<p><strong>ನವದೆಹಲಿ (ಪಿಟಿಐ):</strong> 2ಜಿ ತರಂಗಾಂತರ ಹಗರಣದಲ್ಲಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಭಾಗಿಯಾಗಿದ್ದೆಂಬ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ತಾವು ಸಿಬಿಐಗೆ ಸಲ್ಲಿಸಿದ್ದ ಎಲ್ಲಾ ಮನವಿ, ಅರ್ಜಿಗಳನ್ನು ಕೋರ್ಟ್ಗೆ ಒದಗಿಸುವಂತೆ ಸುಪ್ರಿಂಕೋರ್ಟ್ ಗುರುವಾರ ಜನತಾ ಪಕ್ಷದ ಸುಬ್ರಮಣಿಯನ್ ಸ್ವಾಮಿ ಅವರಿಗೆ ಹೇಳಿದೆ<br /> <br /> ಮೊದಲು ಈ ದಾಖಲೆಗಳನ್ನು ಪರಿಶೀಲಿಸಿ ಅಗತ್ಯವಾದಲ್ಲಿ ಸಿಬಿಐನಿಂದ ಮತ್ತು ಸರ್ಕಾರದಿಂದ ಪ್ರತಿಕ್ರಿಯೆ ಕೇಳಲಾಗುವುದು ಎಂದು ಕೋರ್ಟ್ ತಿಳಿಸಿದೆ.`ಸಿಬಿಐಗೆ ನೀವು ಸಲ್ಲಿಸಿದ ಮನವಿಗಳ ಬಗ್ಗೆ ದಾಖಲೆಗಳನ್ನು ಒದಗಿಸಿ~ ಎಂದು ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಮತ್ತು ಎ.ಕೆ. ಗಂಗೂಲಿ ಅವರನ್ನು ಒಳಗೊಂಡ ಪೀಠ ಹೇಳಿದೆ. ಅಲ್ಲದೆ ಅಗತ್ಯ ದಾಖಲೆಗಳೊಂದಿಗೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸುವಂತೆಯೂ ಸೂಚಿಸಿದೆ.<br /> <br /> ಆದರೆ ಸರ್ಕಾರ, ಸ್ವಾಮಿಯವರ ಮನವಿ ವಿರೋಧಿಸಿ ಅವರು ಯಾವುದೇ ಪುರಾವೆ ಹೊಂದಿದ್ದರೆ ಅದನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮುಂದೆ ಹಾಜರುಪಡಿಸಲಿ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> 2ಜಿ ತರಂಗಾಂತರ ಹಗರಣದಲ್ಲಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಭಾಗಿಯಾಗಿದ್ದೆಂಬ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ತಾವು ಸಿಬಿಐಗೆ ಸಲ್ಲಿಸಿದ್ದ ಎಲ್ಲಾ ಮನವಿ, ಅರ್ಜಿಗಳನ್ನು ಕೋರ್ಟ್ಗೆ ಒದಗಿಸುವಂತೆ ಸುಪ್ರಿಂಕೋರ್ಟ್ ಗುರುವಾರ ಜನತಾ ಪಕ್ಷದ ಸುಬ್ರಮಣಿಯನ್ ಸ್ವಾಮಿ ಅವರಿಗೆ ಹೇಳಿದೆ<br /> <br /> ಮೊದಲು ಈ ದಾಖಲೆಗಳನ್ನು ಪರಿಶೀಲಿಸಿ ಅಗತ್ಯವಾದಲ್ಲಿ ಸಿಬಿಐನಿಂದ ಮತ್ತು ಸರ್ಕಾರದಿಂದ ಪ್ರತಿಕ್ರಿಯೆ ಕೇಳಲಾಗುವುದು ಎಂದು ಕೋರ್ಟ್ ತಿಳಿಸಿದೆ.`ಸಿಬಿಐಗೆ ನೀವು ಸಲ್ಲಿಸಿದ ಮನವಿಗಳ ಬಗ್ಗೆ ದಾಖಲೆಗಳನ್ನು ಒದಗಿಸಿ~ ಎಂದು ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಮತ್ತು ಎ.ಕೆ. ಗಂಗೂಲಿ ಅವರನ್ನು ಒಳಗೊಂಡ ಪೀಠ ಹೇಳಿದೆ. ಅಲ್ಲದೆ ಅಗತ್ಯ ದಾಖಲೆಗಳೊಂದಿಗೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸುವಂತೆಯೂ ಸೂಚಿಸಿದೆ.<br /> <br /> ಆದರೆ ಸರ್ಕಾರ, ಸ್ವಾಮಿಯವರ ಮನವಿ ವಿರೋಧಿಸಿ ಅವರು ಯಾವುದೇ ಪುರಾವೆ ಹೊಂದಿದ್ದರೆ ಅದನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮುಂದೆ ಹಾಜರುಪಡಿಸಲಿ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>