<p>ಗೋಣಿಕೊಪ್ಪಲು: ಕಾವೇರಿ ದಸರಾ ಸಮಿತಿಯಿಂದ ಆಚರಿಸಲ್ಪಡುತ್ತಿರುವ ದಸರಾ ಮೆರವಣಿಗೆಯಲ್ಲಿ ಸಾಂಪ್ರದಾಯಿಕ ಕಾರ್ಯಕ್ರಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ಬಾರಿ ಡಿಜೆ ಮ್ಯೂಸಿಕ್ ಅನ್ನು ನಿಷೇಧಿಸಲಾಗಿದೆ ಎಂದು ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಗಿರೀಶ್ ಗಣಪತಿ ಹೇಳಿದರು.<br /> <br /> 28ರಂದು ಬೆಳಿಗ್ಗೆ 7 ಗಂಟೆಗೆ ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪನೆ ಮಾಡಲಾಗುವುದು. ನವರಾತ್ರಿ ಉತ್ಸವ ಮುಗಿಯುವವರೆಗೆ ಪ್ರತಿದಿನ ಸಂಜೆ 6 ರಿಂದ 7.30ರ ವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಬಳಿಕ 7.30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಆನಂತರ ನಾಡಿನ ಪ್ರಖ್ಯಾತ ಕಲಾವಿದರಿಂದ ಸಂಗೀತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.<br /> <br /> ಅ. 6ರಂದು ದಸರಾ ನಾಡ ಹಬ್ಬ ಸಮಿತಿ ವತಿಯಿಂದ ಆಕರ್ಷಕ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ. ವಿವಿಧ ದಿನಗಳಲ್ಲಿ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.<br /> <br /> ಸಮಿತಿ ಪ್ರಧಾನ ಕಾರ್ಯದರ್ಶಿ ಮಾತನಾಡಿ, ಸ್ಥಳೀಯ ಕಾವೇರಿ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಎಂಇಜಿ ಸಾಯಿ, ಟ್ರೆಟನ್ ಬೆಂಗಳೂರು ಹಾಗೂ ಸ್ಥಳೀಯ ತಂಡಗಳು ಪಾಲ್ಗೊಳ್ಳಲಿವೆ. ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ರೂ. 20 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದರು.<br /> <br /> ದ್ವಿತೀಯ ತಂಡಕ್ಕೆ ರೂ. 10 ಸಾವಿರ, ತೃತೀಯ ತಂಡಕ್ಕೆ ರೂ. 5 ಸಾವಿರ ಬಹುಮಾನ ನೀಡಲಾಗುವುದು. ಸೆ. 30 ರಿಂದ ಅ. 2ರ ವರೆಗೆ ಪಂದ್ಯಾಟ ನಡೆಯಲಿದೆ. ಅ. 3ರಂದು ಮಧಾಹ್ನ 2 ಗಂಟಗೆ ಅಂತಿಮ ಪಂದ್ಯಾವಳಿ ಜರುಗಲಿದೆ. ಟೂರ್ನಿಗೆ ಅತಿಥಿಗಳಾಗಿ ರಾಷ್ಟ್ರೀಯ ತಂಡದ ಕೊಡಗಿನ ಆಟಗಾರರಾದ ಸುನಿಲ್ ಹಾಗೂ ರಘುನಾಥ್ ಅವರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.<br /> <br /> ಪತ್ರಿಕಾಗೋಷ್ಟಿಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ, ಕೋಶಾಧಿಕಾರಿ ಪ್ರಭು, ಕಾರ್ಯದರ್ಶಿ ಲೋಕೇಶ್, ಗಾಂಧಿ, ರಾಮಕೃಷ್ಣ, ಗ್ರಾ.ಪಂ. ಸದಸ್ಯೆ ರೀನಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಣಿಕೊಪ್ಪಲು: ಕಾವೇರಿ ದಸರಾ ಸಮಿತಿಯಿಂದ ಆಚರಿಸಲ್ಪಡುತ್ತಿರುವ ದಸರಾ ಮೆರವಣಿಗೆಯಲ್ಲಿ ಸಾಂಪ್ರದಾಯಿಕ ಕಾರ್ಯಕ್ರಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ಬಾರಿ ಡಿಜೆ ಮ್ಯೂಸಿಕ್ ಅನ್ನು ನಿಷೇಧಿಸಲಾಗಿದೆ ಎಂದು ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಗಿರೀಶ್ ಗಣಪತಿ ಹೇಳಿದರು.<br /> <br /> 28ರಂದು ಬೆಳಿಗ್ಗೆ 7 ಗಂಟೆಗೆ ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪನೆ ಮಾಡಲಾಗುವುದು. ನವರಾತ್ರಿ ಉತ್ಸವ ಮುಗಿಯುವವರೆಗೆ ಪ್ರತಿದಿನ ಸಂಜೆ 6 ರಿಂದ 7.30ರ ವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಬಳಿಕ 7.30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಆನಂತರ ನಾಡಿನ ಪ್ರಖ್ಯಾತ ಕಲಾವಿದರಿಂದ ಸಂಗೀತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.<br /> <br /> ಅ. 6ರಂದು ದಸರಾ ನಾಡ ಹಬ್ಬ ಸಮಿತಿ ವತಿಯಿಂದ ಆಕರ್ಷಕ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ. ವಿವಿಧ ದಿನಗಳಲ್ಲಿ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.<br /> <br /> ಸಮಿತಿ ಪ್ರಧಾನ ಕಾರ್ಯದರ್ಶಿ ಮಾತನಾಡಿ, ಸ್ಥಳೀಯ ಕಾವೇರಿ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಎಂಇಜಿ ಸಾಯಿ, ಟ್ರೆಟನ್ ಬೆಂಗಳೂರು ಹಾಗೂ ಸ್ಥಳೀಯ ತಂಡಗಳು ಪಾಲ್ಗೊಳ್ಳಲಿವೆ. ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ರೂ. 20 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದರು.<br /> <br /> ದ್ವಿತೀಯ ತಂಡಕ್ಕೆ ರೂ. 10 ಸಾವಿರ, ತೃತೀಯ ತಂಡಕ್ಕೆ ರೂ. 5 ಸಾವಿರ ಬಹುಮಾನ ನೀಡಲಾಗುವುದು. ಸೆ. 30 ರಿಂದ ಅ. 2ರ ವರೆಗೆ ಪಂದ್ಯಾಟ ನಡೆಯಲಿದೆ. ಅ. 3ರಂದು ಮಧಾಹ್ನ 2 ಗಂಟಗೆ ಅಂತಿಮ ಪಂದ್ಯಾವಳಿ ಜರುಗಲಿದೆ. ಟೂರ್ನಿಗೆ ಅತಿಥಿಗಳಾಗಿ ರಾಷ್ಟ್ರೀಯ ತಂಡದ ಕೊಡಗಿನ ಆಟಗಾರರಾದ ಸುನಿಲ್ ಹಾಗೂ ರಘುನಾಥ್ ಅವರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.<br /> <br /> ಪತ್ರಿಕಾಗೋಷ್ಟಿಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ, ಕೋಶಾಧಿಕಾರಿ ಪ್ರಭು, ಕಾರ್ಯದರ್ಶಿ ಲೋಕೇಶ್, ಗಾಂಧಿ, ರಾಮಕೃಷ್ಣ, ಗ್ರಾ.ಪಂ. ಸದಸ್ಯೆ ರೀನಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>