<p><strong>ಬೆಂಗಳೂರು: </strong>ಗುಲ್ಬರ್ಗ, ರಾಯಚೂರು ಸೇರಿದಂತೆ ನೆರೆಹೊರೆಯ ಒಟ್ಟು ನಾಲ್ಕು ಜಿಲ್ಲೆಗಳ ದಲಿತರ ಕೇರಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಘೋಷಿಸಿದರು.<br /> <br /> ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಶನಿವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 121ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಶೌಚಾಲಯ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲಾಗುವುದು~ ಎಂದರು.<br /> <br /> ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪ್ರತಿಯೊಂದು ಶೌಚಾಲಯ ನಿರ್ಮಾಣಕ್ಕೆ ಪ್ರಸ್ತುತ 3,250 ರೂಪಾಯಿ ನೀಡಲಾಗುತ್ತಿದೆ. ಇನ್ನುಳಿದ 6,750 ರೂಪಾಯಿ ಮೊತ್ತವನ್ನು ಸರ್ಕಾರ ಭರಿಸುತ್ತದೆ. ಕ್ರೋಡೀಕೃತ ಮೊತ್ತವಾದ 10 ಸಾವಿರ ರೂಪಾಯಿ ಬಳಸಿ ಶೌಚಾಲಯ ನಿರ್ಮಿಸಲಾಗುವುದು ಎಂದು ಹೇಳಿದರು.<br /> <br /> ನಮ್ಮ ಸಮಾಜದ ಕೆಲವು ಸಣ್ಣ ಮನಸ್ಸಿನ ವ್ಯಕ್ತಿಗಳಿಂದಾಗಿ ದಲಿತರು ಇನ್ನೂ ದುರ್ಬಲರಾಗಿಯೇ ಇದ್ದಾರೆ, ಮೀಸಲಾತಿಯ ಪ್ರಯೋಜನವನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ~ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ವಿಷಾದಿಸಿದರು.<br /> <br /> ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಸಂದರ್ಭದಲ್ಲಿ ಯಾರೂ ಅಸಭ್ಯವಾಗಿ ಘೋಷಣೆ ಕೂಗಬಾರದು. ಅಂಬೇಡ್ಕರ್ ಅವರಂಥ ಮಹಾತ್ಮರ ಜನ್ಮದಿನ ಆಚರಣೆಯ ವೇಳೆ ಇಂಥ ಕೃತ್ಯಗಳು ಸಲ್ಲದು. ಯಾರೇ ಇಂಥ ಕಾರ್ಯದಲ್ಲಿ ತೊಡಗಿದರೂ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾರಜೋಳ ಎಚ್ಚರಿಸಿದರು.<br /> <br /> <strong>ಆಕ್ರೋಶ: </strong>ಸಮಾಜ ಕಲ್ಯಾಣ ಸಚಿವ ಎ. ನಾರಾಯಣ ಸ್ವಾಮಿ ಅವರು ಮಾತನಾಡುವ ಸಂದರ್ಭ, `ಹಿಂದೆ ಬಾಬು ಜಗಜೀವನರಾಂ ಜಯಂತಿ ಆಚರಣೆ ಸಂದರ್ಭದಲ್ಲೂ ಬ್ಯಾಂಕ್ವೆಟ್ ಸಭಾಂಗಣದ ಕುರ್ಚಿಗಳು ಖಾಲಿ ಇದ್ದವು. ಇಂದೂ ಅನೇಕ ಕುರ್ಚಿಗಳು ಖಾಲಿ ಇವೆ~ ಎಂದು ಹೇಳಿದಾಗ, ಸಭಿಕರಲ್ಲಿ ಕೆಲವರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಅನೇಕರಿಗೆ ಸಭಾಂಗಣ ಪ್ರವೇಶಿಸಲು ಪೊಲೀಸರು ಅವಕಾಶ ಮಾಡಿಕೊಟ್ಟಿಲ್ಲ. ಒಳಗೆ ಬರುವುದಾದರೂ ಹೇಗೆ ಎಂದು ಕೆಲವರು ಸಚಿವರನ್ನು ನೇರವಾಗಿ ಪ್ರಶ್ನಿಸಿದರು. ನಂತರ ಪೊಲೀಸರು ಮಧ್ಯಪ್ರವೇಶಿಸಿದ ಕಾರಣ ಸುಮ್ಮನಾದರು. ಹನ್ನೆರೆಡು ಮಂದಿ ಗಣ್ಯರಿಗೆ ಮುಖ್ಯಮಂತ್ರಿಗಳು ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಿದರು.<br /> <br /> ನಿವೃತ್ತ ಡಿಜಿಪಿ ಅಜಯಕುಮಾರ್ ಸಿಂಹ ಅವರು ಪ್ರಶಸ್ತಿ ಸ್ವೀಕರಿಸಲು ಗೈರುಹಾಜರಾಗಿದ್ದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆ ತಾರಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗುಲ್ಬರ್ಗ, ರಾಯಚೂರು ಸೇರಿದಂತೆ ನೆರೆಹೊರೆಯ ಒಟ್ಟು ನಾಲ್ಕು ಜಿಲ್ಲೆಗಳ ದಲಿತರ ಕೇರಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಘೋಷಿಸಿದರು.