<p><strong>ಬೆಂಗಳೂರು: </strong> `ಕ್ರೀಡೆಯಲ್ಲಿ ಪಾಲ್ಗೊಳ್ಳುವುದಿಂದ ದೈಹಿಕ ಸಾಮರ್ಥ್ಯ ಮತ್ತು ಸ್ಪರ್ಧಾ ಮನೋಭಾವವು ಇಮ್ಮಡಿಯಾಗುತ್ತದೆ. ಇದರಿಂದ ವ್ಯಕ್ತಿ ಉತ್ತಮ ಬೌದ್ದಿಕ ಮತ್ತು ಸಾಮಾಜಿಕ ಜೀವನವನ್ನು ರೂಪಿಸಿಕೊಳ್ಳಬಹುದು~ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಗರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ಕ್ರೀಡಾಕೂಟಗಳು ಜೀವನದ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುವುದರಿಂದ ಯುವಕರು ಹೆಚ್ಚು ಉತ್ಸುಹಕರಾಗಿ ಭಾಗವಹಿಸಬೇಕು~ ಎಂದು ಕರೆ ನೀಡಿದರು. <br /> <br /> ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಮರಿಯಪ್ಪ, `ಯುವಜನಾಂಗದಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸಲು ಇಂತಹ ಕ್ರೀಡಾಕೂಟಗಳು ವೇದಿಕೆಯಾಗಿದ್ದು, ಸ್ಪರ್ಧಿಗಳು ಇನ್ನೂ ಉನ್ನತ ಅವಕಾಶ ಪಡೆಯಲಿ~ ಎಂದು ಹಾರೈಸಿದರು. <br /> <br /> ಚಂದಾಪುರದ ಚಿನ್ಮಯ ಯುವಜನ ಸಂಘ ಮತ್ತು ಟಿ.ನರಸೀಪುರ ಬಡಾವಣೆಯ ಮಾರ್ಗದರ್ಶಿ ಯುವತಿ ಮಂಡಳಿಗೆ 2009-10ನೇ ಸಾಲಿನ ಸಾಂಘಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು 10 ಸಾವಿರ ರೂಪಾಯಿಯನ್ನು ಒಳಗೊಂಡಿದೆ. ಕೂಟದಲ್ಲಿ ಸುಮಾರು 300 ಕ್ರೀಡಾಳುಗಳು ಭಾಗವಹಿಸಿದ್ದರು. <br /> <br /> ಪಾಲಿಕೆಯ ಸದಸ್ಯ ರಂಗಣ್ಣ, ಕರ್ನಾಟಕ ಅಥ್ಲೆಟಿಕ್ ಸಂಸ್ಥೆಯ ಕಾರ್ಯದರ್ಶಿ ಕೆ.ಸತ್ಯನಾರಾಯಣ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಯು.ಈರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong> `ಕ್ರೀಡೆಯಲ್ಲಿ ಪಾಲ್ಗೊಳ್ಳುವುದಿಂದ ದೈಹಿಕ ಸಾಮರ್ಥ್ಯ ಮತ್ತು ಸ್ಪರ್ಧಾ ಮನೋಭಾವವು ಇಮ್ಮಡಿಯಾಗುತ್ತದೆ. ಇದರಿಂದ ವ್ಯಕ್ತಿ ಉತ್ತಮ ಬೌದ್ದಿಕ ಮತ್ತು ಸಾಮಾಜಿಕ ಜೀವನವನ್ನು ರೂಪಿಸಿಕೊಳ್ಳಬಹುದು~ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಗರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ಕ್ರೀಡಾಕೂಟಗಳು ಜೀವನದ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುವುದರಿಂದ ಯುವಕರು ಹೆಚ್ಚು ಉತ್ಸುಹಕರಾಗಿ ಭಾಗವಹಿಸಬೇಕು~ ಎಂದು ಕರೆ ನೀಡಿದರು. <br /> <br /> ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಮರಿಯಪ್ಪ, `ಯುವಜನಾಂಗದಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸಲು ಇಂತಹ ಕ್ರೀಡಾಕೂಟಗಳು ವೇದಿಕೆಯಾಗಿದ್ದು, ಸ್ಪರ್ಧಿಗಳು ಇನ್ನೂ ಉನ್ನತ ಅವಕಾಶ ಪಡೆಯಲಿ~ ಎಂದು ಹಾರೈಸಿದರು. <br /> <br /> ಚಂದಾಪುರದ ಚಿನ್ಮಯ ಯುವಜನ ಸಂಘ ಮತ್ತು ಟಿ.ನರಸೀಪುರ ಬಡಾವಣೆಯ ಮಾರ್ಗದರ್ಶಿ ಯುವತಿ ಮಂಡಳಿಗೆ 2009-10ನೇ ಸಾಲಿನ ಸಾಂಘಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು 10 ಸಾವಿರ ರೂಪಾಯಿಯನ್ನು ಒಳಗೊಂಡಿದೆ. ಕೂಟದಲ್ಲಿ ಸುಮಾರು 300 ಕ್ರೀಡಾಳುಗಳು ಭಾಗವಹಿಸಿದ್ದರು. <br /> <br /> ಪಾಲಿಕೆಯ ಸದಸ್ಯ ರಂಗಣ್ಣ, ಕರ್ನಾಟಕ ಅಥ್ಲೆಟಿಕ್ ಸಂಸ್ಥೆಯ ಕಾರ್ಯದರ್ಶಿ ಕೆ.ಸತ್ಯನಾರಾಯಣ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಯು.ಈರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>