<p><strong>ಬೆಂಗಳೂರು:</strong> ಮಾಜಿ ಸಚಿವ ಬಿ.ಶ್ರೀರಾಮುಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಬಿಜೆಪಿಯ ಆಂತರಿಕ ವಿಷಯ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.<br /> `ಬಿಜೆಪಿಯ ಆಂತರಿಕ ಸಂಘರ್ಷ ಈಗ ಬೀದಿಗೆ ಬಂದಿದೆ. ಈ ಸರ್ಕಾರ ಬಂದ ದಿನದಿಂದಲೂ ಶಾಸಕರು ಮತ್ತು ಸರ್ಕಾರದ ನಡುವೆ ವಿಶ್ವಾಸದ ಕೊರತೆ ಇದೆ. ಈಗ ಅದು ಸ್ಫೋಟಗೊಂಡಿದೆ~ ಎಂದರು.<br /> <br /> `ಹಿಂದೆ ಪ್ರವಾಹ ಬಂದಾಗಲೂ ಬಿಜೆಪಿಯಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದ್ದ ಪರಿಣಾಮವಾಗಿ ಸರ್ಕಾರ ಜನರ ನೆರವಿಗೆ ಧಾವಿಸಿರಲಿಲ್ಲ. ಈಗಲೂ ಅತಿವೃಷ್ಟಿಯಿಂದ ಜನರು ಸಮಸ್ಯೆಯಲ್ಲಿದ್ದಾರೆ. ಬಿಜೆಪಿಯಲ್ಲಿ ಮತ್ತೆ ಬಿಕ್ಕಟ್ಟು ಉದ್ಭವಿಸುವ ಲಕ್ಷಣ ಕಾಣಿಸುತ್ತಿದೆ. ಬಿಜೆಪಿ ಮುಖಂಡರು ವಿಧಾನಸಭೆಯನ್ನು ವಿಸರ್ಜಿಸಿ ಮತ್ತೆ ಜನಾದೇಶ ಪಡೆಯಲು ಮುಂದಾಗಲಿ~ ಎಂದು ಒತ್ತಾಯಿಸಿದರು.<br /> <br /> `ಶ್ರೀರಾಮುಲು ಜೆಡಿಎಸ್ ಸೇರುತ್ತಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಈವರೆಗೂ ಅಂತಹ ಯಾವುದೇ ಚರ್ಚೆಯೂ ನಡೆದಿಲ್ಲ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಜಿ ಸಚಿವ ಬಿ.ಶ್ರೀರಾಮುಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಬಿಜೆಪಿಯ ಆಂತರಿಕ ವಿಷಯ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.<br /> `ಬಿಜೆಪಿಯ ಆಂತರಿಕ ಸಂಘರ್ಷ ಈಗ ಬೀದಿಗೆ ಬಂದಿದೆ. ಈ ಸರ್ಕಾರ ಬಂದ ದಿನದಿಂದಲೂ ಶಾಸಕರು ಮತ್ತು ಸರ್ಕಾರದ ನಡುವೆ ವಿಶ್ವಾಸದ ಕೊರತೆ ಇದೆ. ಈಗ ಅದು ಸ್ಫೋಟಗೊಂಡಿದೆ~ ಎಂದರು.<br /> <br /> `ಹಿಂದೆ ಪ್ರವಾಹ ಬಂದಾಗಲೂ ಬಿಜೆಪಿಯಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದ್ದ ಪರಿಣಾಮವಾಗಿ ಸರ್ಕಾರ ಜನರ ನೆರವಿಗೆ ಧಾವಿಸಿರಲಿಲ್ಲ. ಈಗಲೂ ಅತಿವೃಷ್ಟಿಯಿಂದ ಜನರು ಸಮಸ್ಯೆಯಲ್ಲಿದ್ದಾರೆ. ಬಿಜೆಪಿಯಲ್ಲಿ ಮತ್ತೆ ಬಿಕ್ಕಟ್ಟು ಉದ್ಭವಿಸುವ ಲಕ್ಷಣ ಕಾಣಿಸುತ್ತಿದೆ. ಬಿಜೆಪಿ ಮುಖಂಡರು ವಿಧಾನಸಭೆಯನ್ನು ವಿಸರ್ಜಿಸಿ ಮತ್ತೆ ಜನಾದೇಶ ಪಡೆಯಲು ಮುಂದಾಗಲಿ~ ಎಂದು ಒತ್ತಾಯಿಸಿದರು.<br /> <br /> `ಶ್ರೀರಾಮುಲು ಜೆಡಿಎಸ್ ಸೇರುತ್ತಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಈವರೆಗೂ ಅಂತಹ ಯಾವುದೇ ಚರ್ಚೆಯೂ ನಡೆದಿಲ್ಲ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>