<br /> <br /> ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಶನಿವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 121ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಶೌಚಾಲಯ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲಾಗುವುದು~ ಎಂದರು.<br /> <br /> ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪ್ರತಿಯೊಂದು ಶೌಚಾಲಯ ನಿರ್ಮಾಣಕ್ಕೆ ಪ್ರಸ್ತುತ 3,250 ರೂಪಾಯಿ ನೀಡಲಾಗುತ್ತಿದೆ. ಇನ್ನುಳಿದ 6,750 ರೂಪಾಯಿ ಮೊತ್ತವನ್ನು ಸರ್ಕಾರ ಭರಿಸುತ್ತದೆ. ಕ್ರೋಡೀಕೃತ ಮೊತ್ತವಾದ 10 ಸಾವಿರ ರೂಪಾಯಿ ಬಳಸಿ ಶೌಚಾಲಯ ನಿರ್ಮಿಸಲಾಗುವುದು ಎಂದು ಹೇಳಿದರು.<br /> <br /> ನಮ್ಮ ಸಮಾಜದ ಕೆಲವು ಸಣ್ಣ ಮನಸ್ಸಿನ ವ್ಯಕ್ತಿಗಳಿಂದಾಗಿ ದಲಿತರು ಇನ್ನೂ ದುರ್ಬಲರಾಗಿಯೇ ಇದ್ದಾರೆ, ಮೀಸಲಾತಿಯ ಪ್ರಯೋಜನವನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ~ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ವಿಷಾದಿಸಿದರು.<br /> <br /> ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಸಂದರ್ಭದಲ್ಲಿ ಯಾರೂ ಅಸಭ್ಯವಾಗಿ ಘೋಷಣೆ ಕೂಗಬಾರದು. ಅಂಬೇಡ್ಕರ್ ಅವರಂಥ ಮಹಾತ್ಮರ ಜನ್ಮದಿನ ಆಚರಣೆಯ ವೇಳೆ ಇಂಥ ಕೃತ್ಯಗಳು ಸಲ್ಲದು. ಯಾರೇ ಇಂಥ ಕಾರ್ಯದಲ್ಲಿ ತೊಡಗಿದರೂ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾರಜೋಳ ಎಚ್ಚರಿಸಿದರು.<br /> <br /> <strong>ಆಕ್ರೋಶ: </strong>ಸಮಾಜ ಕಲ್ಯಾಣ ಸಚಿವ ಎ. ನಾರಾಯಣ ಸ್ವಾಮಿ ಅವರು ಮಾತನಾಡುವ ಸಂದರ್ಭ, `ಹಿಂದೆ ಬಾಬು ಜಗಜೀವನರಾಂ ಜಯಂತಿ ಆಚರಣೆ ಸಂದರ್ಭದಲ್ಲೂ ಬ್ಯಾಂಕ್ವೆಟ್ ಸಭಾಂಗಣದ ಕುರ್ಚಿಗಳು ಖಾಲಿ ಇದ್ದವು. ಇಂದೂ ಅನೇಕ ಕುರ್ಚಿಗಳು ಖಾಲಿ ಇವೆ~ ಎಂದು ಹೇಳಿದಾಗ, ಸಭಿಕರಲ್ಲಿ ಕೆಲವರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಅನೇಕರಿಗೆ ಸಭಾಂಗಣ ಪ್ರವೇಶಿಸಲು ಪೊಲೀಸರು ಅವಕಾಶ ಮಾಡಿಕೊಟ್ಟಿಲ್ಲ. ಒಳಗೆ ಬರುವುದಾದರೂ ಹೇಗೆ ಎಂದು ಕೆಲವರು ಸಚಿವರನ್ನು ನೇರವಾಗಿ ಪ್ರಶ್ನಿಸಿದರು. ನಂತರ ಪೊಲೀಸರು ಮಧ್ಯಪ್ರವೇಶಿಸಿದ ಕಾರಣ ಸುಮ್ಮನಾದರು. ಹನ್ನೆರೆಡು ಮಂದಿ ಗಣ್ಯರಿಗೆ ಮುಖ್ಯಮಂತ್ರಿಗಳು ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಿದರು.<br /> <br /> ನಿವೃತ್ತ ಡಿಜಿಪಿ ಅಜಯಕುಮಾರ್ ಸಿಂಹ ಅವರು ಪ್ರಶಸ್ತಿ ಸ್ವೀಕರಿಸಲು ಗೈರುಹಾಜರಾಗಿದ್ದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆ ತಾರಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>