<p><strong>ಮಹದೇವಪುರ: `</strong>ಸಮಾಜದಲ್ಲಿ ಅಸ್ಪೃಶ್ಯರು ಸ್ವಾಭಿಮಾನಿಗಳಾಗಿ ಬದುಕಬೇಕೆಂಬ ನೀತಿಯನ್ನು ಸಾರಿ ಹೇಳಿದ ಅಂಬೇಡ್ಕರ್ ಅವರ ಮಾರ್ಗವನ್ನು ದಲಿತರು ಚಾಚೂತಪ್ಪದೆ ಅನುಸರಿಸಬೇಕು~ ಎಂದು ಬಿಬಿಎಂಪಿ ಸದಸ್ಯ ಎಸ್.ಉದಯಕುಮಾರ್ ಕರೆ ನೀಡಿದರು.<br /> <br /> ಕ್ಷೇತ್ರದ ವರ್ತೂರು ವಾರ್ಡ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಅವರ 121ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ದಲಿತರ ಮೇಲೆ ಆಗಾಗ್ಗೆ ದಬ್ಬಾಳಿಕೆ ನಡೆಯುತ್ತಲೇ ಇವೆ. ಈ ದಬ್ಬಾಳಿಕೆ, ದೌರ್ಜನ್ಯವನ್ನು ತಡೆಯುವುದಕ್ಕಾಗಿ ಶತ-ಶತಮಾನಗಳಿಂದ ಹೋರಾಟ, ಪ್ರತಿಭಟನೆಗಳು ನಡೆಯುತ್ತಲೇ ಇವೆ. ಆದರೂ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಅಸಮಾನತೆಯೇ ಮೂಲ ಕಾರಣ~ ಎಂದು ವಿಷಾದಿಸಿದರು.<br /> <br /> `ಜಾತಿಯ ಪಿಡುಗು ಸಂಪೂರ್ಣವಾಗಿ ತೊಲಗಿದಲ್ಲಿ ಮಾತ್ರ ದಲಿತರಿಗೆ ಸೂಕ್ತ ನ್ಯಾಯ ದೊರಕಲಿದೆ. ಸ್ವಸಾಮರ್ಥ್ಯದಿಂದ ಮುನ್ನಡೆಯಲು ದಲಿತರು ಮನಸ್ಸು ಮಾಡಬೇಕು. ಇತ್ತೀಚಿನ ವರ್ಷಗಳಲ್ಲಿಯೂ ದಲಿತರು ಶಿಕ್ಷಣ ಕ್ಷೇತ್ರದಿಂದ ಸಾಕಷ್ಟು ದೂರ ಉಳಿಯುತ್ತಿರುವುದು ವಿಷಾದನೀಯ~ ಎಂದು ನೊಂದು ನುಡಿದರು.<br /> <br /> ವರ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ಸತೀಶಕುಮಾರ್, ಬೆಂಗಳೂರು ಪೂರ್ವ ತಾ.ಪಂ. ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣಪ್ಪ, ಹಾಲಿ ಸದಸ್ಯ ಶ್ರೀನಿವಾಸರೆಡ್ಡಿ, ವಿ.ಟಿ.ಬಿ. ಬಾಬುರೆಡ್ಡಿ, ವೇಣುಗೋಪಾಲ್ರೆಡ್ಡಿ, ನಾಗಪ್ಪ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇವಪುರ: `</strong>ಸಮಾಜದಲ್ಲಿ ಅಸ್ಪೃಶ್ಯರು ಸ್ವಾಭಿಮಾನಿಗಳಾಗಿ ಬದುಕಬೇಕೆಂಬ ನೀತಿಯನ್ನು ಸಾರಿ ಹೇಳಿದ ಅಂಬೇಡ್ಕರ್ ಅವರ ಮಾರ್ಗವನ್ನು ದಲಿತರು ಚಾಚೂತಪ್ಪದೆ ಅನುಸರಿಸಬೇಕು~ ಎಂದು ಬಿಬಿಎಂಪಿ ಸದಸ್ಯ ಎಸ್.ಉದಯಕುಮಾರ್ ಕರೆ ನೀಡಿದರು.<br /> <br /> ಕ್ಷೇತ್ರದ ವರ್ತೂರು ವಾರ್ಡ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಅವರ 121ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ದಲಿತರ ಮೇಲೆ ಆಗಾಗ್ಗೆ ದಬ್ಬಾಳಿಕೆ ನಡೆಯುತ್ತಲೇ ಇವೆ. ಈ ದಬ್ಬಾಳಿಕೆ, ದೌರ್ಜನ್ಯವನ್ನು ತಡೆಯುವುದಕ್ಕಾಗಿ ಶತ-ಶತಮಾನಗಳಿಂದ ಹೋರಾಟ, ಪ್ರತಿಭಟನೆಗಳು ನಡೆಯುತ್ತಲೇ ಇವೆ. ಆದರೂ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಅಸಮಾನತೆಯೇ ಮೂಲ ಕಾರಣ~ ಎಂದು ವಿಷಾದಿಸಿದರು.<br /> <br /> `ಜಾತಿಯ ಪಿಡುಗು ಸಂಪೂರ್ಣವಾಗಿ ತೊಲಗಿದಲ್ಲಿ ಮಾತ್ರ ದಲಿತರಿಗೆ ಸೂಕ್ತ ನ್ಯಾಯ ದೊರಕಲಿದೆ. ಸ್ವಸಾಮರ್ಥ್ಯದಿಂದ ಮುನ್ನಡೆಯಲು ದಲಿತರು ಮನಸ್ಸು ಮಾಡಬೇಕು. ಇತ್ತೀಚಿನ ವರ್ಷಗಳಲ್ಲಿಯೂ ದಲಿತರು ಶಿಕ್ಷಣ ಕ್ಷೇತ್ರದಿಂದ ಸಾಕಷ್ಟು ದೂರ ಉಳಿಯುತ್ತಿರುವುದು ವಿಷಾದನೀಯ~ ಎಂದು ನೊಂದು ನುಡಿದರು.<br /> <br /> ವರ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ಸತೀಶಕುಮಾರ್, ಬೆಂಗಳೂರು ಪೂರ್ವ ತಾ.ಪಂ. ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣಪ್ಪ, ಹಾಲಿ ಸದಸ್ಯ ಶ್ರೀನಿವಾಸರೆಡ್ಡಿ, ವಿ.ಟಿ.ಬಿ. ಬಾಬುರೆಡ್ಡಿ, ವೇಣುಗೋಪಾಲ್ರೆಡ್ಡಿ, ನಾಗಪ್ಪ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>