<p>ನಟ ದರ್ಶನ್ ಹೆಂಡತಿಗೆ ಹೊಡೆದ ಪ್ರಕರಣದ ಹಿನ್ನೆಲೆಯಲ್ಲಿ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಹೆಂಡತಿಗೆ ಹೊಡೆಯುವುದು ಶೌರ್ಯವಲ್ಲ ಕ್ರೌರ್ಯ. ನಟ ಅಂಬರೀಷ್, ` ಗಂಡ ಹೆಂಡತಿಗೆ ಹೊಡೆಯುವುದು, ಮಗ ತಾಯಿಗೆ ಹೊಡೆಯುವುದು ಕುಟುಂಬದಲ್ಲಿ ಸರ್ವೇ ಸಾಮಾನ್ಯ~ ಎಂದಿರುವುದು ಸರಿಯಲ್ಲ.<br /> <br /> ಮಕ್ಕಳು ದಾರಿ ತಪ್ಪಿದಾಗ ತಂದೆ ತಾಯಿ ಗದರಿಸುತ್ತಾರೆ, ಅದಕ್ಕೂ ಸರಿಹೋಗದಿದ್ದರೆ ಅತ್ಯಂತ ವಿಷಾದದಿಂದ ಬಡಿಯುತ್ತಾರೆ. ಬಡಿದು, ಬಡಿದದ್ದಕ್ಕಾಗಿ ವಿಷಾದದಿಂದ ಅಳುತ್ತಾರೆ. ಮಕ್ಕಳು ತಾಯಿಯನ್ನು ಬಡಿಯುವುದನ್ನು ಸಮರ್ಥಿಸುವುದಂತೂ ತೀರಾ ಅನ್ಯಾಯದ ವಿಷಯ. ಪ್ರೀತಿಯಿಂದ ಗೆಲ್ಲಲಾಗದವರು ಕ್ರೌರ್ಯಕ್ಕಿಳಿಯುತ್ತಾರೆ.<br /> <br /> ಭಿನ್ನಮತವನ್ನು ಸಹಿಸುವ, ಚರ್ಚಿಸುವ ಮನೋಧರ್ಮ ಮನೆ ಮನೆಗಳಲ್ಲಿ ಬೆಳೆದು ಬರಬೇಕು. ಮನೆಗಳು ಪ್ರಜಾಪ್ರಭುತ್ವದ ತಾಣಗಳಾಗಬೇಕು. ಅಪ್ಪ ಆಳುವ ಪಕ್ಷಕ್ಕೆ ಸೇರಿದ್ದರೆ, ಅಮ್ಮ, ಮಕ್ಕಳು ಕೇಳುವ ಪಕ್ಷಕ್ಕೆ ಸೇರಿರುತ್ತಾರೆ. ಅಪ್ಪನನ್ನು ಪ್ರಶ್ನಿಸದಿದ್ದರೆ ಆತ ಸರ್ವಾಧಿಕಾರಿಯಾಗುತ್ತಾನೆ.<br /> <br /> ದೊಡ್ಡ ಕುಟುಂಬಗಳ ಜನ ಹೊಂದಾಣಿಕೆಯಿಂದ ಬದುಕುತ್ತಿದ್ದರು. ಗಂಡ, ಹೆಂಡತಿ, ಮಕ್ಕಳ ಸಣ್ಣ ಕುಟುಂಬದ ಜನ ಗುದ್ದಾಡಿ ಹಾಳಾಗುತ್ತಿರುವುದು ಭೋಗಲಾಲಸೆಯಿಂದ. ದರ್ಶನ್ನ ತೆರೆಯ ಹಿಂದಿನ ಬದುಕು ಸರಿಯಾಗಬೇಕು. <br /> <br /> ದರ್ಶನ್ ಸಾರ್ವಜನಿಕವಾಗಿ ಪತ್ನಿಯ ಕ್ಷಮೆ ಕೋರುವುದು ಆತನ ಮನಸ್ಸಿನ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಟ ದರ್ಶನ್ ಹೆಂಡತಿಗೆ ಹೊಡೆದ ಪ್ರಕರಣದ ಹಿನ್ನೆಲೆಯಲ್ಲಿ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಹೆಂಡತಿಗೆ ಹೊಡೆಯುವುದು ಶೌರ್ಯವಲ್ಲ ಕ್ರೌರ್ಯ. ನಟ ಅಂಬರೀಷ್, ` ಗಂಡ ಹೆಂಡತಿಗೆ ಹೊಡೆಯುವುದು, ಮಗ ತಾಯಿಗೆ ಹೊಡೆಯುವುದು ಕುಟುಂಬದಲ್ಲಿ ಸರ್ವೇ ಸಾಮಾನ್ಯ~ ಎಂದಿರುವುದು ಸರಿಯಲ್ಲ.<br /> <br /> ಮಕ್ಕಳು ದಾರಿ ತಪ್ಪಿದಾಗ ತಂದೆ ತಾಯಿ ಗದರಿಸುತ್ತಾರೆ, ಅದಕ್ಕೂ ಸರಿಹೋಗದಿದ್ದರೆ ಅತ್ಯಂತ ವಿಷಾದದಿಂದ ಬಡಿಯುತ್ತಾರೆ. ಬಡಿದು, ಬಡಿದದ್ದಕ್ಕಾಗಿ ವಿಷಾದದಿಂದ ಅಳುತ್ತಾರೆ. ಮಕ್ಕಳು ತಾಯಿಯನ್ನು ಬಡಿಯುವುದನ್ನು ಸಮರ್ಥಿಸುವುದಂತೂ ತೀರಾ ಅನ್ಯಾಯದ ವಿಷಯ. ಪ್ರೀತಿಯಿಂದ ಗೆಲ್ಲಲಾಗದವರು ಕ್ರೌರ್ಯಕ್ಕಿಳಿಯುತ್ತಾರೆ.<br /> <br /> ಭಿನ್ನಮತವನ್ನು ಸಹಿಸುವ, ಚರ್ಚಿಸುವ ಮನೋಧರ್ಮ ಮನೆ ಮನೆಗಳಲ್ಲಿ ಬೆಳೆದು ಬರಬೇಕು. ಮನೆಗಳು ಪ್ರಜಾಪ್ರಭುತ್ವದ ತಾಣಗಳಾಗಬೇಕು. ಅಪ್ಪ ಆಳುವ ಪಕ್ಷಕ್ಕೆ ಸೇರಿದ್ದರೆ, ಅಮ್ಮ, ಮಕ್ಕಳು ಕೇಳುವ ಪಕ್ಷಕ್ಕೆ ಸೇರಿರುತ್ತಾರೆ. ಅಪ್ಪನನ್ನು ಪ್ರಶ್ನಿಸದಿದ್ದರೆ ಆತ ಸರ್ವಾಧಿಕಾರಿಯಾಗುತ್ತಾನೆ.<br /> <br /> ದೊಡ್ಡ ಕುಟುಂಬಗಳ ಜನ ಹೊಂದಾಣಿಕೆಯಿಂದ ಬದುಕುತ್ತಿದ್ದರು. ಗಂಡ, ಹೆಂಡತಿ, ಮಕ್ಕಳ ಸಣ್ಣ ಕುಟುಂಬದ ಜನ ಗುದ್ದಾಡಿ ಹಾಳಾಗುತ್ತಿರುವುದು ಭೋಗಲಾಲಸೆಯಿಂದ. ದರ್ಶನ್ನ ತೆರೆಯ ಹಿಂದಿನ ಬದುಕು ಸರಿಯಾಗಬೇಕು. <br /> <br /> ದರ್ಶನ್ ಸಾರ್ವಜನಿಕವಾಗಿ ಪತ್ನಿಯ ಕ್ಷಮೆ ಕೋರುವುದು ಆತನ ಮನಸ್ಸಿನ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>