<p>ಶ್ರೀನಿವಾಸಪುರ: ದಲಿತ ಸಮುದಾಯ ಭಿನ್ನಾಭಿಪ್ರಾಯ ಮರೆತು ಒಗ್ಗೂಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ತನ್ನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ವಿ.ನಾರಾಯಣಸ್ವಾಮಿ ಕರೆ ನೀಡಿದರು.<br /> <br /> ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ವತಿಯಿಂದ ಭಾನುವಾರ ಏರ್ಪಡಿಸಿದ್ದ ದಲಿತರ ಸ್ವಾಭಿಮಾನ ದಿನಾಚರಣೆ, ದಲಿತ ಮುಖಂಡರಾಗಿದ್ದ ದಿವಂಗತ ಎನ್.ಶಿವಣ್ಣ ಅವರ 61ನೇ ಜನ್ಮದಿನ ಆಚರಣೆ ಮತ್ತು ಸ್ವಾಭಿಮಾನ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.<br /> <br /> ಡಿವೈಎಸ್ಪಿ ವಿ.ಗೋವಿಂದಯ್ಯ ಮಾತನಾಡಿ, ದಲಿತ ಸಮುದಾಯಕ್ಕೆ ಅನಕ್ಷರತೆ ಮತ್ತು ಆರ್ಥಿಕ ಹಿನ್ನಡೆಯು ಶಾಪವಾಗಿ ಪರಿಣಮಿಸಿದೆ ಎಂದು ಅವರು ತಿಳಿಸಿದರು. ಮೊದಲು ದಲಿತ ಸಮುದಾಯ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.<br /> <br /> ಜಾತಿ ವ್ಯವಸ್ಥೆ ಪ್ರಗತಿಗೆ ಮಾರಕವಾಗಿದೆ. ಸಾಮಾಜಿಕ ಸಮಾನತೆಗೆ ಅಡ್ಡಿಯನ್ನುಂಟುಮಾಡಿದೆ. ಈ ನಿಟ್ಟಿನಲ್ಲಿ ಭೇದ-ಭಾವ ತೊಲಗಬೇಕಾದರೆ ಜಾತಿವಾದ ಅಳಿಯಬೇಕು.ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ನಮ್ಮ ಸ್ವಾತಂತ್ರ್ಯಕ್ಕೆ ಹೆಚ್ಚಿನ ಬೆಲೆ ಬರುತ್ತದೆ. <br /> <br /> ಯಾವುದೇ ಕಾರಣಕ್ಕೂ ಸಮಾಜವನ್ನು ಒಡೆಯಬಾರದು ಎಂದು ಸಲಹೆ ನೀಡಿದರು.ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸೂಲಿಕುಂಟೆ ರಮೇಶ್ ಮಾತನಾಡಿ, ಎನ್.ಶಿವಣ್ಣ ಅವರು ಹೋರಾಟಕ್ಕೆ ಸ್ಫೂರ್ತಿಯಾಗಿದ್ದರು. ಅವರ ಕಾಲದಲ್ಲಿ ಕೈಗೊಳ್ಳಲಾದ ಹೋರಾಟಗಳು ದಲಿತರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿವೆ ಎಂದು ಹೇಳಿದರು.<br /> <br /> ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ವಿ.ವೆಂಕಟಾಚಲಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು.ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ಅನಂತರಾಮು, ಜಿಲ್ಲಾ ಸಂಘಟನಾ ಸಂಚಾಲಕ ನಾಗನಾಳ ಮುನಿಯಪ್ಪ ಸಂಘಟನೆ ಕುರಿತು ಮಾತನಾಡಿದರು. <br /> <br /> ಈ ಸಂದರ್ಭದಲ್ಲಿ ಎಚ್.ಮುನಿಚೌಡಪ್ಪ, ರೆಡ್ಡಪ್ಪ ಮತ್ತು ಸಂಗಡಿಗರು ಕ್ರಾಂತಿ ಗೀತೆ ಹಾಡಿದರು. ಡಿ.ಚಿಕ್ಕಣ್ಣ, ಆರ್.ಕುಮಾರ್, ಎನ್.ನಟರಾಜ್, ಬಿ.