<p><strong>ನವದೆಹಲಿ: </strong>ಅಭಿವೃದ್ಧಿ ಮತ್ತು ಆಡಳಿತವೇ ಈ ಬಾರಿಯ ಚುನಾವಣೆಯ ಮುಖ್ಯ ವಿಷಯಗಳು ಎಂದು ಆರ್ಎಸ್ಎಸ್ ಮುಖವಾಣಿ ‘ಆರ್ಗನೈಸರ್’ ಪತ್ರಿಕೆ ನಡೆಸಿರುವ ಜನಮತ ಸಮೀಕ್ಷೆ ಹೇಳಿದೆ. ಸಮೀಕ್ಷೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಷಯವನ್ನು ಪ್ರಸ್ತಾಪಿಸಿಯೇ ಇಲ್ಲ.<br /> <br /> ಪ್ರಧಾನಿ ಹುದ್ದೆಗೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರೇ ಮತದಾರರ ಆಯ್ಕೆ. ಆದರೆ ದಕ್ಷಿಣ ಭಾರತದಲ್ಲಿ ಮೋದಿ ಅವರಿಗಿಂತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಂದಿದ್ದಾರೆ ಎಂದು ‘ಆರ್ಗನೈಸರ್’ ವಾರಪತ್ರಿಕೆಯ ಇತ್ತೀಚಿನ ಸಂಚಿಕೆಯಲ್ಲಿ ಹೇಳಲಾಗಿದೆ.<br /> <br /> ಆಸಕ್ತಿಕರ ವಿಷಯವೆಂದರೆ ಚುನಾವಣೆಯ ಪ್ರಮುಖ ಐದು ವಿಷಯಗಳಲ್ಲಿ ಭ್ರಷ್ಟಾಚಾರ ಸೇರಿಲ್ಲ. ಮತದಾರರು ಸೂಚಿಸಿದ ಹತ್ತು ವಿಷಯಗಳಲ್ಲಿ ಭ್ರಷ್ಟಾಚಾರವೂ ಸೇರಿದೆ.<br /> <br /> ದೇಶದ ಎಲ್ಲ ಭಾಗಗಳ 380 ಲೋಕಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ‘ಆರ್ಗನೈಸರ್’ ಮತ್ತು ಲೋಕ ಸಾರಥಿ ಪ್ರತಿಷ್ಠಾನ ಜಂಟಿಯಾಗಿ ಸಮೀಕ್ಷೆ ನಡೆಸಿವೆ. 1.14 ಲಕ್ಷ ಮತದಾರರ ಅಭಿಪ್ರಾಯ ಸಂಗ್ರಹಿಸಿ ಈ ಅಭಿಪ್ರಾಯಕ್ಕೆ ಬರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಭಿವೃದ್ಧಿ ಮತ್ತು ಆಡಳಿತವೇ ಈ ಬಾರಿಯ ಚುನಾವಣೆಯ ಮುಖ್ಯ ವಿಷಯಗಳು ಎಂದು ಆರ್ಎಸ್ಎಸ್ ಮುಖವಾಣಿ ‘ಆರ್ಗನೈಸರ್’ ಪತ್ರಿಕೆ ನಡೆಸಿರುವ ಜನಮತ ಸಮೀಕ್ಷೆ ಹೇಳಿದೆ. ಸಮೀಕ್ಷೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಷಯವನ್ನು ಪ್ರಸ್ತಾಪಿಸಿಯೇ ಇಲ್ಲ.<br /> <br /> ಪ್ರಧಾನಿ ಹುದ್ದೆಗೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರೇ ಮತದಾರರ ಆಯ್ಕೆ. ಆದರೆ ದಕ್ಷಿಣ ಭಾರತದಲ್ಲಿ ಮೋದಿ ಅವರಿಗಿಂತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಂದಿದ್ದಾರೆ ಎಂದು ‘ಆರ್ಗನೈಸರ್’ ವಾರಪತ್ರಿಕೆಯ ಇತ್ತೀಚಿನ ಸಂಚಿಕೆಯಲ್ಲಿ ಹೇಳಲಾಗಿದೆ.<br /> <br /> ಆಸಕ್ತಿಕರ ವಿಷಯವೆಂದರೆ ಚುನಾವಣೆಯ ಪ್ರಮುಖ ಐದು ವಿಷಯಗಳಲ್ಲಿ ಭ್ರಷ್ಟಾಚಾರ ಸೇರಿಲ್ಲ. ಮತದಾರರು ಸೂಚಿಸಿದ ಹತ್ತು ವಿಷಯಗಳಲ್ಲಿ ಭ್ರಷ್ಟಾಚಾರವೂ ಸೇರಿದೆ.<br /> <br /> ದೇಶದ ಎಲ್ಲ ಭಾಗಗಳ 380 ಲೋಕಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ‘ಆರ್ಗನೈಸರ್’ ಮತ್ತು ಲೋಕ ಸಾರಥಿ ಪ್ರತಿಷ್ಠಾನ ಜಂಟಿಯಾಗಿ ಸಮೀಕ್ಷೆ ನಡೆಸಿವೆ. 1.14 ಲಕ್ಷ ಮತದಾರರ ಅಭಿಪ್ರಾಯ ಸಂಗ್ರಹಿಸಿ ಈ ಅಭಿಪ್ರಾಯಕ್ಕೆ ಬರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>