<p><strong>ಬೆಂಗಳೂರು:</strong> `ದಲಿತರು ಸಕ್ರಿಯವಾಗಿ ರಾಜಕಾರಣದಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಜಕೀಯ ಅಧಿಕಾರ ಪಡೆಯಬೇಕು. ಆಗ ದಲಿತರ ಅಭಿವೃದ್ಧಿ ಸಾಧ್ಯ ಎಂದು' ಲೋಕ ಜನಶಕ್ತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಪ್ರಭಾವತಿ ಹೇಳಿದರು.<br /> <br /> ಕರ್ನಾಟಕ ದಲಿತ ಸಂಘರ್ಷ ಸಮಿತಿಯು ದಲಿತ ಚಳವಳಿಗಾರ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನದ ಅಂಗವಾಗಿ `ದಲಿತರು ಮತ್ತು ರಾಜಕಾರಣ ಹಾಗೂ ಮುಂದಿನ ಸವಾಲುಗಳು' ವಿಷಯ ಕುರಿತು ಭಾನುವಾರ ನಗರದಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದಲಿತರು ರಾಜಕೀಯ ಅಧಿಕಾರ ಪಡೆಯುವಲ್ಲಿ ಹಣ ಬಲ, ತೋಳ್ಬಲದ ಸವಾಲನ್ನು ಎದುರಿಸಬೇಕಾಗುತ್ತದೆ. ಅದನ್ನು ಮೀರಿ ಜನಬಲದ ಸಹಕಾರದಿಂದ ಅವರು ಅಧಿಕಾರಕ್ಕೆ ಬರಬೇಕು. ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣವಾಗಬೇಕಾದರೆ ಚಳವಳಿಗಳು ಜೀವಂತವಾಗಿರಬೇಕು' ಎಂದು ಅವರು ನುಡಿದರು.<br /> <br /> `ದಲಿತ ಸಮುದಾಯದಿಂದ ಆಯ್ಕೆಯಾದವರು ದಲಿತರ ಏಳಿಗೆ, ದಲಿತ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಮಹಿಳೆಯರು ಹೆಚ್ಚು ಹೆಚ್ಚು ರಾಜಕೀಯದಲ್ಲಿ ಭಾಗವಹಿಸುವಂತೆ ಮಾಡಲು ಅವರಲ್ಲಿ ಅರಿವು ಮೂಡಿಸಬೇಕು' ಎಂದು ಅವರು ಹೇಳಿದರು.<br /> <br /> ವಿಧಾನ ಪರಿಷತ್ ಮಾಜಿ ಸದಸ್ಯ ಎಲ್.ಹನುಮಂತಯ್ಯ ಮಾತನಾಡಿ, `ದಲಿತ ಸಮುದಾಯದ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಪರಿಸ್ಥಿತಿ ನಿರ್ಮಾಣವಾಗಬೇಕು. ದಲಿತರು ರಾಜ್ಯದ ರಾಜಕಾರಣಬದಲಿಸುವ ಶಕ್ತಿಯಾಗಿ ಬೆಳೆಯಬೇಕು' ಎಂದರು.<br /> <br /> ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಆರ್.ಮೋಹನ್ರಾಜ್, ಪದಾಧಿಕಾರಿಗಳಾದ ಗ್ಯಾನಪ್ಪ ಬಡಿಗೇರ್, ಡಿ. ಸಿದ್ದರಾಜು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ದಲಿತರು ಸಕ್ರಿಯವಾಗಿ ರಾಜಕಾರಣದಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಜಕೀಯ ಅಧಿಕಾರ ಪಡೆಯಬೇಕು. ಆಗ ದಲಿತರ ಅಭಿವೃದ್ಧಿ ಸಾಧ್ಯ ಎಂದು' ಲೋಕ ಜನಶಕ್ತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಪ್ರಭಾವತಿ ಹೇಳಿದರು.<br /> <br /> ಕರ್ನಾಟಕ ದಲಿತ ಸಂಘರ್ಷ ಸಮಿತಿಯು ದಲಿತ ಚಳವಳಿಗಾರ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನದ ಅಂಗವಾಗಿ `ದಲಿತರು ಮತ್ತು ರಾಜಕಾರಣ ಹಾಗೂ ಮುಂದಿನ ಸವಾಲುಗಳು' ವಿಷಯ ಕುರಿತು ಭಾನುವಾರ ನಗರದಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದಲಿತರು ರಾಜಕೀಯ ಅಧಿಕಾರ ಪಡೆಯುವಲ್ಲಿ ಹಣ ಬಲ, ತೋಳ್ಬಲದ ಸವಾಲನ್ನು ಎದುರಿಸಬೇಕಾಗುತ್ತದೆ. ಅದನ್ನು ಮೀರಿ ಜನಬಲದ ಸಹಕಾರದಿಂದ ಅವರು ಅಧಿಕಾರಕ್ಕೆ ಬರಬೇಕು. ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣವಾಗಬೇಕಾದರೆ ಚಳವಳಿಗಳು ಜೀವಂತವಾಗಿರಬೇಕು' ಎಂದು ಅವರು ನುಡಿದರು.<br /> <br /> `ದಲಿತ ಸಮುದಾಯದಿಂದ ಆಯ್ಕೆಯಾದವರು ದಲಿತರ ಏಳಿಗೆ, ದಲಿತ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಮಹಿಳೆಯರು ಹೆಚ್ಚು ಹೆಚ್ಚು ರಾಜಕೀಯದಲ್ಲಿ ಭಾಗವಹಿಸುವಂತೆ ಮಾಡಲು ಅವರಲ್ಲಿ ಅರಿವು ಮೂಡಿಸಬೇಕು' ಎಂದು ಅವರು ಹೇಳಿದರು.<br /> <br /> ವಿಧಾನ ಪರಿಷತ್ ಮಾಜಿ ಸದಸ್ಯ ಎಲ್.ಹನುಮಂತಯ್ಯ ಮಾತನಾಡಿ, `ದಲಿತ ಸಮುದಾಯದ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಪರಿಸ್ಥಿತಿ ನಿರ್ಮಾಣವಾಗಬೇಕು. ದಲಿತರು ರಾಜ್ಯದ ರಾಜಕಾರಣಬದಲಿಸುವ ಶಕ್ತಿಯಾಗಿ ಬೆಳೆಯಬೇಕು' ಎಂದರು.<br /> <br /> ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಆರ್.ಮೋಹನ್ರಾಜ್, ಪದಾಧಿಕಾರಿಗಳಾದ ಗ್ಯಾನಪ್ಪ ಬಡಿಗೇರ್, ಡಿ. ಸಿದ್ದರಾಜು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>