<p><strong>ನ್ಯೂಯಾರ್ಕ್ (ಪಿಟಿಐ): </strong>ಪ್ರಧಾನಿ ಮನಮೋಹನ್ ಸಿಂಗ್ ಅವರು ಇರಾನ್ಗೆ ಭೇಟಿ ನೀಡಲಿದ್ದಾರೆ. ಭೇಟಿ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.<br /> <br /> ವಿಶ್ವಸಂಸ್ಥೆಯ 66ನೇ ಮಹಾಧಿವೇಶನದಲ್ಲಿ ಭಾಗವಹಿಸಲು ತೆರಳಿರುವ ಪ್ರಧಾನಿ ಮನಮೋಹನ್ಸಿಂಗ್, ಶನಿವಾರ ಇರಾನ್ ಅಧ್ಯಕ್ಷ ಮೊಹಮ್ಮದ್ ಅಹ್ಮದಿನೇಜಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.<br /> <br /> ಈ ಸಂದರ್ಭದಲ್ಲಿ ಇರಾನ್ಗೆ ಭೇಟಿ ನೀಡುವಂತೆ ಅಹ್ಮದಿನೇಜಾದ್ ನೀಡಿದ ಆಹ್ವಾನವನ್ನು ಮನಮೋಹನ್ ಸಿಂಗ್ ಸ್ವೀಕರಿಸಿದರು.<br /> <br /> ಉಭಯ ರಾಷ್ಟ್ರಗಳ ರಾಜತಾಂತ್ರಿಕರು ಚರ್ಚಿಸಿದ ಬಳಿಕ ಭೇಟಿಯ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ವಿದೇಶಾಂಗ ಕಾರ್ಯದರ್ಶಿ ರಂಜನ್ ಮಥಾಯ್ ಹೇಳಿದ್ದಾರೆ.<br /> </p>.<table align="right" border="2" cellpadding="2" cellspacing="2" width="300"> <tbody> <tr> <td bgcolor="#f2f0f0" style="text-align: left"> <p style="text-align: center"><strong>ಜಿ-4 ರಾಷ್ಟ್ರಗಳ ಸಭೆಯಲ್ಲಿ ಎಸ್.ಎಂ. ಕೃಷ್ಣ </strong></p> <p><br /> <span style="font-size: small">ಈ ಮಧ್ಯೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಎಂ ಕೃಷ್ಣ ಅವರು ಭಾರತ, ಬ್ರೆಜಿಲ್, ಜಪಾನ್, ಜರ್ಮನಿಗಳನ್ನೊಳಗೊಂಡ ಜಿ-4 ರಾಷ್ಟ್ರಗಳ ಸಭೆಯಲ್ಲಿ ಭಾಗವಹಿಸಿದರು.<br /> <br /> ಅಂತರರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ರಾಷ್ಟ್ರಗಳು ನೀಡಿರುವ ಕೊಡುಗೆಯನ್ನು ಪರಿಗಣಿಸಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯನ್ನು ವಿಸ್ತರಿಸುವ ತಮ್ಮ ಕಲ್ಪನೆಯನ್ನು ಜಿ-4 ರಾಷ್ಟ್ರಗಳು ಸಭೆಯಲ್ಲಿ ಪುನರುಚ್ಚರಿಸಿದವು.<br /> <br /> ಕೃಷ್ಣ ಅವರು ಬಿಆರ್ಐಸಿ (ಬ್ರೆಜಿಲ್, ರಷ್ಯ, ಭಾರತ ಮತ್ತು ಚೀನಾ) ಸಭೆಯಲ್ಲೂ ಅಧ್ಯಕ್ಷರಾಗಿ ಭಾಗವಹಿಸಿದರು. ಬಿಆರ್ಐಸಿ ಸಮ್ಮೇಳನವು 2012ರ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಸಲು ಸಭೆ ನಿರ್ಧರಿಸಿತು. ಲಿಬಿಯಾ, ಸಿರಿಯಾ, ಪ್ಯಾಲೆಸ್ಟೈನ್ ರಾಷ್ಟ್ರಗಳ ಸ್ಥಿತಿಗತಿಗಳನ್ನು ನಾಲ್ಕು ರಾಷ್ಟ್ರಗಳ ವಿದೇಶಾಂಗ ವ್ಯವಹಾರಗಳ ಸಚಿವರು ಚರ್ಚಿಸಿದರು.</span></p> </td> </tr> </tbody> </table>.<p>ಶನಿವಾರ ನಡೆದ ಭೇಟಿಯು ಉಭಯ ರಾಷ್ಟ್ರಗಳ ನಾಯಕರ ನಡುವೆ, ದೀರ್ಘಸಮಯದ ನಂತರ ನಡೆದ ಭೇಟಿಯಾಗಿದೆ. ಮಾತುಕತೆ ಸಂದರ್ಭದಲ್ಲಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು ಎಂದು ಮಥಾಯ್ ಹೇಳಿದರು.