<p><strong>ಹುಬ್ಬಳ್ಳಿ</strong>: ದವಡೆಯಲ್ಲಿನ ತೊಂದರೆಯಿಂದಾಗಿ ಬಾಯಿ ತೆರೆಯಲಾಗದೇ ಕಳೆದ 12 ವರ್ಷದಿಂದ ನೋವಿನಿಂದ ಬಳಲುತ್ತಿದ್ದ ಬಾಲಕಿಗೆ ಈಗ ಮರುಜೀವ ಬಂದಂತಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯ ಹಾಗೂ ಮಜುಮ್ದಾರ್ ಶಾ ಕ್ಯಾನ್ಸರ್ ಸೆಂಟರ್ವೈದ್ಯರು ನಡೆಸಿದ ಯಶಸ್ವಿ ಶಸ್ತ್ರಚಿಕಿತ್ಸೆಯಿಂದಾಗಿ ಆಕೆ ಹೊಸ ರೂಪ ಪಡೆದಿದ್ದಾಳೆ.<br /> <br /> ನಾರಾಯಣ ಹೃದಯಾಲಯದ ವೈದ್ಯ ಡಾ. ರೋಲ್ಸನ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಕೊಪ್ಪಳ ಜಿಲ್ಲೆಯ ಮುರುಡಪ್ಪ ಎಂಬುವರ ಪುತ್ರಿ ರಾಜೇಶ್ವರಿ ಕಳೆದ 12 ವರ್ಷಗಳಿಂದ ದವಡೆ ತೊಂದರೆ ಎದುರಿಸುತ್ತಿದ್ದಳು. ಆಕೆ 2 ವರ್ಷದ ಮಗುವಾಗಿದ್ದಾಗ ಕಿವಿಯಲ್ಲಿನ ಸೋಂಕಿನಿಂದಾಗಿ ಈ ಸಮಸ್ಯೆ ಉಂಟಾಗಿ, ಇದೇ ಶಾಪವಾಗಿ ಪರಿಣಮಿಸಿತ್ತು. ಬಾಯಿ ತೆರೆಯಲಾಗದ ಕಾರಣ ಕೇವಲ ದ್ರವ ರೂಪದ ಆಹಾರವನ್ನಷ್ಟೇ ಸೇವಿಸುವಂತಾಗಿದೆ. ಆ ಹುಡುಗಿಗೆ ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆ ವತಿಯಿಂದ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದ್ದು, ಈಗ ಆಕೆ ಆಹಾರವನ್ನು ಸೇವಿಸಬಹುದಾಗಿದೆ. ಮಾತ್ರವಲ್ಲ, ಆಕೆಯ ಮುಖಚರ್ಯೆಯೇ ಬದಲಾಗಿದೆ. ಸರ್ಕಾರದ ಆರೋಗ್ಯ ಶ್ರೀ ಯೋಜನೆಯ ಅಡಿ ಆಕೆಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದರು.<br /> <br /> ನಾರಾಯಣ ಹೃದಯಾಲಯ ಆಸ್ಪತ್ರೆ ಸಮೂಹವು ಈ ರೀತಿಯ ಅಪರೂಪದ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನೆರವೇರಿಸುತ್ತ ಬಂದಿದೆ. ಈ ರೀತಿಯ ತೊಂದರೆಗಳಿಗೆ ದೇಶದ ವಿವಿಧ ಆಸ್ಪತ್ರೆಗಳಲ್ಲಿ ವಿವಿಧ ಹಂತಗಳಲ್ಲಿ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತದೆ. ಆದರೆ ನಾರಾಯಣ ಹೃದಯಾಲಯವು ಒಂದೇ ಹಂತದಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡುವಂತಹ ಸೌಲಭ್ಯ ಹಾಗೂ ವೈದ್ಯರನ್ನು ಹೊಂದಿದೆ ಎಂದು ಅವರು ಹೇಳಿದರು. <br /> <br /> ವಂಶವಾಹಿಯಲ್ಲಿನ ಬದಲಾವಣೆ ಮೊದಲಾದ ತೊಂದರೆಗಳಿಂದಾಗಿ ಈ ರೀತಿಯ ಸಿಂಡ್ರೋಮ್ ಗಳು ಉಂಟಾಗುತ್ತವೆ. ಉತ್ತರ ಕರ್ನಾಟಕದ ಜನರಲ್ಲಿ ಸಹ ಈ ತೊಂದರೆಗಳು ಹೆಚ್ಚು. ಆದರೆ ಇಲ್ಲಿನ ಜನರಿಗೆ ಈ ಕುರಿತು ಅರಿವು ಕಡಿಮೆ. ಹೀಗಾಗಿ ಅನೇಕ ಶಿಬಿರಗಳ ಮೂಲಕ ಅವರಿಗೆ ತಿಳಿವಳಿಕೆ ಮೂಡಿಸಲು ಯತ್ನಿಸುತ್ತಿದ್ದೇವೆ. ಸರ್ಕಾರದಿಂದ ಅನೇಕ ಆರೋಗ್ಯ ಸೌಲಭ್ಯಗಳು ಲಭ್ಯವಿದ್ದು, ಅರ್ಹರಿಗೆ ಅವುಗಳ ಲಾಭ ಪಡೆಯಲು ಆಸ್ಪತ್ರೆ ಪ್ರೇರೆಪಿಸುತ್ತಿದೆ. ಜನರೂ ಈ ಕುರಿತು ಅರಿವು ಮೂಡಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ದವಡೆಯಲ್ಲಿನ ತೊಂದರೆಯಿಂದಾಗಿ ಬಾಯಿ ತೆರೆಯಲಾಗದೇ ಕಳೆದ 12 ವರ್ಷದಿಂದ ನೋವಿನಿಂದ ಬಳಲುತ್ತಿದ್ದ ಬಾಲಕಿಗೆ ಈಗ ಮರುಜೀವ ಬಂದಂತಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯ ಹಾಗೂ ಮಜುಮ್ದಾರ್ ಶಾ ಕ್ಯಾನ್ಸರ್ ಸೆಂಟರ್ವೈದ್ಯರು ನಡೆಸಿದ ಯಶಸ್ವಿ ಶಸ್ತ್ರಚಿಕಿತ್ಸೆಯಿಂದಾಗಿ ಆಕೆ ಹೊಸ ರೂಪ ಪಡೆದಿದ್ದಾಳೆ.<br /> <br /> ನಾರಾಯಣ ಹೃದಯಾಲಯದ ವೈದ್ಯ ಡಾ. ರೋಲ್ಸನ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಕೊಪ್ಪಳ ಜಿಲ್ಲೆಯ ಮುರುಡಪ್ಪ ಎಂಬುವರ ಪುತ್ರಿ ರಾಜೇಶ್ವರಿ ಕಳೆದ 12 ವರ್ಷಗಳಿಂದ ದವಡೆ ತೊಂದರೆ ಎದುರಿಸುತ್ತಿದ್ದಳು. ಆಕೆ 2 ವರ್ಷದ ಮಗುವಾಗಿದ್ದಾಗ ಕಿವಿಯಲ್ಲಿನ ಸೋಂಕಿನಿಂದಾಗಿ ಈ ಸಮಸ್ಯೆ ಉಂಟಾಗಿ, ಇದೇ ಶಾಪವಾಗಿ ಪರಿಣಮಿಸಿತ್ತು. ಬಾಯಿ ತೆರೆಯಲಾಗದ ಕಾರಣ ಕೇವಲ ದ್ರವ ರೂಪದ ಆಹಾರವನ್ನಷ್ಟೇ ಸೇವಿಸುವಂತಾಗಿದೆ. ಆ ಹುಡುಗಿಗೆ ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆ ವತಿಯಿಂದ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದ್ದು, ಈಗ ಆಕೆ ಆಹಾರವನ್ನು ಸೇವಿಸಬಹುದಾಗಿದೆ. ಮಾತ್ರವಲ್ಲ, ಆಕೆಯ ಮುಖಚರ್ಯೆಯೇ ಬದಲಾಗಿದೆ. ಸರ್ಕಾರದ ಆರೋಗ್ಯ ಶ್ರೀ ಯೋಜನೆಯ ಅಡಿ ಆಕೆಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದರು.<br /> <br /> ನಾರಾಯಣ ಹೃದಯಾಲಯ ಆಸ್ಪತ್ರೆ ಸಮೂಹವು ಈ ರೀತಿಯ ಅಪರೂಪದ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನೆರವೇರಿಸುತ್ತ ಬಂದಿದೆ. ಈ ರೀತಿಯ ತೊಂದರೆಗಳಿಗೆ ದೇಶದ ವಿವಿಧ ಆಸ್ಪತ್ರೆಗಳಲ್ಲಿ ವಿವಿಧ ಹಂತಗಳಲ್ಲಿ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತದೆ. ಆದರೆ ನಾರಾಯಣ ಹೃದಯಾಲಯವು ಒಂದೇ ಹಂತದಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡುವಂತಹ ಸೌಲಭ್ಯ ಹಾಗೂ ವೈದ್ಯರನ್ನು ಹೊಂದಿದೆ ಎಂದು ಅವರು ಹೇಳಿದರು. <br /> <br /> ವಂಶವಾಹಿಯಲ್ಲಿನ ಬದಲಾವಣೆ ಮೊದಲಾದ ತೊಂದರೆಗಳಿಂದಾಗಿ ಈ ರೀತಿಯ ಸಿಂಡ್ರೋಮ್ ಗಳು ಉಂಟಾಗುತ್ತವೆ. ಉತ್ತರ ಕರ್ನಾಟಕದ ಜನರಲ್ಲಿ ಸಹ ಈ ತೊಂದರೆಗಳು ಹೆಚ್ಚು. ಆದರೆ ಇಲ್ಲಿನ ಜನರಿಗೆ ಈ ಕುರಿತು ಅರಿವು ಕಡಿಮೆ. ಹೀಗಾಗಿ ಅನೇಕ ಶಿಬಿರಗಳ ಮೂಲಕ ಅವರಿಗೆ ತಿಳಿವಳಿಕೆ ಮೂಡಿಸಲು ಯತ್ನಿಸುತ್ತಿದ್ದೇವೆ. ಸರ್ಕಾರದಿಂದ ಅನೇಕ ಆರೋಗ್ಯ ಸೌಲಭ್ಯಗಳು ಲಭ್ಯವಿದ್ದು, ಅರ್ಹರಿಗೆ ಅವುಗಳ ಲಾಭ ಪಡೆಯಲು ಆಸ್ಪತ್ರೆ ಪ್ರೇರೆಪಿಸುತ್ತಿದೆ. ಜನರೂ ಈ ಕುರಿತು ಅರಿವು ಮೂಡಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>