ಚಂದ್ರಶೇಖರ್, ಗೌನಿಪಲ್ಲಿ ವೆಂಕಟರವಣಪ್ಪ ಹಾಜರಿದ್ದರು. ಸೋಮಣ್ಣ ನಿರೂಪಿಸಿದರು. ರೋಜೇನಹಳ್ಳಿ ವೆಂಕಟರವಣ ಸ್ವಾಗತಿಸಿದರು. ವೆಂಕಟರವಣಪ್ಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ದಲಿತ ಸಮುದಾಯ ಭಿನ್ನಾಭಿಪ್ರಾಯ ಮರೆತು ಒಗ್ಗೂಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ತನ್ನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ವಿ.ನಾರಾಯಣಸ್ವಾಮಿ ಕರೆ ನೀಡಿದರು.<br /> <br /> ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ವತಿಯಿಂದ ಭಾನುವಾರ ಏರ್ಪಡಿಸಿದ್ದ ದಲಿತರ ಸ್ವಾಭಿಮಾನ ದಿನಾಚರಣೆ, ದಲಿತ ಮುಖಂಡರಾಗಿದ್ದ ದಿವಂಗತ ಎನ್.ಶಿವಣ್ಣ ಅವರ 61ನೇ ಜನ್ಮದಿನ ಆಚರಣೆ ಮತ್ತು ಸ್ವಾಭಿಮಾನ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.<br /> <br /> ಡಿವೈಎಸ್ಪಿ ವಿ.ಗೋವಿಂದಯ್ಯ ಮಾತನಾಡಿ, ದಲಿತ ಸಮುದಾಯಕ್ಕೆ ಅನಕ್ಷರತೆ ಮತ್ತು ಆರ್ಥಿಕ ಹಿನ್ನಡೆಯು ಶಾಪವಾಗಿ ಪರಿಣಮಿಸಿದೆ ಎಂದು ಅವರು ತಿಳಿಸಿದರು. ಮೊದಲು ದಲಿತ ಸಮುದಾಯ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.<br /> <br /> ಜಾತಿ ವ್ಯವಸ್ಥೆ ಪ್ರಗತಿಗೆ ಮಾರಕವಾಗಿದೆ. ಸಾಮಾಜಿಕ ಸಮಾನತೆಗೆ ಅಡ್ಡಿಯನ್ನುಂಟುಮಾಡಿದೆ. ಈ ನಿಟ್ಟಿನಲ್ಲಿ ಭೇದ-ಭಾವ ತೊಲಗಬೇಕಾದರೆ ಜಾತಿವಾದ ಅಳಿಯಬೇಕು.ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ನಮ್ಮ ಸ್ವಾತಂತ್ರ್ಯಕ್ಕೆ ಹೆಚ್ಚಿನ ಬೆಲೆ ಬರುತ್ತದೆ. <br /> <br /> ಯಾವುದೇ ಕಾರಣಕ್ಕೂ ಸಮಾಜವನ್ನು ಒಡೆಯಬಾರದು ಎಂದು ಸಲಹೆ ನೀಡಿದರು.ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸೂಲಿಕುಂಟೆ ರಮೇಶ್ ಮಾತನಾಡಿ, ಎನ್.ಶಿವಣ್ಣ ಅವರು ಹೋರಾಟಕ್ಕೆ ಸ್ಫೂರ್ತಿಯಾಗಿದ್ದರು. ಅವರ ಕಾಲದಲ್ಲಿ ಕೈಗೊಳ್ಳಲಾದ ಹೋರಾಟಗಳು ದಲಿತರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿವೆ ಎಂದು ಹೇಳಿದರು.<br /> <br /> ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ವಿ.ವೆಂಕಟಾಚಲಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು.ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ಅನಂತರಾಮು, ಜಿಲ್ಲಾ ಸಂಘಟನಾ ಸಂಚಾಲಕ ನಾಗನಾಳ ಮುನಿಯಪ್ಪ ಸಂಘಟನೆ ಕುರಿತು ಮಾತನಾಡಿದರು. <br /> <br /> ಈ ಸಂದರ್ಭದಲ್ಲಿ ಎಚ್.ಮುನಿಚೌಡಪ್ಪ, ರೆಡ್ಡಪ್ಪ ಮತ್ತು ಸಂಗಡಿಗರು ಕ್ರಾಂತಿ ಗೀತೆ ಹಾಡಿದರು. ಡಿ.ಚಿಕ್ಕಣ್ಣ, ಆರ್.ಕುಮಾರ್, ಎನ್.ನಟರಾಜ್, ಬಿ.ಚಂದ್ರಶೇಖರ್, ಗೌನಿಪಲ್ಲಿ ವೆಂಕಟರವಣಪ್ಪ ಹಾಜರಿದ್ದರು. ಸೋಮಣ್ಣ ನಿರೂಪಿಸಿದರು. ರೋಜೇನಹಳ್ಳಿ ವೆಂಕಟರವಣ ಸ್ವಾಗತಿಸಿದರು. ವೆಂಕಟರವಣಪ್ಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>