<br /> <br /> ಒಂದು ವೇಳೆ ಪ್ರಧಾನಿ ಸಿಂಗ್ ಪ್ರಧಾನಿ ಇರಾನ್ಗೆ ಭೇಟಿ ನೀಡಿದರೆ, ಭಾರತದ ಪ್ರಧಾನಿಯೊಬ್ಬರು 10 ವರ್ಷಗಳ ನಂತರ ಇರಾನ್ಗೆ ನೀಡುತ್ತಿರುವ ಭೇಟಿ ಇದಾಗಲಿದೆ. 2001ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭೇಟಿ ನೀಡಿದ್ದರು. <br /> <br /> ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಕೂಡ ಶೀಘ್ರದಲ್ಲಿ ಇರಾನ್ ಪ್ರವಾಸ ಕೈಗೊಳ್ಳಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ, ಜಪಾನ್ ಪ್ರಧಾನಿ ಜೊತೆ ಮಾತುಕತೆ: ಇದೇ ಸಂದರ್ಭದಲ್ಲಿ ಪ್ರಧಾನಿ ಸಿಂಗ್ ಅವರು ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಮತ್ತು ಜಪಾನಿನ ನೂತನ ಪ್ರಧಾನಿ ಯೊಶಿಕೊ ನೊಡಾ ಅವರೊಂದಿಗೂ ಮಾತುಕತೆ ನಡೆಸಿದರು.<br /> <br /> ರಾಜಪಕ್ಸೆ ಅವರೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹಾಗೂ ಪರಸ್ಪರರ ಹಿತಾಸಕ್ತಿಗಳ ಬಗ್ಗೆ ಚರ್ಚೆ ನಡೆಯಿತು.<br /> <br /> ಶ್ರೀಲಂಕಾದಲ್ಲಿ ಅಧಿಕಾರ ವಿಕೇಂದ್ರೀಕರಣ ಕುರಿತಂತೆ ಮಾಡಲಾಗಿರುವ ಪ್ರಸ್ತಾವನೆ ಮತ್ತು ರಾಷ್ಟ್ರೀಯ ತಮಿಳು ಮೈತ್ರಿಯ ಚರ್ಚೆಗಳ ಬಗ್ಗೆ ಪ್ರಧಾನಿ ಸಿಂಗ್ ಅವರಿಗೆ ರಾಜಪಕ್ಸೆ ಈ ಸಂದರ್ಭದಲ್ಲಿ ವಿವರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್ (ಪಿಟಿಐ): </strong>ಪ್ರಧಾನಿ ಮನಮೋಹನ್ ಸಿಂಗ್ ಅವರು ಇರಾನ್ಗೆ ಭೇಟಿ ನೀಡಲಿದ್ದಾರೆ. ಭೇಟಿ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.<br /> <br /> ವಿಶ್ವಸಂಸ್ಥೆಯ 66ನೇ ಮಹಾಧಿವೇಶನದಲ್ಲಿ ಭಾಗವಹಿಸಲು ತೆರಳಿರುವ ಪ್ರಧಾನಿ ಮನಮೋಹನ್ಸಿಂಗ್, ಶನಿವಾರ ಇರಾನ್ ಅಧ್ಯಕ್ಷ ಮೊಹಮ್ಮದ್ ಅಹ್ಮದಿನೇಜಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.<br /> <br /> ಈ ಸಂದರ್ಭದಲ್ಲಿ ಇರಾನ್ಗೆ ಭೇಟಿ ನೀಡುವಂತೆ ಅಹ್ಮದಿನೇಜಾದ್ ನೀಡಿದ ಆಹ್ವಾನವನ್ನು ಮನಮೋಹನ್ ಸಿಂಗ್ ಸ್ವೀಕರಿಸಿದರು.<br /> <br /> ಉಭಯ ರಾಷ್ಟ್ರಗಳ ರಾಜತಾಂತ್ರಿಕರು ಚರ್ಚಿಸಿದ ಬಳಿಕ ಭೇಟಿಯ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ವಿದೇಶಾಂಗ ಕಾರ್ಯದರ್ಶಿ ರಂಜನ್ ಮಥಾಯ್ ಹೇಳಿದ್ದಾರೆ.<br /> </p>.<table align="right" border="2" cellpadding="2" cellspacing="2" width="300"> <tbody> <tr> <td bgcolor="#f2f0f0" style="text-align: left"> <p style="text-align: center"><strong>ಜಿ-4 ರಾಷ್ಟ್ರಗಳ ಸಭೆಯಲ್ಲಿ ಎಸ್.