<p><strong>ಮಡಿಕೇರಿ: </strong>ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಮೆರವಣಿಗೆ ದಿನದಂದು (ಅ.6) ಪಟಾಕಿ ಹೊಡೆಯುವುದನ್ನು ಹಾಗೂ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ. <br /> <br /> ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರದ ಕೋಟೆ ವಿಧಾನಸಭಾಂಗಣದಲ್ಲಿ ನಡೆದ ದಸರಾ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. <br /> <br /> ದಸರಾ ಉತ್ಸವ ಸಮಿತಿ, ದಶಮಂಟಪಗಳ ಸಮಿತಿ ಸೇರಿದಂತೆ ಸಭೆಯಲ್ಲಿ ಹಾಜರಿದ್ದ ಎಲ್ಲ ಸಾರ್ವಜನಿಕರೂ ತೀರ್ಮಾನಕ್ಕೆ ಧ್ವನಿಗೂಡಿಸಿದರು. <br /> <br /> ಸಭೆಯ ಆರಂಭದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ ಅವರು, ಉತ್ಸವಕ್ಕೆ ಸರ್ಕಾರ ನೀಡಿರುವ ರೂ 50 ಲಕ್ಷ ಅನುದಾನ ತಲುಪಿದೆ. ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದರು.<br /> <br /> ದಸರಾ ಉತ್ಸವದಲ್ಲಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರ ಜೊತೆ ಜಿಲ್ಲೆಯ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್, ಗೃಹ ಸಚಿವ ಆರ್. ಅಶೋಕ, ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ಇತರರು ಭಾಗವಹಿಸಲಿದ್ದಾರೆ ಎಂದರು.<br /> <br /> ಚಿದ್ವಿಲಾಸ್ ಅವರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಕ್ಷಿಪ್ತವಾಗಿ, ಸ್ಪಷ್ಟವಾಗಿ ಸಭೆಗೆ ವಿವರಿಸಿದರು.<br /> <br /> ಜಿಲ್ಲೆಯ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್ ಮಾತನಾಡಿ, ದಸರಾ ಉತ್ಸವದ ಸಂದರ್ಭ ನಗರದ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಬೇಕು ಎಂದು ಸೂಚಿಸಿದರು.<br /> <br /> ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಪಟಾಕಿ ಹಾಗೂ ಮದ್ಯ ನಿಷೇಧಿಸಿರುವುದನ್ನು ಸಾರ್ವಜನಿಕರು ಚಾಚೂ ತಪ್ಪದೇ ಪಾಲಿಸಬೇಕು ಎಂದರು.<br /> <br /> ಇಂಧನ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಮುಂದಿನ ದಿನಗಳಲ್ಲಿ ಮೈಸೂರು ದಸರಾಗೆ ನೀಡಿದ ಪ್ರಚಾರ ಹಾಗೂ ಪ್ರಾಮುಖ್ಯತೆಯನ್ನು ಮಡಿಕೇರಿ ದಸರಾಗೂ ನೀಡಲಾಗುವುದು. ದಶಮಂಟಪಗಳ ಮೆರವಣಿಗೆ ದಿನ ವಿದ್ಯುತ್ ಕಡಿತಗೊಳಿಸದಿರಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.