<p>ಬೆಂಗಳೂರು: ಧಾರವಾಡ ಜಿಲ್ಲೆ ನಾಯಕನೂರು ಗ್ರಾಮದಲ್ಲಿ ಮತ್ತು ಮಂಡ್ಯ ಜಿಲ್ಲೆಯ ಕಸುವನಹಳ್ಳಿಯಲ್ಲಿ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಸಮತಾವಾದ) ಸದಸ್ಯರು ನಗರದ ಪುರಭವನದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> `ಸ್ವಾತಂತ್ರ್ಯ ಬಂದು 64 ವರ್ಷಗಳೇ ಕಳೆದಿದ್ದರೂ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ದೌರ್ಜನ್ಯ ತಡೆಯುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಸರ್ಕಾರಗಳಿಗೆ ದಲಿತ ಪರ ಕಾಳಜಿಯೇ ಇಲ್ಲ~ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಕೆ.ತಮ್ಮಯ್ಯ ದೂರಿದರು.<br /> <br /> ದಲಿತರ ಮೇಲೆ ಹಲ್ಲೆ ನಡೆಸಿ ಬಹಿಷ್ಕಾರ ಹಾಕಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವ ವಿಚಾರ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದೆ ದಲಿತರ ಹಿತರಕ್ಷಣೆಯನ್ನು ನಿರ್ಲಕ್ಷಿಸುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದಲೇ ದಲಿತರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.<br /> <br /> ಘಟನೆ ಸಂಬಂಧ ಶೀಘ್ರವೇ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸದಿದ್ದರೆ ಮುಖ್ಯಮಂತ್ರಿಗಳ ನಿವಾಸದ ಎದುರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು. <br /> <br /> ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕರಾದ ಎಚ್.ಮಾರಪ್ಪ, ಗುರುಲಿಂಗಯ್ಯ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಧಾರವಾಡ ಜಿಲ್ಲೆ ನಾಯಕನೂರು ಗ್ರಾಮದಲ್ಲಿ ಮತ್ತು ಮಂಡ್ಯ ಜಿಲ್ಲೆಯ ಕಸುವನಹಳ್ಳಿಯಲ್ಲಿ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಸಮತಾವಾದ) ಸದಸ್ಯರು ನಗರದ ಪುರಭವನದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> `ಸ್ವಾತಂತ್ರ್ಯ ಬಂದು 64 ವರ್ಷಗಳೇ ಕಳೆದಿದ್ದರೂ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ದೌರ್ಜನ್ಯ ತಡೆಯುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಸರ್ಕಾರಗಳಿಗೆ ದಲಿತ ಪರ ಕಾಳಜಿಯೇ ಇಲ್ಲ~ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಕೆ.ತಮ್ಮಯ್ಯ ದೂರಿದರು.<br /> <br /> ದಲಿತರ ಮೇಲೆ ಹಲ್ಲೆ ನಡೆಸಿ ಬಹಿಷ್ಕಾರ ಹಾಕಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವ ವಿಚಾರ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದೆ ದಲಿತರ ಹಿತರಕ್ಷಣೆಯನ್ನು ನಿರ್ಲಕ್ಷಿಸುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದಲೇ ದಲಿತರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.<br /> <br /> ಘಟನೆ ಸಂಬಂಧ ಶೀಘ್ರವೇ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸದಿದ್ದರೆ ಮುಖ್ಯಮಂತ್ರಿಗಳ ನಿವಾಸದ ಎದುರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು. <br /> <br /> ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕರಾದ ಎಚ್.ಮಾರಪ್ಪ, ಗುರುಲಿಂಗಯ್ಯ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>