ಎಂ. ಕೃಷ್ಣ </strong></p> <p><br /> <span style="font-size: small">ಈ ಮಧ್ಯೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಎಂ ಕೃಷ್ಣ ಅವರು ಭಾರತ, ಬ್ರೆಜಿಲ್, ಜಪಾನ್, ಜರ್ಮನಿಗಳನ್ನೊಳಗೊಂಡ ಜಿ-4 ರಾಷ್ಟ್ರಗಳ ಸಭೆಯಲ್ಲಿ ಭಾಗವಹಿಸಿದರು.<br /> <br /> ಅಂತರರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ರಾಷ್ಟ್ರಗಳು ನೀಡಿರುವ ಕೊಡುಗೆಯನ್ನು ಪರಿಗಣಿಸಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯನ್ನು ವಿಸ್ತರಿಸುವ ತಮ್ಮ ಕಲ್ಪನೆಯನ್ನು ಜಿ-4 ರಾಷ್ಟ್ರಗಳು ಸಭೆಯಲ್ಲಿ ಪುನರುಚ್ಚರಿಸಿದವು.<br /> <br /> ಕೃಷ್ಣ ಅವರು ಬಿಆರ್ಐಸಿ (ಬ್ರೆಜಿಲ್, ರಷ್ಯ, ಭಾರತ ಮತ್ತು ಚೀನಾ) ಸಭೆಯಲ್ಲೂ ಅಧ್ಯಕ್ಷರಾಗಿ ಭಾಗವಹಿಸಿದರು. ಬಿಆರ್ಐಸಿ ಸಮ್ಮೇಳನವು 2012ರ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಸಲು ಸಭೆ ನಿರ್ಧರಿಸಿತು. ಲಿಬಿಯಾ, ಸಿರಿಯಾ, ಪ್ಯಾಲೆಸ್ಟೈನ್ ರಾಷ್ಟ್ರಗಳ ಸ್ಥಿತಿಗತಿಗಳನ್ನು ನಾಲ್ಕು ರಾಷ್ಟ್ರಗಳ ವಿದೇಶಾಂಗ ವ್ಯವಹಾರಗಳ ಸಚಿವರು ಚರ್ಚಿಸಿದರು.</span></p> </td> </tr> </tbody> </table>.<p>ಶನಿವಾರ ನಡೆದ ಭೇಟಿಯು ಉಭಯ ರಾಷ್ಟ್ರಗಳ ನಾಯಕರ ನಡುವೆ, ದೀರ್ಘಸಮಯದ ನಂತರ ನಡೆದ ಭೇಟಿಯಾಗಿದೆ. ಮಾತುಕತೆ ಸಂದರ್ಭದಲ್ಲಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು ಎಂದು ಮಥಾಯ್ ಹೇಳಿದರು.<br /> <br /> ಒಂದು ವೇಳೆ ಪ್ರಧಾನಿ ಸಿಂಗ್ ಪ್ರಧಾನಿ ಇರಾನ್ಗೆ ಭೇಟಿ ನೀಡಿದರೆ, ಭಾರತದ ಪ್ರಧಾನಿಯೊಬ್ಬರು 10 ವರ್ಷಗಳ ನಂತರ ಇರಾನ್ಗೆ ನೀಡುತ್ತಿರುವ ಭೇಟಿ ಇದಾಗಲಿದೆ. 2001ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭೇಟಿ ನೀಡಿದ್ದರು. <br /> <br /> ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಕೂಡ ಶೀಘ್ರದಲ್ಲಿ ಇರಾನ್ ಪ್ರವಾಸ ಕೈಗೊಳ್ಳಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ, ಜಪಾನ್ ಪ್ರಧಾನಿ ಜೊತೆ ಮಾತುಕತೆ: ಇದೇ ಸಂದರ್ಭದಲ್ಲಿ ಪ್ರಧಾನಿ ಸಿಂಗ್ ಅವರು ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಮತ್ತು ಜಪಾನಿನ ನೂತನ ಪ್ರಧಾನಿ ಯೊಶಿಕೊ ನೊಡಾ ಅವರೊಂದಿಗೂ ಮಾತುಕತೆ ನಡೆಸಿದರು.<br /> <br /> ರಾಜಪಕ್ಸೆ ಅವರೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹಾಗೂ ಪರಸ್ಪರರ ಹಿತಾಸಕ್ತಿಗಳ ಬಗ್ಗೆ ಚರ್ಚೆ ನಡೆಯಿತು.<br /> <br /> ಶ್ರೀಲಂಕಾದಲ್ಲಿ ಅಧಿಕಾರ ವಿಕೇಂದ್ರೀಕರಣ ಕುರಿತಂತೆ ಮಾಡಲಾಗಿರುವ ಪ್ರಸ್ತಾವನೆ ಮತ್ತು ರಾಷ್ಟ್ರೀಯ ತಮಿಳು ಮೈತ್ರಿಯ ಚರ್ಚೆಗಳ ಬಗ್ಗೆ ಪ್ರಧಾನಿ ಸಿಂಗ್ ಅವರಿಗೆ ರಾಜಪಕ್ಸೆ ಈ ಸಂದರ್ಭದಲ್ಲಿ ವಿವರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>