<br /> <br /> <strong>ಅಮಾನತಿಗೆ ಸೂಚನೆ </strong><br /> ನಾಡಹಬ್ಬವಾಗಿರುವ ದಸರಾ ಉತ್ಸವ ಆಚರಣೆಯ ಮಹತ್ವದ ಜವಾಬ್ದಾರಿ ಹೊಂದಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೊಡಗು ಜಿಲ್ಲೆಯ ಸಹಾಯಕ ನಿರ್ದೇಶಕರು ದಸರಾ ಉತ್ಸವ ಆಚರಣೆಯ ಪೂರ್ವಭಾವಿ ಸಭೆಗೆ ಗೈರುಹಾಜರಾದುದನ್ನು ಕಂಡು ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರು ಕೆಂಡಾಮಂಡಲರಾದರು. <br /> <br /> ಇಂತಹ ಮಹತ್ವದ ಸಭೆಗೆ ಗೈರುಹಾಜರಾದ ಅವರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಅವರ ಪಕ್ಕದಲ್ಲಿ ಆಸೀನರಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್ ಅವರನ್ನು ಕೋರಿದರು. <br /> ಈಗಾಗಲೇ ಹಲವು ಬಾರಿ ಇಂತಹ ಅಶಿಸ್ತು ಪ್ರದರ್ಶಿಸಿರುವ ಈ ಅಧಿಕಾರಿಗೆ ಷೋಕಾಸ್ ನೋಟಿಸ್ ಸಹ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್ ಸಭೆಯ ಗಮನಕ್ಕೆ ತಂದರು. <br /> <br /> <strong>ಸಭೆಯಲ್ಲಿ ತೀರ್ಮಾನವಾದ ಅಂಶಗಳು</strong><br /> * ದಸರಾ ಮೆರವಣಿಗೆ ದಿನ ನಗರದಲ್ಲಿ ವಿವಿಧೆಡೆ 8 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು.<br /> * ರಾಜಾ ಸೀಟ್ನಲ್ಲಿ ಪುಷ್ಪಾಲಂಕಾರ ಹಾಗೂ ವಿದ್ಯುದ್ದೀಕರಣ ಮತ್ತು ಸಂಗೀತ ಕಾರಂಜಿ ಏರ್ಪಾಡವಾಗಲಿದೆ.<br /> * ಅಬ್ಬಿಫಾಲ್ಸ್ನಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸುವುದು.<br /> * ಸುದರ್ಶನ ವೃತ್ತದಿಂದ ಜಿ.ಟಿ. ವೃತ್ತದವರೆಗೆ ರಸ್ತೆಯನ್ನು ಅಭಿವೃದ್ಧಿಸಲು ಕೆಆರ್ಡಿಸಿಎಲ್ಗೆ ಸೂಚಿಸಲಾಯಿತು.<br /> * 40 ಹೆಚ್ಚುವರಿ ಬಸ್ ವ್ಯವಸ್ಥೆ.<br /> * ಪ್ರವಾಸಿಗರ ಮಾಹಿತಿ ಕೇಂದ್ರ ಸ್ಥಾಪಿಸಲು ಪ್ರವಾಸೋದ್ಯಮ ಇಲಾಖೆಗೆ ಸೂಚನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಮೆರವಣಿಗೆ ದಿನದಂದು (ಅ.6) ಪಟಾಕಿ ಹೊಡೆಯುವುದನ್ನು ಹಾಗೂ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ. <br /> <br /> ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರದ ಕೋಟೆ ವಿಧಾನಸಭಾಂಗಣದಲ್ಲಿ ನಡೆದ ದಸರಾ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. <br /> <br /> ದಸರಾ ಉತ್ಸವ ಸಮಿತಿ, ದಶಮಂಟಪಗಳ ಸಮಿತಿ ಸೇರಿದಂತೆ ಸಭೆಯಲ್ಲಿ ಹಾಜರಿದ್ದ ಎಲ್ಲ ಸಾರ್ವಜನಿಕರೂ ತೀರ್ಮಾನಕ್ಕೆ ಧ್ವನಿಗೂಡಿಸಿದರು. <br /> <br /> ಸಭೆಯ ಆರಂಭದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ ಅವರು, ಉತ್ಸವಕ್ಕೆ ಸರ್ಕಾರ ನೀಡಿರುವ ರೂ 50 ಲಕ್ಷ ಅನುದಾನ ತಲುಪಿದೆ. ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದರು.<br /> <br /> ದಸರಾ ಉತ್ಸವದಲ್ಲಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರ ಜೊತೆ ಜಿಲ್ಲೆಯ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್, ಗೃಹ ಸಚಿವ ಆರ್. ಅಶೋಕ, ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ಇತರರು ಭಾಗವಹಿಸಲಿದ್ದಾರೆ ಎಂದರು.<br /> <br /> ಚಿದ್ವಿಲಾಸ್ ಅವರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಕ್ಷಿಪ್ತವಾಗಿ, ಸ್ಪಷ್ಟವಾಗಿ ಸಭೆಗೆ ವಿವರಿಸಿದರು.