡಿ ಮತ್ತಿಬ್ಬರ ಮೇಲೆ ಎರಗಿದಾಗ ಹಿಗ್ಗಾಮುಗ್ಗಾ ಥಳಿಸಿದ್ದರು.<br /> <br /> ಬುಧವಾರ ಸಂಜೆ ಜೋಗಿಮಟ್ಟಿಯ ಆಡುಮಲ್ಲೇಶ್ವರ ಕಿರುಮೃಗಾಲಯಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಕರಡಿಯನ್ನು ಕರೆತಂದಾಗಲೇ ಅದು ತೀವ್ರ ಅಸ್ವಸ್ಥವಾಗಿತ್ತು. ಏನೇ ಔಷಧಿ ನೀಡಿದರೂ ಸ್ಪಂದಿಸುತ್ತಿರಲಿಲ್ಲ. ಗುರುವಾರ ಬೆಳಗಿನ ಜಾವ ಮೃತಪಟ್ಟಿದೆ ಎಂದು ಚಿಕಿತ್ಸೆ ನೀಡಿದ ಪಶುವೈದ್ಯ ಡಾ.ಪ್ರಸನ್ನಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಅರಣ್ಯ ಸಿಬ್ಬಂದಿ ಪ್ರದೀಪ್, ಫಾರೆಸ್ಟ್ ಗಾರ್ಡ್ಗಳು, ಕಿರುಮೃಗಾಲಯದ ಉಸ್ತುವಾರಿಗಳ ಸಮ್ಮುಖದಲ್ಲಿ ಡಾ. ಪ್ರಸನ್ನ ಮರಣೋತ್ತರ ಪರೀಕ್ಷೆ ನಡೆಸಿದರು. ಕಿರು ಮೃಗಾಲಯದ ಹಿಂಭಾ ಗದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.<br /> <br /> ಕರಡಿಯ ಮರಣೋತ್ತರ ಪರೀಕ್ಷೆ ವೇಳೆ ಹಿರಿಯ ಅಧಿಕಾರಿಗಳು ಗೈರಾಗಿದ್ದರು. ವಲಯ ಅರಣ್ಯ ಅಧಿಕಾರಿ ಸೇರಿದಂತೆ ಇಲಾಖೆಯ ಯಾವ ಹಿರಿಯ ಸಿಬ್ಬಂದಿಯೂ ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ತಾಲ್ಲೂಕಿನ ಜಾನಕೊಂಡ ಸಮೀಪದ ಉಪ್ಪನಾಯಕನಹಳ್ಳಿಯಲ್ಲಿ ಗ್ರಾಮಸ್ಥರ ಥಳಿತದಿಂದ ಅಸ್ವಸ್ಥಗೊಂಡು ಆಡುಮಲ್ಲೇಶ್ವರ ಕಿರುಮೃಗಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರಡಿ ಗುರುವಾರ ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ.<br /> <br /> ಮಂಗಳವಾರ ಕರಡಿ ಗ್ರಾಮದಲ್ಲಿ ರೈತರ ಮೇಲೆ ದಾಳಿ ನಡೆಸಿತ್ತು. ರೊಚ್ಚಿಗೆದ್ದ ಗ್ರಾಮಸ್ಥರು, ಬುಧವಾರ ಕರಡಿ ಮತ್ತಿಬ್ಬರ ಮೇಲೆ ಎರಗಿದಾಗ ಹಿಗ್ಗಾಮುಗ್ಗಾ ಥಳಿಸಿದ್ದರು.<br /> <br /> ಬುಧವಾರ ಸಂಜೆ ಜೋಗಿಮಟ್ಟಿಯ ಆಡುಮಲ್ಲೇಶ್ವರ ಕಿರುಮೃಗಾಲಯಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಕರಡಿಯನ್ನು ಕರೆತಂದಾಗಲೇ ಅದು ತೀವ್ರ ಅಸ್ವಸ್ಥವಾಗಿತ್ತು. ಏನೇ ಔಷಧಿ ನೀಡಿದರೂ ಸ್ಪಂದಿಸುತ್ತಿರಲಿಲ್ಲ. ಗುರುವಾರ ಬೆಳಗಿನ ಜಾವ ಮೃತಪಟ್ಟಿದೆ ಎಂದು ಚಿಕಿತ್ಸೆ ನೀಡಿದ ಪಶುವೈದ್ಯ ಡಾ.ಪ್ರಸನ್ನಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಅರಣ್ಯ ಸಿಬ್ಬಂದಿ ಪ್ರದೀಪ್, ಫಾರೆಸ್ಟ್ ಗಾರ್ಡ್ಗಳು, ಕಿರುಮೃಗಾಲಯದ ಉಸ್ತುವಾರಿಗಳ ಸಮ್ಮುಖದಲ್ಲಿ ಡಾ. ಪ್ರಸನ್ನ ಮರಣೋತ್ತರ ಪರೀಕ್ಷೆ ನಡೆಸಿದರು. ಕಿರು ಮೃಗಾಲಯದ ಹಿಂಭಾ ಗದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.<br /> <br /> ಕರಡಿಯ ಮರಣೋತ್ತರ ಪರೀಕ್ಷೆ ವೇಳೆ ಹಿರಿಯ ಅಧಿಕಾರಿಗಳು ಗೈರಾಗಿದ್ದರು. ವಲಯ ಅರಣ್ಯ ಅಧಿಕಾರಿ ಸೇರಿದಂತೆ ಇಲಾಖೆಯ ಯಾವ ಹಿರಿಯ ಸಿಬ್ಬಂದಿಯೂ ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>