<p><strong>ಮಂಗಳೂರು:</strong> ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ ವಕಾಲತ್ ನಿಯಂತ್ರಣ ಕಾಯಿದೆ ವಿರೋಧಿಸಿ ರಾಜ್ಯಾದ್ಯಂತ ನೀಡಿದ ಕರೆಯಂತೆ ಗುರುವಾರ ನಗರ ಮತ್ತು ಜಿಲ್ಲೆಯಲ್ಲಿ ವಕೀಲರು ಕೆಂಪು ಪಟ್ಟಿ ಕಟ್ಟಿಕೊಂಡು ನ್ಯಾಯಾಲಯ ಕಲಾಪದಲ್ಲಿ ಭಾಗವಹಿಸಿದರು.ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರಿಗೆ ಈ ಸಂಬಂಧ ಪತ್ರ ಕಳುಹಿಸಿದ್ದೇವೆ ಎಂದು ದ.ಕ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ಚೆಂಗಪ್ಪ ತಿಳಿಸಿದರು.<br /> <br /> ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೇರಿದ ವಕೀಲರು, ಕಾಯ್ದೆಯನ್ನು ವಿರೋಧಿಸುವ ಘೋಷಣೆಗಳನ್ನು ಒಳಗೊಂಡ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಇತರ ನ್ಯಾಯಾಲಯಗಳಲ್ಲೂ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು.<br /> <br /> ಈಗಿರುವ ಕಾನೂನಿನಂತೆ ವಕೀಲರ ಮೇಲಿನ ಸಂಪೂರ್ಣ ನಿಯಂತ್ರಣ ಹಾಗೂ ಶಿಸ್ತು ಕ್ರಮ ಜರುಗಿಸುವ ಅಧಿಕಾರ ವಕೀಲರಿಂದಲೇ ಚುನಾಯಿತರಾದ ಸದಸ್ಯರನ್ನು ಒಳಗೊಂಡ ವಕೀಲರ ಪರಿಷತ್ಗೆ ಮಾತ್ರ ಇರುತ್ತದೆ. ಅಂತಹ ಯಾವುದೇ ಅಧಿಕಾರ ನ್ಯಾಯಾಲಯಕ್ಕಿಲ್ಲ ಎನ್ನುವುದು ವಕೀಲರ ಸಂಘಟನೆಗಳ ವಾದವಾಗಿದೆ. <br /> <br /> ನೂತನ ಕಾಯ್ದೆಯಂತೆ ವಕೀಲರ ವಿರುದ್ಧ ದೂರುಗಳು ಕೇಳಿಬಂದರೆ, ವಿಚಾರಣೆ ನಡೆಸಿ ಶಿಕ್ಷಿಸುವ ಅಧಿಕಾರ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಮಂಡಳಿಗೆ ವಹಿಸಲಾಗಿದೆ. ವಕೀಲರ ಪರಿಷತ್ ಅಧಿಕಾರವನ್ನು ಮೊಟಕುಗೊಳಿಸುವುದು ಈ ಕಾಯ್ದೆಯ ಹಿಂದಿನ ಉದ್ದೇಶವಾಗಿದೆ ಎಂಬುದು ರಾಜ್ಯ ವಕೀಲರ ಪರಿಷತ್ ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ ವಕಾಲತ್ ನಿಯಂತ್ರಣ ಕಾಯಿದೆ ವಿರೋಧಿಸಿ ರಾಜ್ಯಾದ್ಯಂತ ನೀಡಿದ ಕರೆಯಂತೆ ಗುರುವಾರ ನಗರ ಮತ್ತು ಜಿಲ್ಲೆಯಲ್ಲಿ ವಕೀಲರು ಕೆಂಪು ಪಟ್ಟಿ ಕಟ್ಟಿಕೊಂಡು ನ್ಯಾಯಾಲಯ ಕಲಾಪದಲ್ಲಿ ಭಾಗವಹಿಸಿದರು.ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರಿಗೆ ಈ ಸಂಬಂಧ ಪತ್ರ ಕಳುಹಿಸಿದ್ದೇವೆ ಎಂದು ದ.ಕ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ಚೆಂಗಪ್ಪ ತಿಳಿಸಿದರು.<br /> <br /> ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೇರಿದ ವಕೀಲರು, ಕಾಯ್ದೆಯನ್ನು ವಿರೋಧಿಸುವ ಘೋಷಣೆಗಳನ್ನು ಒಳಗೊಂಡ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಇತರ ನ್ಯಾಯಾಲಯಗಳಲ್ಲೂ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು.<br /> <br /> ಈಗಿರುವ ಕಾನೂನಿನಂತೆ ವಕೀಲರ ಮೇಲಿನ ಸಂಪೂರ್ಣ ನಿಯಂತ್ರಣ ಹಾಗೂ ಶಿಸ್ತು ಕ್ರಮ ಜರುಗಿಸುವ ಅಧಿಕಾರ ವಕೀಲರಿಂದಲೇ ಚುನಾಯಿತರಾದ ಸದಸ್ಯರನ್ನು ಒಳಗೊಂಡ ವಕೀಲರ ಪರಿಷತ್ಗೆ ಮಾತ್ರ ಇರುತ್ತದೆ. ಅಂತಹ ಯಾವುದೇ ಅಧಿಕಾರ ನ್ಯಾಯಾಲಯಕ್ಕಿಲ್ಲ ಎನ್ನುವುದು ವಕೀಲರ ಸಂಘಟನೆಗಳ ವಾದವಾಗಿದೆ. <br /> <br /> ನೂತನ ಕಾಯ್ದೆಯಂತೆ ವಕೀಲರ ವಿರುದ್ಧ ದೂರುಗಳು ಕೇಳಿಬಂದರೆ, ವಿಚಾರಣೆ ನಡೆಸಿ ಶಿಕ್ಷಿಸುವ ಅಧಿಕಾರ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಮಂಡಳಿಗೆ ವಹಿಸಲಾಗಿದೆ. ವಕೀಲರ ಪರಿಷತ್ ಅಧಿಕಾರವನ್ನು ಮೊಟಕುಗೊಳಿಸುವುದು ಈ ಕಾಯ್ದೆಯ ಹಿಂದಿನ ಉದ್ದೇಶವಾಗಿದೆ ಎಂಬುದು ರಾಜ್ಯ ವಕೀಲರ ಪರಿಷತ್ ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>