<br /> <br /> ಜಿಲ್ಲೆಯ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್ ಮಾತನಾಡಿ, ದಸರಾ ಉತ್ಸವದ ಸಂದರ್ಭ ನಗರದ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಬೇಕು ಎಂದು ಸೂಚಿಸಿದರು.<br /> <br /> ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಪಟಾಕಿ ಹಾಗೂ ಮದ್ಯ ನಿಷೇಧಿಸಿರುವುದನ್ನು ಸಾರ್ವಜನಿಕರು ಚಾಚೂ ತಪ್ಪದೇ ಪಾಲಿಸಬೇಕು ಎಂದರು.<br /> <br /> ಇಂಧನ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಮುಂದಿನ ದಿನಗಳಲ್ಲಿ ಮೈಸೂರು ದಸರಾಗೆ ನೀಡಿದ ಪ್ರಚಾರ ಹಾಗೂ ಪ್ರಾಮುಖ್ಯತೆಯನ್ನು ಮಡಿಕೇರಿ ದಸರಾಗೂ ನೀಡಲಾಗುವುದು. ದಶಮಂಟಪಗಳ ಮೆರವಣಿಗೆ ದಿನ ವಿದ್ಯುತ್ ಕಡಿತಗೊಳಿಸದಿರಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.<br /> <br /> <strong>ಅಮಾನತಿಗೆ ಸೂಚನೆ </strong><br /> ನಾಡಹಬ್ಬವಾಗಿರುವ ದಸರಾ ಉತ್ಸವ ಆಚರಣೆಯ ಮಹತ್ವದ ಜವಾಬ್ದಾರಿ ಹೊಂದಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೊಡಗು ಜಿಲ್ಲೆಯ ಸಹಾಯಕ ನಿರ್ದೇಶಕರು ದಸರಾ ಉತ್ಸವ ಆಚರಣೆಯ ಪೂರ್ವಭಾವಿ ಸಭೆಗೆ ಗೈರುಹಾಜರಾದುದನ್ನು ಕಂಡು ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರು ಕೆಂಡಾಮಂಡಲರಾದರು. <br /> <br /> ಇಂತಹ ಮಹತ್ವದ ಸಭೆಗೆ ಗೈರುಹಾಜರಾದ ಅವರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಅವರ ಪಕ್ಕದಲ್ಲಿ ಆಸೀನರಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್ ಅವರನ್ನು ಕೋರಿದರು. <br /> ಈಗಾಗಲೇ ಹಲವು ಬಾರಿ ಇಂತಹ ಅಶಿಸ್ತು ಪ್ರದರ್ಶಿಸಿರುವ ಈ ಅಧಿಕಾರಿಗೆ ಷೋಕಾಸ್ ನೋಟಿಸ್ ಸಹ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್ ಸಭೆಯ ಗಮನಕ್ಕೆ ತಂದರು. <br /> <br /> <strong>ಸಭೆಯಲ್ಲಿ ತೀರ್ಮಾನವಾದ ಅಂಶಗಳು</strong><br /> * ದಸರಾ ಮೆರವಣಿಗೆ ದಿನ ನಗರದಲ್ಲಿ ವಿವಿಧೆಡೆ 8 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು.<br /> * ರಾಜಾ ಸೀಟ್ನಲ್ಲಿ ಪುಷ್ಪಾಲಂಕಾರ ಹಾಗೂ ವಿದ್ಯುದ್ದೀಕರಣ ಮತ್ತು ಸಂಗೀತ ಕಾರಂಜಿ ಏರ್ಪಾಡವಾಗಲಿದೆ.<br /> * ಅಬ್ಬಿಫಾಲ್ಸ್ನಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸುವುದು.<br /> * ಸುದರ್ಶನ ವೃತ್ತದಿಂದ ಜಿ.ಟಿ. ವೃತ್ತದವರೆಗೆ ರಸ್ತೆಯನ್ನು ಅಭಿವೃದ್ಧಿಸಲು ಕೆಆರ್ಡಿಸಿಎಲ್ಗೆ ಸೂಚಿಸಲಾಯಿತು.<br /> * 40 ಹೆಚ್ಚುವರಿ ಬಸ್ ವ್ಯವಸ್ಥೆ.<br /> * ಪ್ರವಾಸಿಗರ ಮಾಹಿತಿ ಕೇಂದ್ರ ಸ್ಥಾಪಿಸಲು ಪ್ರವಾಸೋದ್ಯಮ ಇಲಾಖೆಗೆ ಸೂಚನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>