<p><strong>ಚಿಕ್ಕಮಗಳೂರು</strong>: ದತ್ತಪೀಠಮಾರ್ಗದ ಕವಿಕಲ್ಗಂಡಿ ಬಳಿ ಭಾನುವಾರ ರಾತ್ರಿ ದೊಡ್ಡ ಬಂಡೆಗಳು ಕುಸಿದು ರಸ್ತೆಗೆ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು.<br /> <br /> ಗಿರಿಯ ಸುತ್ತಮುತ್ತ ನಿರಂತರ ಮಳೆ ಬೀಳುತ್ತಿರುವುದರಿಂದ ರಸ್ತೆ ಮೇಲೆ ಕಲ್ಲು-ಬಂಡೆಗಳು ಕುಸಿದಿದ್ದು, ಭಾನುವಾರ ಸಂಜೆ ಆ ಮಾರ್ಗದಲ್ಲಿ ತೆರಳುತ್ತಿದ್ದ ಬಸ್ ಮುಂದೆ ಸಾಗಲಾರದೆ, ಪ್ರಯಾಣಿಕರು ಮನೆ ತಲುಪಲು ಪರದಾಡಬೇಕಾಯಿತು. ಸ್ಥಳಕ್ಕೆ ರಾತ್ರಿ ಜೀಪ್ ತರಿಸಿಕೊಂಡು ಕೆಲವರು ಮನೆ ಸೇರಿದರು.<br /> <br /> ಸೋಮವಾರ ಬೆಳಿಗ್ಗೆ ಗಿರಿಗೆ ತೆರಳುತ್ತಿದ್ದ ಪ್ರವಾಸಿಗರು ಮುಂದೆ ಸಾಗಲಾರದೆ, ಅಲ್ಲೆ ನಿಂತು ಕಾಲ ಕಳೆಯಬೇಕಾಯಿತು. ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಲೋಕೇಶ್ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಜೆಸಿಬಿ ಯಂತ್ರದಿಂದ ಕಲ್ಲುಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡರು.<br /> <br /> ಬೆಳಿಗ್ಗೆ ಸುಮಾರು 9.30ಕ್ಕೆ ಬಂಡೆಗಳನ್ನು ತೆರವುಗೊಳಿಸುವ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.<br /> ತೆರವು ಕಾರ್ಯ ಮಂಗಳವಾರ ಪೂರ್ಣಗೊಳ್ಳುವ ನಿರೀಕ್ಷೆ ಇದೆ.ಕಳೆದ ವರ್ಷವೂ ಮಳೆಗಾಲದಲ್ಲಿ ಕವಿಕಲ್ಗಂಡಿ ಬಳಿ ದೊಡ್ಡಗಾತ್ರದ ಬಂಡೆ ಕುಸಿದು ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ದತ್ತಪೀಠಮಾರ್ಗದ ಕವಿಕಲ್ಗಂಡಿ ಬಳಿ ಭಾನುವಾರ ರಾತ್ರಿ ದೊಡ್ಡ ಬಂಡೆಗಳು ಕುಸಿದು ರಸ್ತೆಗೆ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು.<br /> <br /> ಗಿರಿಯ ಸುತ್ತಮುತ್ತ ನಿರಂತರ ಮಳೆ ಬೀಳುತ್ತಿರುವುದರಿಂದ ರಸ್ತೆ ಮೇಲೆ ಕಲ್ಲು-ಬಂಡೆಗಳು ಕುಸಿದಿದ್ದು, ಭಾನುವಾರ ಸಂಜೆ ಆ ಮಾರ್ಗದಲ್ಲಿ ತೆರಳುತ್ತಿದ್ದ ಬಸ್ ಮುಂದೆ ಸಾಗಲಾರದೆ, ಪ್ರಯಾಣಿಕರು ಮನೆ ತಲುಪಲು ಪರದಾಡಬೇಕಾಯಿತು. ಸ್ಥಳಕ್ಕೆ ರಾತ್ರಿ ಜೀಪ್ ತರಿಸಿಕೊಂಡು ಕೆಲವರು ಮನೆ ಸೇರಿದರು.<br /> <br /> ಸೋಮವಾರ ಬೆಳಿಗ್ಗೆ ಗಿರಿಗೆ ತೆರಳುತ್ತಿದ್ದ ಪ್ರವಾಸಿಗರು ಮುಂದೆ ಸಾಗಲಾರದೆ, ಅಲ್ಲೆ ನಿಂತು ಕಾಲ ಕಳೆಯಬೇಕಾಯಿತು. ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಲೋಕೇಶ್ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಜೆಸಿಬಿ ಯಂತ್ರದಿಂದ ಕಲ್ಲುಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡರು.<br /> <br /> ಬೆಳಿಗ್ಗೆ ಸುಮಾರು 9.30ಕ್ಕೆ ಬಂಡೆಗಳನ್ನು ತೆರವುಗೊಳಿಸುವ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.<br /> ತೆರವು ಕಾರ್ಯ ಮಂಗಳವಾರ ಪೂರ್ಣಗೊಳ್ಳುವ ನಿರೀಕ್ಷೆ ಇದೆ.ಕಳೆದ ವರ್ಷವೂ ಮಳೆಗಾಲದಲ್ಲಿ ಕವಿಕಲ್ಗಂಡಿ ಬಳಿ ದೊಡ್ಡಗಾತ್ರದ ಬಂಡೆ ಕುಸಿದು ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>